ಎರಡನೇ ದಿನ 10 ಜಿಲ್ಲೆಯ ಶಾಸಕ, ಸಚಿವರ ಜೊತೆ ಸಿಎಂ ಸಭೆ

Public TV
1 Min Read
CM Siddaramaiah Meeting

ಬೆಂಗಳೂರು: ಜಿಲ್ಲಾವಾರು ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ವಿಧಾನಸೌಧದಲ್ಲಿ ಎರಡನೇ ದಿನದ ಸಭೆ ನಡೆಸುತ್ತಿದ್ದಾರೆ.

ವಿಧಾನಸೌಧದ ಮೂರನೆ ಮಹಡಿಯ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ ಬೆಳಗ್ಗೆ 11 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಣಿ ಸಭೆ ನಡೆಸಲಿದ್ದಾರೆ. ಇಂದು ಒಟ್ಟು 10 ಜಿಲ್ಲೆಯ ಕಾಂಗ್ರೆಸ್‌ನ (Congress) ಶಾಸಕರು ಹಾಗೂ ಸಚಿವರ ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11 ರಿಂದ ಮಧ್ಯಾಹ್ನ 02:30ರವರೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ,ವಿಜಯನಗರ, ಬಳ್ಳಾರಿ ಜಿಲ್ಲೆಯ ಶಾಸಕರ ಜೊತೆ ಸಭೆ ನಡೆಯಲಿದೆ. ಇದನ್ನೂ ಓದಿ: ರಷ್ಯಾದಲ್ಲಿ ಪ್ರಭಲ ಭೂಕಂಪ – ಸುನಾಮಿ ಅಲೆಯಿಂದ ಬಂದರು ನಗರಿ ಜಲಾವೃತ

ಸಂಜೆ 4 ರಿಂದ ರಾತ್ರಿ 7 ಗಂಟೆವರೆಗೆ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಸಕರು ಹಾಗೂ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಹೊಣೆಯನ್ನ ಟಿಆರ್‌ಎಫ್ 2 ಬಾರಿ ಹೊತ್ತುಕೊಂಡಿದೆ: ವಿಶ್ವಸಂಸ್ಥೆ

Share This Article