ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ: ಬಿ.ಕೆ ಹರಿಪ್ರಸಾದ್‌ ಬಾಂಬ್‌

Public TV
2 Min Read
BK Hariprasad

– ಬಿಜೆಪಿ, ಚುನಾವಣಾ ಆಯೋಗದ ವಿರುದ್ಧ ಹರಿಪ್ರಸಾದ್ ಕೆಂಡಾಮಂಡಲ

ಮಡಿಕೇರಿ: ಇಡೀ ರಾಷ್ಟ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ (Voter List Scam) ನಡೆದಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ (BK Hariprasad) ಬಾಂಬ್‌ ಸಿಡಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ – ಬಂಧಿತರು ದರ್ಶನ್‌ ಅಭಿಮಾನಿಗಳೇ‌ ಅಂತ ಪರಿಶೀಲಿಸ್ತಿದ್ದೇವೆ: ಸೀಮಂತ್‌ ಕುಮಾರ್‌ ಸಿಂಗ್‌

Siddaramaiah Rahul Gandhi

ಕಳ್ಳ ಪಟ್ಟಿ ಸೃಷ್ಟಿಸಿ ವೋಟ್‌ ಹಾಕಿಸಿಕೊಂಡಿದ್ದಾರೆ:
ರಾಜ್ಯದಲ್ಲಿ ಮಾತ್ರವಲ್ಲ ಇಡೀ ರಾಷ್ಟ್ರದಲ್ಲೇ ಮತದಾರರ ಪಟ್ಟಿಯಲ್ಲಿ (Voter List) ಅಕ್ರಮ ಮಾಡಿರುವುದು ಕಂಡುಬರುತ್ತಿದೆ. ಚುನಾವಣಾ ಆಯೋಗ ಅಂತೂ ನಾವು ಪಕ್ಷ ಸೇರಲ್ಲ, ಹೊರಗೆ ನಿಂತು ಬೆಂಬಲ ಕೋಡುತ್ತೇವೆ ಅನ್ನೋ ಪರಿಸ್ಥಿತಿಗೆ ಬಂದಿದೆ. ಮಹಾರಾಷ್ಟ್ರದಲ್ಲಿ ಲೋಕಸಭಾ (Lok Sabha Electrion) ಹಾಗೂ ವಿಧಾನಸಭಾ ಚುನಾವಣೆ ನಡೆಯುವ ಸಮಯದಲ್ಲಿ ಸುಮಾರು 60 ಲಕ್ಷ ಮತದಾರರ ಸಂಖ್ಯೆ ಜಾಸ್ತಿಯಾಗಿದೆ. ಹರಿಯಾಣದಲ್ಲೂ ಅದೇ ಪರಿಸ್ಥಿತಿ ಇದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲೂ ಮತಗಳ್ಳತನ ಮಾಡಿದ್ದಾರೆ. ಕಳ್ಳ ಮತದಾರರ ಪಟ್ಟಿ ಸೃಷ್ಟಿ ಮಾಡಿ ಮತಗಳನ್ನ ಹಾಕಿಸಿಕೊಂಡಿರುವುದು ಕಂಡುಬಂದಿದೆ‌‌. ಹಾಗಾಗಿ ರಾಹುಲ್‌ ಗಾಂಧಿ ಅವರೇ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ʻಕಾಂಗ್ರೆಸ್‌ ಗೆದ್ದಾಗ ಮತದಾರರ ಪಟ್ಟಿ ದುರುಪಯೋಗ ಆಗಿಲ್ವಾ?ʼ ಎಂಬ ಬಿಜೆಪಿಗರ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್‌ 136 ಹಾಗೂ 140 ಸ್ಥಾನ ಗೆದ್ದಿದ್ದೇವೆ. ಆದ್ರೆ ಕೆಲ ಭಾಗದಲ್ಲಿ ವಲಸಿಗರು ಜಾಸ್ತಿ ಇದ್ದಾರೆ. ಅವರನ್ನ ದುರುಪಯೋಗ ಮಾಡಿಕೊಂಡು ಮತದಾನ ಮಾಡಿಸಿದ್ದಾರೆ. ಬೆಂಗಳೂರಿನ ರಾಜಾಜೀನಗರ, ಮಹದೇವಪುರದಲ್ಲಿ ಇನ್ನೂ ಕೆಲ ಭಾಗಗಳಲ್ಲಿ ಅಕ್ರಮ ನಡೆಸಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಕೋಮುವಾದ ಹರಡಲು ಯತ್ನಿಸಿದ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ನೀಡಿರೋದು ಭಾರತ ಚಿತ್ರರಂಗಕ್ಕೆ ಅವಮಾನ: ಪಿಣರಾಯಿ ವಿಜಯನ್

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಸೋತ್ತಿರುವುದು 33,000 ಸಾವಿರದಲ್ಲಿ ಮಾತ್ರ, ಅದು ಹೊರಗಡೆ ಬಂದಾಗ ಗೋತ್ತಾಗುತ್ತೆ. ಒಂದೇ ಮನೆಯಲ್ಲಿ 1,000 ಮತ ತೋರಿಸಿದಾಗ ಅಕ್ರಮ ಅಲ್ಲದೇ ಬೇರೇನು ಗೊತ್ತಾಗುತ್ತೆ ಅಂತಲೂ ಬಿಜೆಪಿ ವಿರುದ್ಧ ಕುಟುಕಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಯಿಂದ ನೀರಿನ ಮಟ್ಟ ದಿಢೀರ್‌ ಏರಿಕೆ – ಡ್ಯಾಂ ಕುಸಿತ

ಇದೇ ವೇಳೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ದೇಶದಲ್ಲಿ ಕಾನೂನು ಸಂವಿಧಾನ ಇದೆ. ಅದರ ಅಡಿಯಲ್ಲಿ ತನಿಖೆ ನಡೆಯುತ್ತಿದೆ, ಈ ಸಂದರ್ಭ ಪ್ರತಿಕ್ರಿಯೆ ಕೊಡೋದು ತಪ್ಪಾಗುತ್ತೆ. ತನಿಖೆಯ ಬಳಿಕ ಸುಳ್ಳು ಯಾವುದು, ಸತ್ಯ ಯಾವುದು ಗೊತ್ತಾಗುತ್ತೆ. ಅಲ್ಲಿಯವರೆಗೆ ಎಲ್ಲರೂ ತಾಳ್ಮೆಯಿಂದ ಕಾಯಬೇಕು ಎಂದು ತಿಳಿಸಿದ್ರು. ಇದನ್ನೂ ಓದಿ: ವಾರಣಾಸಿ | 2,200 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Share This Article