Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ

Latest

ದೇವಭೂಮಿಯಲ್ಲಿ ಮೇಘಸ್ಫೋಟ – ಧರಾಲಿಯಲ್ಲಿ ಈವರೆಗೆ ಐವರ ಸಾವು ದೃಢ; 150 ಜನರ ರಕ್ಷಣೆ

Public TV
Last updated: August 6, 2025 3:14 pm
Public TV
Share
3 Min Read
Uttarkashi Cloudburst 2 1
SHARE

– ಕೇಂದ್ರದಿಂದ ಅಗತ್ಯವಿರುವ ಎಲ್ಲಾ ಸಹಾಯ ನೀಡುವುದಾಗಿ ಮೋದಿ ಭರವಸೆ
– ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ; 150 ಮಂದಿ ಸ್ಥಳಾಂತರ

ಡೆಹ್ರಾಡೂನ್‌: ಉತ್ತರಕಾಶಿಯ ಧರಾಲೀಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದ (Uttarkashi Cloudburst) ಪ್ರವಾಹದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯವನ್ನ ಭಾರತೀಯ ಸೇನೆ (Indian Army), ಐಟಿಬಿಪಿ ಹಾಗೂ ಎನ್‌ಡಿಆರ್‌ಎಫ್ ತಂಡಗಳು ಆರಂಭಿಸಿವೆ. ಭಾರೀ ಮಳೆಯ ನಡುವೆಯೂ 150 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 150ಕ್ಕೂ ಹೆಚ್ಚುಮಂದಿಯನ್ನು ಪ್ರವಾಹಪೀಡಿತ ಸ್ಥಳದಿಂದ ರಕ್ಷಿಸಲಾಗಿದೆ.

ಅಲ್ಲದೇ ಪ್ರವಾಹದಿಂದಾಗಿ ಈವರೆಗೆ ಐವರು ಸಾವನ್ನಪ್ಪಿರುವುದು ದೃಢವಾಗಿದೆ. ಐವರ ಮೃಹದೇಹಗಳನ್ನೂ ಹೊರತೆಗೆಯಲಾಗಿದೆ. ಕೇರಳದ 28 ಪ್ರವಾಸಿಗರೂ ಸೇರಿ 100ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಯುತ್ತಿದೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

उत्तरकाशी में आपदा प्रभावित क्षेत्र का हवाई निरीक्षण किया।#Uttarkashi pic.twitter.com/IFnrxRkegD

— Pushkar Singh Dhami (@pushkardhami) August 6, 2025

ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ
ಇನ್ನೂ ಮೇಘಸ್ಫೋಟದಿಂದ ಪ್ರವಾಹ ಸಂಭವಿಸಿದ ಸ್ಥಳವನ್ನ ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ (Pushkar Singh Dhami) ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಕೂಡ ಹಂಚಿಕೊಂಡಿದ್ದು, ಸಮರೋಪಾದಿಯಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನ ಕೈಗೊಳ್ಳಲಾಗುತ್ತಿದೆ. ಸಂತ್ರಸ್ತರಿಗೆ ತ್ವರಿತ ಸಹಾಯವನ್ನೂ ನೀಡುತ್ತಿದ್ದೇವೆ ಎಂದು ಪುಷ್ಕರ್‌ ಸಿಂಗ್‌ ಧಾಮಿ ತಿಳಿಸಿದ್ದಾರೆ.  ಇದನ್ನೂ ಓದಿ: ಕರ್ನಾಟಕದಲ್ಲಿರುವ 6,291 ಪ್ರಾಥಮಿಕ ಕೃಷಿ ಸಾಲ ಸಂಘಗಳಲ್ಲಿ 125 ಸಂಘಗಳು ದಿವಾಳಿ ಅಂಚಿನಲ್ಲಿವೆ: ಅಮಿತ್ ಶಾ

ಪ್ರಧಾನಿ ಮೋದಿ ಜೊತೆಗೆ ಮಾತುಕತೆ
ಈ ನಡುವೆ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಧರಾಲಿ ಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ವಿಪತ್ತು ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮಾಹಿತಿ ಪಡೆದಿದ್ದಾರೆ. ರಾಜ್ಯ ಸರ್ಕಾರವು ಸಂಪೂರ್ಣ ಸಿದ್ಧತೆಯೊಂದಿಗೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ, ನಿರಂತರ ಭಾರೀ ಮಳೆಯಿಂದಾಗಿ, ಕೆಲವು ಪ್ರದೇಶಗಳಲ್ಲಿ ತೊಂದರೆಗಳಿವೆ ಎಲ್ಲಾ ಸಂಬಂಧಪಟ್ಟ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಇದರಿಂದ ಸಂತ್ರಸ್ತರಿಗೆ ತ್ವರಿತ ಸಹಾಯ ಸಿಗುತ್ತದೆ ಎಂದು ಮೋದಿ ಅವರಿಗೆ ಧಾಮಿ ಮಾಹಿತಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ಭರವಸೆ ನೀಡಿದ್ದಾರೆ.

