Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಕಾರಣಕ್ಕೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ: ಟ್ರಂಪ್‌ಗೆ ಮೋದಿ ಗುದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯಾವುದೇ ಕಾರಣಕ್ಕೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ: ಟ್ರಂಪ್‌ಗೆ ಮೋದಿ ಗುದ್ದು

Latest

ಯಾವುದೇ ಕಾರಣಕ್ಕೂ ರಾಜಿಯಾಗಲ್ಲ, ನನಗೆ ರೈತರ ಹಿತವೇ ಮುಖ್ಯ: ಟ್ರಂಪ್‌ಗೆ ಮೋದಿ ಗುದ್ದು

Public TV
Last updated: August 7, 2025 12:01 pm
Public TV
Share
3 Min Read
Modi
SHARE

ನವದೆಹಲಿ: ರೈತರು (Faramers) ಮತ್ತು ಮೀನುಗಾರರಿಗೆ (Fishermen) ಸಮಸ್ಯೆಯಾಗುವ ಯಾವುದೇ ಹಿತಾಸಕ್ತಿಯ ಜೊತೆ ಭಾರತ (India) ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi)  ಸ್ಪಷ್ಟವಾಗಿ ಹೇಳಿದ್ದಾರೆ.

ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸುಂಕ ಸಮರವನ್ನು ಆರಂಭಿಸಿದ ಮರುದಿನವೇ ನರೇಂದ್ರ ಮೋದಿ ಈ ಹೇಳಿಕೆ ನೀಡುವ ಮೂಲಕ ಅಮೆರಿಕಕ್ಕೆ (USA) ಬಲವಾದ ಸಂದೇಶ ಕಳುಹಿಸಿದ್ದಾರೆ. ಸರ್ಕಾರದ ಈ ನಿರ್ಧಾರದಿಂದ ದುಬಾರಿ ಬೆಲೆ ತೆರಬೇಕಾಗುತ್ತದೆ ಎನ್ನುವುದು ತಿಳಿದಿದ್ದರೂ ರೈತರಿಗಾಗಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತರರಾಷ್ಟ್ರೀಯ ಸಮ್ಮೇಳದಲ್ಲಿ ಮಾತನಾಡಿದ ಅವರು, ರೈತರ ಹಿತಾಸಕ್ತಿ ನಮ್ಮ ಪ್ರಮುಖ ಆದ್ಯತೆಯಾಗಿದೆ. ಭಾರತ ತನ್ನ ರೈತರು, ಜಾನುವಾರು ಮಾಲೀಕರು ಮತ್ತು ಮೀನುಗಾರರ ಹಿತಾಸಕ್ತಿಗಳೊಂದಿಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸರ್ಕಾರದ ನಿರ್ಧಾರದಿಂದ ಭಾರೀ ಬೆಲೆ ತೆರಬೇಕಾಗುತ್ತದೆ ಎನ್ನುವುದು ನನಗೆ ತಿಳಿದಿದೆ. ಇದಕ್ಕೆ ನಾನು ಸಿದ್ಧನಿದ್ದೇನೆ. ದೇಶದ ರೈತರು, ಮೀನುಗಾರರು ಮತ್ತು ಜಾನುವಾರು ಮಾಲೀಕರ ಹಿತದೃಷ್ಟಿಯಿಂದ ಭಾರತ ಎಲ್ಲದ್ದಕ್ಕೂ ಸಿದ್ಧವಾಗಿದೆ ಎಂದು ತಿಳಿಸಿದರು.

ಜುಲೈ 20 ರಂದು ಅಮೆರಿಕ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ 25% ಸುಂಕವನ್ನು ವಿಧಿಸಿತ್ತು. ಈಗ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಭಾರತದಿಂದ ಆಮದಾಗುವ ವಸ್ತುಗಳ ಮೇಲೆ ಮತ್ತೆ 25% ಸುಂಕವನ್ನು ಡೊನಾಲ್ಡ್‌ ಟ್ರಂಪ್‌ ಹಾಕಿದ್ದಾರೆ.

Whatever it takes, India will not compromise on the interests of its farmers, livestock keepers and fishermen. pic.twitter.com/pvqIKipsCO

— Narendra Modi (@narendramodi) August 7, 2025

ಭಾರತ ಸಹಿ ಹಾಕದ್ದು ಯಾಕೆ?
ಟ್ರಂಪ್‌ ಸುಂಕ ಸಮರ ಆರಂಭಿಸಿದ ಕೂಡಲೇ ಭಾರತ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ಮೇಲೆ ತೆರಿಗೆ ಸಮರ ಆರಂಭಿಸಿದ್ದರು. ನಂತರ ಉಳಿದ ದೇಶಗಳು ವ್ಯಾಪಾರ ಸಂಬಂಧ ಮಾತುಕತೆ ನಡೆಸಲು ಆಸಕ್ತಿ ತೋರಿದ ಬೆನ್ನಲ್ಲೇ ಅಮೆರಿಕ ಸುಂಕ ಸಮರವನ್ನು ತಡೆ ಹಿಡಿದಿತ್ತು. ಈ ಸಂದರ್ಭದಲ್ಲಿ ಭಾರತ ಅಮೆರಿಕದ ಜೊತೆ ವ್ಯಾಪಾರ ಮಾತುಕತೆ ನಡೆಸತೊಡಗಿತು.

