Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?

Bengaluru City

ದರ್ಶನ್‌ಗೆ ಅಪರಾಧ ಹಿನ್ನೆಲೆ ಇದೆ, ಸಾಕ್ಷ್ಯಗಳು ಸಿಕ್ಕಿವೆ – ಜಾಮೀನು ರದ್ದು ಮಾಡಿ: ಬೆಂಗಳೂರು ಪೊಲೀಸರ ವಾದ ಏನು?

Public TV
Last updated: August 6, 2025 7:17 pm
Public TV
Share
2 Min Read
DARSHAN 5
SHARE

ಬೆಂಗಳೂರು: ದರ್ಶನ್‌ಗೆ (Darshan) ಅಪರಾಧ ಹಿನ್ನೆಲೆ ಇದೆ. ಬೆನ್ನು ನೋವಿನ ಕಾರಣಕ್ಕೆ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದು ಮರುದಿನವೇ ಚಲನಚಿತ್ರ ಪ್ರದರ್ಶನದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ದರ್ಶನ್‌ಗೆ ನೀಡಲಾಗಿರುವ ಜಾಮೀನು (Bail) ರದ್ದು ಮಾಡಿ ಎಂದು ಬೆಂಗಳೂರು ಪೊಲೀಸರ (Bengaluru Police) ಪರ ವಕೀಲರು ಸುಪ್ರೀಂ ಕೋರ್ಟ್‌ಗೆ (Supreme Court) ಲಿಖಿತ ರೂಪದಲ್ಲಿ ವಾದ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ದರ್ಶನ್ ಸೇರಿ 7 ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. ಇದನ್ನೂ ಓದಿ: ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?

ಜುಲೈ 24 ರಂದು ನಡೆದ ಕೊನೆಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ನಿಮ್ಮ ವಾದ-ಪ್ರತಿವಾದವನ್ನು ಮೂರು ಪುಟಗಳಲ್ಲಿ ಸಂಕ್ಷಿಪ್ತವಾಗಿ ಒಂದು ವಾರದಲ್ಲಿ ತಿಳಿಸಿ ಎಂದು ಸೂಚಿಸಿದ್ದರು. ಅದರಂತೆ ಪವಿತ್ರಾ ಗೌಡ, ದರ್ಶನ್ ಮತ್ತು ಬೆಂಗಳೂರು ಪೊಲೀಸರ ಪರ ವಕೀಲರು ಲಿಖಿತ ರೂಪದಲ್ಲಿ ವಾದವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ದರ್ಶನ್‌ ದಿಢೀರ್‌ ಭೇಟಿ

DARSHAN RENUKASWAMY

ಬೆಂಗಳೂರು ಪೊಲೀಸರ ಪರ ವಕೀಲರ ವಾದ ಏನು?
ಮೃತ ರೇಣುಕಾಸ್ವಾಮಿ ದರ್ಶನ್ ಅಭಿಮಾನಿಯಾಗಿದ್ದ. ದರ್ಶನ್ ಲಿವ್-ಇನ್ ಸಂಬಂಧದಲ್ಲಿದ್ದ ಪವಿತ್ರಾ ಗೌಡಗೆ ಇನ್ಸ್ಟಾಗ್ರಾಂನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿದ್ದ. ಇದರಿಂದ ರೇಣುಕಾಸ್ವಾಮಿಯನ್ನು ಅಪಹರಿಸಿ, ಪಟ್ಟಣಗೆರೆಯ ಶೆಡ್‌ನಲ್ಲಿ ಕೊಲೆ ಮಾಡಲಾಯಿತು. ಆರೋಪಿಗಳು ಕೊಲೆ ನಡೆದ ಸ್ಥಳದಲ್ಲಿದ್ದರು ಎನ್ನುವುದು ತನಿಖೆಯಿಂದ ಬಯಲಾಗಿದೆ. ಅಪಹರಣದ ಸಮಯದಲ್ಲಿ ಮತ್ತು ಕೊಲೆ ನಡೆದ ಸ್ಥಳದಲ್ಲಿ ಆರೋಪಿಗಳು ಇದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ: ಸುಪ್ರೀಂಗೆ ಪವಿತ್ರಾ ಗೌಡ ಮನವಿ

