ತೆಂಗು ಮತ್ತು ಮೆಕ್ಕೆಜೋಳಕ್ಕೆ ರೋಗ – ವಿಶೇಷ ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಸಂಸದ ಶ್ರೇಯಸ್ ಪಟೇಲ್ ಒತ್ತಾಯ

Public TV
1 Min Read
Shreyas Patel

ನವದೆಹಲಿ: ಹಾಸನ (Hassan) ಜಿಲ್ಲೆಯಲ್ಲಿ ತೆಂಗು (Coconut) ಮತ್ತು ಮೆಕ್ಕೆಜೋಳ (Maize) ಕೃಷಿ ರೋಗಗಳಿಂದ ಹೆಚ್ಚು ಬಾಧಿತವಾಗುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್ (Shreyas Patel) ಮನವಿ ಮಾಡಿದ್ದಾರೆ.

ಲೋಕಸಭೆಯ (Lok Sabha) ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಫಂಗಲ್ ಕಾಯಿಲೆಯಿಂದ ಮೆಕ್ಕೆಜೋಳಕ್ಕೆ ಭಾರೀ ಹಾನಿ ಆಗಿದೆ. 45 ಸಾವಿರ ಹೆಕ್ಟೇರ್ ಪೈಕಿ 12 ಸಾವಿರ ಹೆಕ್ಟೇರ್ ಈಗಾಗಲೇ ಹಾನಿಗೀಡಾಗಿದೆ. ಐಸಿಎಆರ್ ಸರ್ವೆ ಮಾಡಿ ಪರಿಹಾರ ಕೊಡಬೇಕು ಎಂದು ಸಲಹೆ ನೀಡಿದೆ. ಇದನ್ನೂ ಓದಿ: Tumakuru | ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ತೆಂಗು ಬೆಳೆ ನನ್ನ ಜಿಲ್ಲೆಯಲ್ಲಿಯೇ ಹೆಚ್ಚಾಗಿದೆ. 1.18 ಲಕ್ಷ ಹೆಕ್ಟೇರ್ ಚನ್ನರಾಯಪಟ್ಟಣ ಹಾಗೂ ಅರಸೀಕೆರೆ ತಾಲೂಕಿನಲ್ಲಿ 82 ಸಾವಿರ ಹೆಕ್ಟೇರ್ ರೋಗಪೀಡಿತವಾಗಿದೆ. ತೆಂಗು ಅಭಿವೃದ್ಧಿ ಮಂಡಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಇದನ್ನೂ ಓದಿ: ಡಿಕೆಶಿ ಭರವಸೆ ನೀಡಿದ್ದಾರೆ, ನಾನೇ ಮುಂದಿನ KMF ಅಧ್ಯಕ್ಷ: ನಂಜೇಗೌಡ

Share This Article