– ಕಾರಾಗೃಹ ಎಡಿಜಿಪಿಯಾಗಿ ಬಿ.ದಯಾನಂದ್ ನಿಯೋಜನೆ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ವಿಕಾಸ್ ಕುಮಾರ್ ವಿಕಾಸ್ ಮೇಲಿನ ಅಮಾನತನ್ನು ಸರ್ಕಾರ ವಾಪಸ್ ಪಡೆದಿದೆ.
ವಿಕಾಸ್ ಕುಮಾರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಐಜಿಪಿ ಆಗಿ ನಿಯೋಜನೆ ಮಾಡಿದೆ. ಅಲ್ಲದೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ಗೆ ಎಡಿಜಿಪಿ ಕಾರಾಗೃಹ, ಕೇಂದ್ರ ವಿಭಾಗ ಡಿಸಿಪಿಯಾಗಿದ್ದ ಶೇಖರ್ರಿಗೆ ಗುಪ್ತಚರ ಇಲಾಖೆ ಎಸ್ಪಿಯಾಗಿ ಸ್ಥಳ ನಿಯೋಜನೆ ಮಾಡಲಾಗಿದೆ.
ಆರ್ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತವಾಗಿ 11 ಜನ ಸಾವನ್ನಪ್ಪಿದ್ದರು.