ಪಟ್ಟಣಗೆರೆಯ ಶೆಡ್‌ಗೆ ಆರೋಪಿಗಳು, ಮೃತ ವ್ಯಕ್ತಿ ಪ್ರವೇಶಿಸುವುದನ್ನು ಐವರು ಸಾಕ್ಷಿಗಳು ನೋಡಿದ್ದಾರೆ. ಕೊಲೆ ನಡೆದ ಸ್ಥಳದಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿ ಮತ್ತು ಎ2 ದರ್ಶನ್, ಎ4 ರಾಘವೇಂದ್ರ, ಎ5 ನಂದೀಶ್ ಮತ್ತು ಎ11 ನಾಗರಾಜು ಅವರ ಪಾದರಕ್ಷೆಗಳಿಂದ ಸಂಗ್ರಹಿಸಲಾದ ಮಣ್ಣಿನ ಮಾದರಿಗಳು ಹೊಂದಾಣಿಕೆಯಾಗುತ್ತವೆ. ಡಿಎನ್‌ಎ ವಿಶ್ಲೇಷಣೆಯಿಂದ ಮೃತ ರೇಣುಕಾಸ್ವಾಮಿ ರಕ್ತದ ಕಲೆಗಳು ಹಲವು ಆರೋಪಿ ಬಟ್ಟೆಗಳ ಮೇಲೆ ಕಂಡುಬಂದಿವೆ. ಕೊಲೆ ನಡೆದ ಸಮಯದಲ್ಲಿ ಎ1 ಪವಿತ್ರಾ ಗೌಡ ಮತ್ತು ಎ2 ದರ್ಶನ್ ಇಬ್ಬರೂ ಸಕ್ರಿಯವಾಗಿ ಭಾಗಿಯಾಗಿದ್ದರು. ಹೈಕೋರ್ಟ್ನ ಜಾಮೀನು ನೀಡುವ ತೀರ್ಪು ಸರಿಯಾಗಿಲ್ಲ ಮತ್ತು ದಾಖಲೆಗಳಿಗೆ ವಿರುದ್ಧವಾಗಿದೆ. ಕೊಲೆ ಮಾಡಲು ಬಳಸಿದ ಆಯುಧಗಳು ಮಾರಕವಲ್ಲ ಎಂದು ಹೈಕೋರ್ಟ್ ಹೇಳಿರುವುದು ತಪ್ಪು. ಮೃತನ ಮೇಲಿನ ಗಾಯಗಳು ಇದನ್ನು ಸುಳ್ಳಾಗಿಸುತ್ತವೆ. ಇದನ್ನೂ ಓದಿ: ವೆಬ್ ಸಿರೀಸ್‌ಗಾಗಿ ಬಣ್ಣ ಹಚ್ಚಿದ ಲೂಸಿಯಾ ನಿರ್ದೇಶಕ ಪವನ್

ಸಾಕ್ಷಿಯಾದ ಪುನೀತ್ ಹೇಳಿಕೆಯನ್ನು ತಡವಾಗಿ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಅನುಮಾನಿಸಿರುವುದು ಸರಿಯಲ್ಲ. ಈ ತಡಕ್ಕೆ ಸೂಕ್ತ ಕಾರಣಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಪ್ರಕರಣದಲ್ಲಿ ಸೂಕ್ತ ವಿಧಿ ವಿಜ್ಞಾನ, ಎಲೆಕ್ಟ್ರಾನಿಕ್ ಮತ್ತು ಸಿಡಿಆರ್ ಪುರಾವೆಗಳಿವೆ ಎಂದು ಹೈಕೋರ್ಟ್ ಪರಿಗಣಿಸಿಲ್ಲ. ಜಾಮೀನು ವಿಚಾರಣೆಯ ಹಂತದಲ್ಲಿ ಹೈಕೋರ್ಟ್ ‘ಮಿನಿ ಟ್ರಯಲ್’ ನಡೆಸಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಉಕ್ಕು ವಲಯ ಅಭಿವೃದ್ಧಿ – ಒಡಿಶಾ ಮುಖ್ಯಮಂತ್ರಿ ಜೊತೆ ಹೆಚ್‌ಡಿಕೆ ಚರ್ಚೆ

TAGGED:bengaluruBengaluru PolicedarshanRenukaswamy Murder caseSupreme Courtದರ್ಶನ್ಬೆಂಗಳೂರುಬೆಂಗಳೂರು ಪೊಲೀಸ್ರೇಣುಕಾಸ್ವಾಮಿ ಕೊಲೆ ಕೇಸ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
11 minutes ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
13 minutes ago
Lorry 2
Bengaluru City

LPG, CNG ಮಧ್ಯೆ ಹೈವೇಗಳಲ್ಲಿ ಡಿಸೇಲ್ ಕೊರತೆ – ಸರಕು ವಾಹನಗಳ ಬಾಡಿಗೆಯೂ ಏರಿಕೆ!

Public TV
By Public TV
39 minutes ago
Hubballi Love Jihad
Bengaluru City

ಜಿಮ್ ಟ್ರೈನರ್‌ನಿಂದ ಲವ್ ಜಿಹಾದ್ – ಹಿಂದೂ ಯುವತಿಯರೇ ಟಾರ್ಗೆಟ್, ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್

Public TV
By Public TV
48 minutes ago
Donald Trump 3
Latest

We’re in war – ಅಮೆರಿಕದ ಫೈಟರ್‌ ಜೆಟ್‌ ಪತನದ ಬಗ್ಗೆ ಟ್ರಂಪ್‌ ಫಸ್ಟ್‌ ರಿಯಾಕ್ಷನ್‌

Public TV
By Public TV
54 minutes ago
Yuvaraj Singh
Cricket

ಧೋನಿ, ಕಪಿಲ್ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್ ಸಿಂಗ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?