Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವಿಶ್ವವಿಖ್ಯಾತ ಮೈಸೂರು ದಸರಾಗೆ ಮೊದಲ ಹಂತದ ಗಜಪಯಣಕ್ಕೆ ಚಾಲನೆ

Public TV
Last updated: August 4, 2025 6:55 pm
Public TV
Share
4 Min Read
Mysuru Dasara Gajapayana
SHARE

-ವನ್ಯಜೀವಿಗಳ ಸಂರಕ್ಷಣೆಗೆ ಈಶ್ವರ ಖಂಡ್ರೆ ಮನವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) 2025ರ ಅಧಿಕೃತ ಕಾರ್ಯಕ್ರಮ ಸೋಮವಾರ ಶುರುವಾಗಿದೆ. ದಸರಾಗಾಗಿ ಕ್ಯಾಪ್ಟನ್ ಅಭಿಮನ್ಯು ಟೀಂ ಕಾಡಿನಿಂದ ನಾಡಿಗೆ ಆಗಮಿಸಿದ್ದು, ಆನೆಗಳ ಮೊದಲ ತಂಡಕ್ಕೆ ಹೆಚ್.ಡಿ ಕೋಟೆಯ ವೀರನಹೊಸಹಳ್ಳಿಯಲ್ಲಿ ಶುಭ ಕೋರಲಾಯಿತು. ಈ ವೇಳೆ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ.ಬಿ ಖಂಡ್ರೆ (Eshwar Khandre) ಮನವಿ ಮಾಡಿದ್ದಾರೆ.

ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು (ಆ.4) ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಈ ಬಾರಿಯೂ 750 ಕೆ.ಜಿ ತೂಕದ ಅಂಬಾರಿಯನ್ನು ಹೊರಲಿರುವ ಅಭಿಮನ್ಯು, ಇಡೀ ತಂಡವನ್ನು ಮುನ್ನಡೆಸಲಿದ್ದಾನೆ. ವಿವಿಧ ಆನೆ ಶಿಬಿರಗಳಿಂದ ಆನೆಗಳನ್ನು ಆಯ್ಕೆ ಮಾಡಿರುವ ಅಧಿಕಾರಿಗಳು ಈಗಾಗಲೇ ಆನೆಗಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಿದ್ದಾರೆ. ಆನೆ ಶಿಬಿರದಲ್ಲಿರುವ ಹೆಣ್ಣು ಆನೆಗಳ ಗರ್ಭಧಾರಣೆ ಪರೀಕ್ಷೆಗಾಗಿ ರಕ್ತಗಳ ಮಾದರಿ ಸಂಗ್ರಹಿಸಿ ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿಸಿ ನಂತರ ಈ ಹೆಣ್ಣಾನೆಗಳನ್ನು ದಸರಾಗೆ ಆಯ್ಕೆ ಮಾಡಲಾಗಿದೆ. ನಾಳೆ ಒಂದು ದಿನ ಮೈಸೂರಿನಲ್ಲಿ ವಿಶ್ರಾಂತಿ ಪಡೆಯಲಿರುವ ಗಜಪಡೆ ಆ.7ರಂದು ಅರಮನೆ ಪ್ರವೇಶ ಮಾಡಲಿವೆ.ಇದನ್ನೂ ಓದಿ: ತುಮಕೂರಲ್ಲಿ 19 ನವಿಲುಗಳ ಸಾವು – ತನಿಖೆಗೆ ಈಶ್ವರ್ ಖಂಡ್ರೆ ಆದೇಶ

