Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

Court

ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

Public TV
Last updated: August 1, 2025 4:12 pm
Public TV
Share
2 Min Read
ED Enforcement Directorate
SHARE

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ನೀಡುವ ಮಾಹಿತಿ ನಿಖರವಾಗಿರಬೇಕು. ಈ ಮೂಲಕ ಇ.ಡಿ (ED) ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ (Rouse Avenue Court) ಎಚ್ಚರಿಸಿದೆ.

ಈ ಕುರಿತು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಮಾತನಾಡಿ, ಇ.ಡಿ ವಾಸ್ತವ ಅಂಶಗಳನ್ನು ನೀಡುವಾಗ ದಾರಿತಪ್ಪಿಸುವ ರೀತಿಯಲ್ಲಿ ಅಥವಾ ಮಾನಹಾನಿ ಮಾಡುವ ರೀತಿಯಲ್ಲಿರಬಾರದು. ಒಂದು ವೇಳೆ ಹಾಗೆ ಮಾಡಿದರೆ ಅದು ಸಂಸ್ಥೆಯ ಘನತೆಗೆ ಧಕ್ಕೆ ಬರುತ್ತದೆ. ಜೊತೆಗೆ ಸಂಬಂಧಪಟ್ಟ ವ್ಯಕ್ತಿಯ ಘನತೆಯ ಮೇಲೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ ವಿರುದ್ಧ ಸಂಸದ ಸುಧಾಕರ್‌ ಸವಾಲ್‌

ಇ.ಡಿಯಂತಹ ತನಿಖಾ ಸಂಸ್ಥೆಯು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದು ಹಾಗೂ ನ್ಯಾಯಯುತ, ಸಮಂಜಸ ಪ್ರಕ್ರಿಯೆಗಳನ್ನು ನಡೆಸುವ ಜವಾಬ್ದಾರಿ ಹೊಂದಿರುತ್ತದೆ. ಅದಲ್ಲದೇ ಇ.ಡಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳುವ ಮಾಹಿತಿಯೂ ನಿಖರವಾಗಿರಬೇಕು. ದಾರಿತಪ್ಪಿಸದ ಹಾಗೂ ರೋಚಕತೆಯಿಂದ ಮುಕ್ತವಾಗಿರಬೇಕು. ರಾಜಕೀಯವಾಗಿ ಪಕ್ಷಪಾತ ಮಾಡುವ ಉದ್ದೇಶದಿಂದ ಯಾವುದೇ ವಿಷಯವನ್ನು ಹಂಚಿಕೊಳ್ಳುವುದರಿಂದ ಸಂಸ್ಥೆಯ ಸಮಗ್ರತೆ ಹಾಳಾಗುತ್ತದೆ ಎಂದಿದ್ದಾರೆ.

ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ತಿರಸ್ಕರಿಸಿ, ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ಬಾನ್ಸುರಿ ಸ್ವರಾಜ್ ಅವರು ಜೈನ್ ಅವರ ಮನೆಯಿಂದ ಇ.ಡಿಯು 1.8 ಕೆಜಿ ಚಿನ್ನ, 133 ಚಿನ್ನದ ನಾಣ್ಯಗಳು ಮತ್ತು 3 ಕೋಟಿ ರೂ. ನಗದು ವಶಪಡಿಸಿಕೊಂಡಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆ ಬಾನ್ಸುರಿ ಅವರ ವಿರುದ್ಧ ಜೈನ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇ.ಡಿಯು ತನ್ನ ಎಕ್ಸ್ ಖಾತೆಯಲ್ಲಿ, 2022ರ ಜೂ.6ರಂದು ಪಿಎಂಎಲ್‌ಎ ಅಡಿಯಲ್ಲಿ ಸತ್ಯೇಂದರ್ ಜೈನ್ ಮತ್ತು ಇತರರ ಮನೆಯಲ್ಲಿ ಶೋಧ ನಡೆಸಿದೆ. ಈ ವೇಳೆ ವಿವಿಧ ಶಂಕಾಸ್ಪದ ದಾಖಲೆಗಳು, ಡಿಜಿಟಲ್ ದಾಖಲೆಗಳು ಸೇರಿದಂತೆ 2.85 ಕೋಟಿ ರೂ. ನಗದು ಮತು ಒಟ್ಟು 1.80 ಕೆಜಿ ತೂಕದ 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬರೆದುಕೊಂಡಿತ್ತು.