ಬಹುತೇಕ ವಿಚಾರಗಳ ಮಧ್ಯೆ ಭಾರತ ಮತ್ತು ಅಮೆರಿಕ ಒಪ್ಪಿಗೆ ನೀಡಿದರೂ ಮಹತ್ವದ ಕೆಲ ವಿಚಾರಗಳ ಭಾರತಕ್ಕೆ ಒಪ್ಪಿಗೆ ನೀಡಿಲ್ಲ. ಮುಖ್ಯವಾಗಿ ಕೃಷಿ, ಹೈನು ಉತ್ಪನ್ನಗಳ ವಲಯ. ಮೀನುಗಾರಿಕೆ ಸಂಬಂಧಿಸಿದಂತೆ ಅಮೆರಿಕದ ಉತ್ಪನ್ನಗಳಿಗೆ ಮುಕ್ತವಾಗಿಸಲು ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿಲ್ಲ. ಅಮೆರಿಕ ಉಕ್ಕು, ಅಲ್ಯೂಮಿನಿಯಂ ಮತ್ತು ಆಟೊಮೊಬೈಲ್‌ ಉತ್ಪನ್ನಗಳ ಮೇಲೆ ಹೆಚ್ಚಿನ ಸುಂಕ ವಿಧಿಸಬಾರದು ಎಂದು ಭಾರತ ಇರಿಸಿರುವ ಬೇಡಿಕೆಯನ್ನು ಒಪ್ಪಿಲ್ಲ.

ಅಮೆರಿಕದ ಡೈರಿ ಉತ್ಪನ್ನಗಳಿಗೆ ಭಾರತ ಅನುಮತಿ ನೀಡಿಲ್ಲ ಯಾಕೆ ಎನ್ನುವುದಕ್ಕೆ ಕಾರಣ ಇದೆ. ಭಾರತದಲ್ಲಿ ದನಗಳಿಗೆ ಹುಲ್ಲು, ಒಣಗಿದ ಮೇವು, ಧಾನ್ಯಗಳು, ಮತ್ತು ಪಶು ಆಹಾರವನ್ನು ನೀಡಲಾಗುತ್ತದೆ. ಆದರೆ ಅಮೆರಿಕದಲ್ಲಿ ಹಾಗಲ್ಲ. ಅಮೆರಿಕದಲ್ಲಿ ಜಾನುವಾರುಗಳಿಗೆ ಆಹಾರವಾಗಿ ನಾನ್‌ ವೆಜ್‌ ಆಹಾರಗಳನ್ನು ನೀಡಲಾಗುತ್ತದೆ. ಮಾಂಸ ಮತ್ತು ಮೂಳೆ ಊಟ, ಒಣಗಿದ ರಕ್ತ ಮತ್ತು ಕೋಳಿ ತ್ಯಾಜ್ಯ ಸೇರಿದಂತೆ ಪ್ರಾಣಿ ಉತ್ಪನ್ನಗಳನ್ನು ಜಾನುವಾರು ಆಹಾರದಲ್ಲಿ ಬಳಸಲು ಅವಕಾಶ ನೀಡುತ್ತವೆ. ತ್ಯಾಜ್ಯವನ್ನು ಕಡಿಮೆ ಮಾಡಲು ಮತ್ತು ಮೇವಿನ ವೆಚ್ಚವನ್ನು ಕಡಿಮೆ ಮಾಡಲು ಅಮೆರಿಕದ ರೈತರು ಈ ಆಹಾರವನ್ನು ನೀಡುತ್ತಾರೆ. ಈ ರೀತಿಯ ಆಹಾರ ನೀಡಲು ಅಮೆರಿಕದ ಕಾನೂನಿನಲ್ಲಿ ಅನುಮತಿ ಇದೆ.

ಭಾರತದಲ್ಲಿ ಹಸುಗಳನ್ನು ಪವಿತ್ರ ಮತ್ತು ಪೂಜ್ಯ ಭಾವದಿಂದ ನೋಡಲಾಗುತ್ತದೆ. ಹಸುಗಳು ತಿಂದ ಪ್ರಾಣಿ ಉತ್ಪನ್ನಗಳಿಂದ ಬರುವ ಹಾಲು ಸೇವಿಸುವುದನ್ನು ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ. ಭಾರತದಲ್ಲಿ ಸುಮಾರು 8 ಕೋಟಿಗೂ ಅಧಿಕ ಮಂದಿ ಹೈನುಗಾರಿಕೆ ಉದ್ಯಮದಲ್ಲಿ ತೊಡಗಿದ್ದಾರೆ. ಭಾರತದ ಜಿಡಿಪಿಗೆ ಹೈನುಗಾರಿಕೆ 5% ಕೊಡುಗೆ ನೀಡುತ್ತದೆ.

ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಇರುವ ಕಾರಣ ಭಾರತದ ಮಾರುಕಟ್ಟೆ ಪ್ರವೇಶಿಲು ಅಮೆರಿಕ ಮೊದಲಿನಿಂದಲೂ ಭಾರೀ ಪ್ರಯತ್ನ ಮಾಡುತ್ತಿದೆ. ಒಂದು ವೇಳೆ ಭಾರತ ಅನುಮತಿ ನೀಡಿದರೆ ರೈತರು ಬೀದಿಗೆ ಇಳಿಯುವ ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸರ್ಕಾರವೇ ಪತನ ಹೊಂದುವ ಸಾಧ್ಯತೆಯಿದೆ. ಈ ಕಾರಣಕ್ಕೆ ಇಲ್ಲಿಯವರೆಗೆ ಯಾವುದೇ ಸರ್ಕಾರಗಳು ಭಾರತದ ಮಾರುಕಟ್ಟೆಗೆ ಅಮೆರಿಕದ ಡೈರಿ ಉತ್ಪನ್ನ ಪ್ರವೇಶಕ್ಕೆ ಅನುಮತಿ ನೀಡಿಲ್ಲ.

TAGGED:donald trumpindianarendra modiUSAಅಮೆರಿಕಡೊನಾಲ್ಡ್ ಟ್ರಂಪ್ನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
20 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
24 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
50 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
1 hour ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?