Mysuru Dasara Gajapayana 1

ಮೊದಲ ತಂಡದ ಆನೆಗಳ ಪಟ್ಟಿ.
1. ಅಭಿಮನ್ಯು, ಗಂಡು : 59 ವರ್ಷ
2. ಪ್ರಶಾಂತ, ಗಂಡು : 53 ವರ್ಷ
3. ಧನಂಜಯ, ಗಂಡು : 45 ವರ್ಷ
4. ಮಹೇಂದ್ರ, ಗಂಡು : 42 ವರ್ಷ
5. ಏಕಲವ್ಯ, ಗಂಡು : 40 ವರ್ಷ
6. ಕಂಜನ್, ಗಂಡು : 26 ವರ್ಷ
7. ಭೀಮ, ಗಂಡು : 25 ವರ್ಷ
8. ಲಕ್ಷ್ಮಿ, ಹೆಣ್ಣು : 54 ವರ್ಷ
9. ಕಾವೇರಿ, ಹೆಣ್ಣು : 45 ವರ್ಷ

ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಈಶ್ವರ್ ಖಂಡ್ರೆ, ಪ್ರಕೃತಿ ಪರಿಸರದ ಸಮತೋಲನಕ್ಕೆ ವನ್ಯಜೀವಿಗಳು ಅತ್ಯವಶ್ಯಕವಾಗಿದ್ದು, ಅವುಗಳ ರಕ್ಷಣೆಗೆ ನಾವೆಲ್ಲರೂ ಕಟಿಬದ್ಧರಾಗಬೇಕು. ತಂತಿ ಬೇಲಿಗಳಿಗೆ ಅಕ್ರಮವಾಗಿ ಪ್ರವಹಿಸಿದ ವಿದ್ಯುತ್ ಸ್ಪರ್ಶದಿಂದ ಆನೆಗಳು ಮೃತಪಡುತ್ತಿದ್ದರೆ, ಉರುಳಿಗೆ ಚಿರತೆಗಳು ಸಿಲುಕಿ ನರಳಾಡಿ ಸಾಯುತ್ತಿವೆ. ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿಧಾಮದಲ್ಲಿ ವಿಷ ಪ್ರಾಶನದಿಂದ ಮೃತಪಟ್ಟಿವೆ. ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ. ವನ್ಯಜೀವಿಗಳ ಜಾಗವನ್ನು ಆಕ್ರಮಿಸಿರುವ ನಾವು ಅವುಗಳನ್ನು ನಿರ್ದಯವಾಗಿ ಕೊಲ್ಲದೆ, ಅವುಗಳ ಸಂರಕ್ಷಣೆಗೆ ಸಂಕಲ್ಪ ಮಾಡಬೇಕು ಎಂದು ಹೇಳಿದರು.

Mysuru Dasara Gajapayana 2

ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು. ಹೊರ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರುಗಳನ್ನು ತಂದು ನಮ್ಮ ರಾಜ್ಯದ ಅರಣ್ಯ ಪ್ರದೇಶದಲ್ಲಿ ಮೇಯಿಸುತ್ತಿರುವುದರಿಂದ ವನ್ಯಜೀವಿಗಳಿಗೆ ಕಾಡಿನಲ್ಲಿ ಆಹಾರ ಲಭಿಸದಂತಾಗಿದೆ. ಹೀಗಾಗಿ ಹೊರರಾಜ್ಯದಿಂದ ತಂದು ದನಕರು ಮೇಯಿಸುವುದನ್ನು ಮಾತ್ರವೇ ನಿಷೇಧಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಆನೆ ಸೇರಿದಂತೆ ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮ ಕೈಗೊಂಡಿದೆ. ಸೌರ ತಂತಿಬೇಲಿ, ಟೆಂಟಕಲ್ ಫೆನ್ಸಿಂಗ್, ಆನೆ ಕಂದಕಗಳ ಸಮರ್ಪಕ ನಿರ್ವಹಣೆ ಮಾಡಲು ನಾನು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ನಾನು ಅರಣ್ಯ ಸಚಿವನಾಗುವ ಮೊದಲು ಅಂದರೆ 2023ರ ಜೂನ್ ವರೆಗೆ ರಾಜ್ಯದಲ್ಲಿ 312.918 ಕಿ.ಮೀ ಮಾತ್ರ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ನಾನು ಸಚಿವನಾದ ಬಳಿಕ ಕಳೆದ 2 ವರ್ಷದಲ್ಲಿ 115.085 ಕಿ.ಮೀ ರೈಲ್ವೆ ಬ್ಯಾರಿಕೇಡ್ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಇನ್ನೂ 193 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ ಅನುಮೋದನೆ ನೀಡಲಾಗಿದೆ. ಮುಂದಿನ ಒಂದೆರೆಡು ವರ್ಷದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಉಳಿದ ಕಡೆಯೂ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುವುದು ಎಂದು ಅಭಿಪ್ರಾಯಪಟ್ಟರು.