Modi 3

ಉತ್ತರಾಖಂಡ ಬಿಜೆಪಿ ಸಂಸದರಿಂದ ಮೋದಿ ಭೇಟಿ
ಈ ಎಲ್ಲ ಬೆಳವಣಿಗೆಗಳ ನಡುವೆ ಉತ್ತರಾಖಂಡದ ಬಿಜೆಪಿ ಸಂಸದರನ್ನು (Uttarakhand BJP MPs) ಭೇಟಿಯಾದ ಪ್ರಧಾನಿ ಮೋದಿ, ಉತ್ತರಕಾಶಿ ಉಂಟಾದ ಮೇಘಸ್ಫೋಟ ಘಟನೆ ಕುರಿತು ಚರ್ಚಿಸಿದ್ದಾರೆ. ಉತ್ತರಾಖಂಡದ ಸಂಸದರಾದ ಅಜಯ್ ಭಟ್, ಮಾಲಾ ರಾಜ್ಯ ಲಕ್ಷ್ಮಿ ಶಾ, ತ್ರಿವೇಂದ್ರ ಸಿಂಗ್ ರಾವತ್ ಮತ್ತು ಅನಿಲ್ ಬಲುನಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.  ಇದನ್ನೂ ಓದಿ: ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

Uttarkashi Cloudburst

100ಕ್ಕೂ ಅಧಿಕ ಮಂದಿ ಮಿಸ್ಸಿಂಗ್‌
ಇನ್ನೂ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ನೈಸರ್ಗಿಕ ವಿಕೋಪಕ್ಕೆ ಸಿಲುಕಿದ್ದು, ಭಾರೀ ಮೇಘಸ್ಫೋಟದಿಂದ ವಿನಾಶವೇ ಸೃಷ್ಟಿಯಾಗಿದೆ. ಧರಾಲಿ ಗ್ರಾಮದ ಬಳಿಯಿರುವ ಖೀರ್ ಗಡ್ ಪ್ರದೇಶದಲ್ಲಿ ಪ್ರವಾಹದಿಂದಾಗಿ ಹಠಾತ್ ನೀರಿನ ಹರಿವು ಹೆಚ್ಚಾದ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ. ನೋಡನೋಡುತ್ತಿದ್ದಂತೆ ನದಿಯಲ್ಲಿ ರೌದ್ರಾವತಾರ ತಾಳಿ ಹರಿದು ಬಂದ ಭಾರೀ ಪ್ರಮಾಣದ ಕಪ್ಪು ಬಣ್ಣದ ನೀರಿನಿಂದ 25ಕ್ಕೂ ಹೆಚ್ಚು ಹೋಟೆಲ್, ಹೋಂಸ್ಟೇಗಳು ಕೊಚ್ಚಿಹೋಗಿವೆ. ಘಟನೆಯಲ್ಲಿ ಸುಮಾರು ಹತ್ತು ಮಂದಿ ಮೃತಪಟ್ಟಿದ್ದು, ನೂರಕ್ಕೂ ಅಧಿಕ ಜನರು ಕಾಣೆಯಾಗಿದ್ದಾರೆ.  ಇದನ್ನೂ ಓದಿ: ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Uttarkashi Cloudburst 2

ಈ ಪ್ರದೇಶಗಳಲ್ಲಿ ನಾಪತ್ತೆಯಾದವರ ರಕ್ಷಣಾ ಕಾರ್ಯ ಆರಂಭವಾಗಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಐಟಿಬಿಪಿ ಮತ್ತು ಸ್ಥಳೀಯ ಆಡಳಿತದ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ. ಇದುವರೆಗೆ 150 ಜನರನ್ನ ರಕ್ಷಿಸಲಾಗಿದೆ. ಸುಮಾರು 150 ಜನರನ್ನ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲಾಗಿದೆ.

TAGGED:heavy rainIMDindian armynarendra modiPushkar Singh DhamiUttarakhandUttarkashi Cloudburstಉತ್ತರ ಕಾಶಿನರೇಂದ್ರ ಮೋದಿಪುಷ್ಕರ್ ಸಿಂಗ್ ಧಾಮಿಮೇಘಸ್ಫೋಟ
Share This Article
Facebook Whatsapp Whatsapp Telegram

Cinema news

Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories
katrina Kaif and vicky kaushal
ಪುತ್ರನಿಗೆ `ವಿಹಾನ್‌ʼ ಎಂದು ಹೆಸರಿಟ್ಟ ಕತ್ರೀನಾ-ವಿಕ್ಕಿ ಕೌಶಲ್ 
Bollywood Cinema Latest Top Stories

You Might Also Like

udp monkey fever 3
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ

Public TV
By Public TV
3 hours ago
Bike Wheeling Mysuru
Crime

Video Viral | ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್

Public TV
By Public TV
3 hours ago
Kogilu Layout Demolition 20 officials of Rajiv Gandhi Housing Scheme visited site
Bengaluru City

ಕೋಗಿಲು ಲೇಔಟ್‌ ಒತ್ತುವರಿ ತೆರವು ಕೇಸ್;‌ ಭೂಕಬಳಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

Public TV
By Public TV
3 hours ago
Janardhana Reddy
Bellary

ರಾಜಶೇಖರ್ ಸಾವು ಆಕಸ್ಮಿಕ ಅಲ್ಲ, ಉದ್ದೇಶಪೂರ್ವಕ ಕೊಲೆ: ಜನಾರ್ದನ ರೆಡ್ಡಿ

Public TV
By Public TV
4 hours ago
pm modi pejawar seer
Latest

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ ನಿಲ್ಲಿಸಲು ಕ್ರಮವಹಿಸಿ: ಮೋದಿಗೆ ಪೇಜಾವರ ಶ್ರೀ ಪತ್ರ

Public TV
By Public TV
5 hours ago
Haryana 11th baby
Latest

10 ಹೆಣ್ಣುಮಕ್ಕಳ ನಂತರ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ – ಮಕ್ಕಳ ಹೆಸ್ರು ಕೇಳಿದಾಗ ಹೆಣಗಾಡಿದ ತಂದೆ, ವಿಡಿಯೋ ವೈರಲ್‌

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?