ಈ ಕುರಿತು ಜೈನ್ ಅವರು ಮಾತನಾಡಿ, ನಮ್ಮ ಮನೆಯಿಂದ ಇ.ಡಿಯು ಯಾವುದೇ ನಗದು ಅಥವಾ ಚಿನ್ನವನ್ನು ವಶಪಡಿಸಿಕೊಂಡಿಲ್ಲ. ಇ.ಡಿ ನಡೆಸಿರುವ ಪಂಚನಾಮೆಯಲ್ಲಿಯೂ ಈ ಅಂಶ ಸ್ಪಷ್ಟವಾಗಿ ದಾಖಲಾಗಿದೆ. ಆದಾಗ್ಯೂ ಬಾನ್ಸುರಿ ಸ್ವರಾಜ್ ಅವರು ನಮ್ಮ ಮನೆಯಿಂದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ ಎಂದು ಆಪಾದಿಸಿದ್ದರು.

ಪ್ರಕರಣವನ್ನು ಪರಿಗಣಿಸಿದ ನ್ಯಾಯಾಧೀಶರು, ಇ.ಡಿ ಹಂಚಿಕೊಂಡಿರುವ ಟ್ವೀಟ್‌ನ್ನು ಗಮನಿಸಿದರೆ ನಿಜಕ್ಕೂ ಜೈನ್ ಅವರ ಮನೆಯಿಂದ ಹಣ ವಶಪಡಿಸಿಕೊಂಡಿದ್ದಾರೆ ಎನ್ನಿಸುತ್ತದೆ. ಹೀಗಾಗಿ ಬಾನ್ಸುರಿ ಸ್ವರಾಜ್ ವಿರುದ್ಧ ಜೈನ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೇ ವೇಳೆ ನ್ಯಾಯಾಧೀಶರು, ಇಂತಹ ವಿಷಯದಲ್ಲಿ ಜಾಗೃತಿ ವಹಿಸಿ ಎಂದು ಇ.ಡಿಗೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

TAGGED:defamation suitDelhi courtEDRouse Avenue Courtಇ.ಡಿರೋಸ್ ಅವೆನ್ಯೂ ಕೋರ್ಟ್
Share This Article
Facebook Whatsapp Whatsapp Telegram

Cinema news

Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post
kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories

You Might Also Like

T20 World Cup ICC votes to replace Bangladesh if it doesnt play in India
Cricket

ಟಿ20 ವಿಶ್ವಕಪ್‌ | ಪಾಕ್‌ ಜಾಗದಲ್ಲಿ ಆಡುತ್ತಾ ಬಾಂಗ್ಲಾದೇಶ?

Public TV
By Public TV
46 minutes ago
Dharmendra Pradhan
Latest

ಯಾವುದೇ ತಾರತಮ್ಯ ಮಾಡಲ್ಲ, ಕಾನೂನು ದುರುಪಯೋಗಪಡಿಸಲು ಸಾಧ್ಯವಿಲ್ಲ – UGC ಹೊಸ ನಿಯಮಕ್ಕೆ ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ

Public TV
By Public TV
1 hour ago
Pariksha Pe charcha
Latest

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ದಾಖಲೆಯ 6.76 ಕೋಟಿ ಅಭ್ಯರ್ಥಿಗಳು ನೋಂದಣಿ

Public TV
By Public TV
2 hours ago
Shakeel Ahmad Rahul Gandhi
Latest

ರಾಹುಲ್ ಹೇಡಿ, ಅಂಜುಬುರುಕ ಎಂದ ಮುಸ್ಲಿಂ ಕೈ ನಾಯಕನಿಗೆ ಈಗ ಬೆದರಿಕೆ ಕರೆ

Public TV
By Public TV
2 hours ago
hd kumaraswamy 1 1
Automobile

ನಾಗಾಲೋಟದಲ್ಲಿ ಬೆಳವಣಿಗೆ ಸಾಧಿಸುತ್ತಿದೆ ದೇಶಿಯ ಆಟೋಮೊಬೈಲ್‌ ಕ್ಷೇತ್ರ : ಹೆಚ್‌ಡಿಕೆ

Public TV
By Public TV
2 hours ago
Pitbull dog
Latest

ಟ್ರಕ್ಕಿಂಗ್‌ನಲ್ಲಿ ಹಿಮಪಾತದಿಂದ ಬಾಲಕ ಸಾವು – ಊಟ, ನೀರಿಲ್ಲದೇ 4 ದಿನ ಶವದ ಪಕ್ಕದಲ್ಲೇ ಇದ್ದ ನಾಯಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?