ಪ್ರಕೃತಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದ ಅವರು ಅರಣ್ಯವನ್ನು ರಕ್ಷಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಆದಿವಾಸಿಗಳಿಗೆ, ಅರಣ್ಯವಾಸಿಗಳ ಸಮಸ್ಯೆಗೆ ಸ್ಪಂದಿಸಲಾಗುವುದು. ಜಂಟಿ ಸಮೀಕ್ಷೆ ನಡೆಸಿ 2015ಕ್ಕೆ ಮೊದಲು ಪಟ್ಟಾ ಜಮೀನೂ ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಹಾಗೂ ಮನೆ ನಿರ್ಮಿಸಿಕೊಂಡಿರುವವರಿಗೆ ತೊಂದರೆ ನೀಡದಂತೆ ಸೂಚಿಸಲಾಗಿದೆ. ನವರಾತ್ರಿ ಮತ್ತು ದಸರಾ ಮಹೋತ್ಸವ ಕೆಡುಕಿನ ಮೇಲೆ ಒಳಿತಿನ ದಿಗ್ವಿಜಯದ ವಿಜಯೋತ್ಸವವಾಗಿದ್ದು, ನಾವು ಎಲ್ಲ ದುಶ್ಚಟ, ದುರ್ಗಣಗಳ ವಿರುದ್ಧ ವಿಜಯೋತ್ಸವ ಆಚರಿಸೋಣ. ನಾಡದೇವಿ ಚಾಮುಂಡೇಶ್ವರಿ ಎಲ್ಲರಿಗೂ ಶುಭ ತರಲಿ ಎಂದರು.

Mysuru Dasara Gajapayana 3

ಅರ್ಜುನ ಪ್ರಶಸ್ತಿ ಪ್ರದಾನ:
ಆನೆ ಸೆರೆ ಕಾರ್ಯಾಚರಣೆ, ಆನೆಗಳನ್ನು ಪಳಗಿಸುವುದು ಮತ್ತು ಯಶಸ್ವಿಯಾಗಿ ವನ್ಯಜೀವಿ ಸೆರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಉತ್ತಮ ಕಾರ್ಯ ಮಾಡಿದ ಮಾವುತರು, ಕಾವಾಡಿ ಹಾಗೂ ಅರಣ್ಯ ಸಿಬ್ಬಂದಿಗೆ ಇನ್ನು ಮುಂದೆ ಅರ್ಜುನ ಆನೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದ ಈಶ್ವರ ಖಂಡ್ರೆ, ಮೊದಲ ಸಾಲಿನ ಪ್ರಶಸ್ತಿಯನ್ನು ಭೀಮ ಆನೆಯ ಮಾವುತ ಹಾಗೂ ಕಾವಾಡಿಗಳಾದ ಗುಂಡ ಮತ್ತು ನಂಜುಂಡಸ್ವಾಮಿಯವರಿಗೆ ಪ್ರದಾನ ಮಾಡಿದರು. ಈ ಪ್ರಶಸ್ತಿ ತಲಾ 10,000 ರೂ. ಗೌರವಧನ ಹಾಗೂ ಪ್ರಶಂಸಾ ಪತ್ರ ಒಳಗೊಂಡಿರುತ್ತದೆ ಎಂದು ಅವರು ಪ್ರಕಟಿಸಿದರು. ಸಮಿತಿ ಒಂದನ್ನು ರಚಿಸಿ ಅರ್ಹ ಸಾಧಕರನ್ನ ಈ ಪ್ರಶಸ್ತಿಗೆ ಪ್ರತಿವರ್ಷ ಆಯ್ಕೆ ಮಾಡಲಾಗುವುದು, ಗಜ ಪಯಣದ ದಿನ ಪ್ರಶಸ್ತಿ ಪ್ರದಾನ ನೆರವೇರಲಿದೆ ಎಂದು ತಿಳಿಸಿದರು.

ಇದೆ ಸಂದರ್ಭದಲ್ಲಿ ಈ ಬಾರಿಯ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳ ಕಿರುಪರಿಚಯದ. ಕೈಪಿಡಿ ಮತ್ತು ಪೋಸ್ಟರ್ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ರೇಷ್ಮೆ ಮತ್ತು ಪಶುಸಂಗೋಪನಾ ಖಾತೆ ಸಚಿವ ಕೆ. ವೆಂಕಟೇಶ್, ಶಾಸಕರುಗಳಾದ ಹರೀಶ್ ಗೌಡ, ತನ್ವೀರ್ ಸೇಠ್, ರವಿಶಂಕರ್, ಕಾಡಾ ಅಧ್ಯಕ್ಷರಾದ ಮರಿಗೌಡ, ಅರಣ್ಯಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಪಾಲ್ಗೊಂಡಿದ್ದರು.ಇದನ್ನೂ ಓದಿ: ನೇಹಾ ಹತ್ಯೆ ಕೇಸ್ – ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

TAGGED:eshwar khandremysurumysuru dasaraಈಶ್ವರ ಬಿ ಖಂಡ್ರೆಮೈಸೂರುಮೈಸೂರು ದಸರಾ
Share This Article
Facebook Whatsapp Whatsapp Telegram

Cinema News

Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood

You Might Also Like

Madhuri Elephant
Latest

ಮಾಧುರಿ ಆನೆಯನ್ನು ಮಠಕ್ಕೆ, ಸರ್ಕಾರಿ ಮೃಗಾಲಯಕ್ಕೆ ಸ್ಥಳಾಂತರಿಸಿ – ಜೈನ ಸಮುದಾಯ ಒತ್ತಾಯ

Public TV
By Public TV
6 hours ago
AshwiniVaishnaw
Latest

ರಾಜ್ಯ ಸರ್ಕಾರದಿಂದ ಭೂಮಿ, 50% ಮೊತ್ತ ಭರಿಸಲು ನಿರಾಕರಣೆ; ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ

Public TV
By Public TV
6 hours ago
Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ – ಪ್ರಮುಖ ಆರೋಪಿಯ ಬ್ಯಾಂಕ್ ಖಾತೆ ಸೀಜ್

Public TV
By Public TV
7 hours ago
Dharmasthala mass burial case assault
Dakshina Kannada

ಧರ್ಮಸ್ಥಳ ಕೇಸ್; 2 ಗುಂಪುಗಳ ನಡುವೆ ಮಾರಾಮಾರಿ – ವರದಿಗೆ ಹೋದ ಖಾಸಗಿ ವಾಹಿನಿ ವರದಿಗಾರ, ಕ್ಯಾಮೆರಾಮ್ಯಾನ್ ಮೇಲೆ ಹಲ್ಲೆ

Public TV
By Public TV
7 hours ago
D K Shivakumar
Bengaluru City

ನ.1ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳ ಚುನಾವಣೆಗೆ ಪೂರ್ವಸಿದ್ಧತೆ: ಡಿಕೆಶಿ

Public TV
By Public TV
7 hours ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?