Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಹುಲ್‌ ಗಾಂಧಿಯದ್ದು ಆಟಂ ಬಾಂಬ್‌ ಅಲ್ಲ, ಟುಸ್‌ ಪಟಾಕಿ: ಆರ್‌.ಅಶೋಕ್ ಲೇವಡಿ

Public TV
Last updated: August 8, 2025 7:25 pm
Public TV
Share
3 Min Read
R Ashok 1
SHARE

– ಡಿಕೆ ಶಿವಕುಮಾರ್‌ ಬಳಿಯೇ ಮತದಾರರ ಪಟ್ಟಿ ಇತ್ತು
– ಮತದಾರರ ಪಟ್ಟಿ ತಯಾರಿಯಲ್ಲಿ ಮೋದಿ ಪಾತ್ರ ಇಲ್ಲ; ವಿಪಕ್ಷ ನಾಯಕ

ಬೆಂಗಳೂರು: ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Modi) ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಇದನ್ನು ಅಧಿಕಾರಿಗಳೇ ತಯಾರು ಮಾಡುತ್ತಾರೆ. ಹೀಗಾಗಿ ರಾಹುಲ್ ಗಾಂಧಿಯದ್ದು ಆಟಂ ಬಾಂಬ್ ಅಲ್ಲ. ಹೊಸೂರಿನಲ್ಲಿ ತಯಾರಾದ ಹಳೇ ಟುಸ್ ಪಟಾಕಿಯಾಗಿದೆ ಅಂತ ವಿಪಕ್ಷ ನಾಯಕ ಅಶೋಕ್ (R Ashok) ಲೇವಡಿ ಮಾಡಿದ್ದಾರೆ.

ರಾಹುಲ್ ಗಾಂಧಿ ಪ್ರತಿಭಟನೆ (Rahul Gandhi Protest) ನಡೆಸಿದ ವಿಚಾರಕ್ಕೆ ವಿಧಾನಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ಬಾಂಬ್ ಹಾಕಿಲ್ಲ. ಅದು ಟುಸ್ ಪಟಾಕಿಯಾಗಿದೆ. ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪ್ರತಿ ಬೂತ್‌ಗೆ ಬಿಎಲ್‌ಎಗಳನ್ನು (ಬೂತ್ ಲೆವೆಲ್ ಏಜೆಂಟ್) ಕಾಂಗ್ರೆಸ್ ನೀಡಿದೆ. ಮತದಾರರ ಪಟ್ಟಿಯ ಮೊದಲ ಪ್ರತಿಯನ್ನು ಬಿಎಲ್‌ಎಗೆ ನೀಡಲಾಗುತ್ತದೆ. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಅವರೇ ನೇಮಿಸಿದ್ದಾರೆ. ಮತದಾರರ ಪಟ್ಟಿಯಲ್ಲಿ ಸತ್ತವರ ಹೆಸರು ತೆಗೆದುಹಾಕುವುದು, ಹೊಸಬರನ್ನು ಸೇರಿಸುವುದು ಮೊದಲಾದ ಕೆಲಸವನ್ನು ಬಿಎಲ್‌ಎ ಮಾಡುತ್ತಾರೆ. ಇಂತಹ ಬಿಎಲ್‌ಎಗಳನ್ನು ನೇಮಿಸಿದ ಕಾಂಗ್ರೆಸ್ ಏನು ತಪ್ಪು ಮಾಡಿಲ್ಲವೇ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಆರೋಪ ಮಾಡಿ, ಉತ್ತರ ಕೊಡೋಕೆ ಇನ್ಯಾರನ್ನೋ ಕಳಿಸಿದ್ದಾರೆ: ಜೋಶಿ ಕಿಡಿ

ಡಿಕೆಶಿ ಬಳಿಯೇ ಮತದಾರರ ಪಟ್ಟಿ ಇತ್ತು
ಡಿ.ಕೆ.ಶಿವಕುಮಾರ್ ಅವರ ಬಳಿಯೇ ಮತದಾರರ ಪಟ್ಟಿ ಇದ್ದಾಗ, ಆಗಲೇ ಅಕ್ರಮದ ಬಗ್ಗೆ ದೂರು ನೀಡಬೇಕಿತ್ತು. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪಾತ್ರವೇ ಇಲ್ಲ. ಅಥವಾ ಬಿಜೆಪಿ ನಾಯಕರ ಪಾತ್ರವೇ ಇಲ್ಲ. ಪಂಚಾಯಿತಿ ಕಾರ್ಯದರ್ಶಿ, ಅಂಚೆಯವರು, ತೆರಿಗೆ ಸಂಗ್ರಹ ಮಾಡುವವರು, ಆರೋಗ್ಯ ಸಿಬ್ಬಂದಿ ಹೀಗೆ ಇವರೆಲ್ಲರೂ ಮತದಾರರ ಪಟ್ಟಿಗೆ ತಯಾರಿಯಲ್ಲಿ ಭಾಗವಹಿಸುತ್ತಾರೆ. ಇವರೆಲ್ಲರೂ ಬಿಜೆಪಿಯವರಾ? ಪಟ್ಟಿಗೆ ಅಕ್ರಮವಾಗಿ ಹೆಸರನ್ನು ಬಿಜೆಪಿಯವರು ಹೇಗೆ ಸೇರಿಸಲು ಸಾಧ್ಯ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆದಾಯ ತೆರಿಗೆ ಮಸೂದೆ-2025 ಹಿಂಪಡೆದ ಕೇಂದ್ರ – ಆ.11ರಂದು ಹೊಸ ಆವೃತ್ತಿ ಪರಿಚಯ

ಒಂದೇ ಮನೆಯಲ್ಲಿ 18 ಮುಸ್ಲಿಂ ಮತದಾರರಿದ್ದಾರೆ
ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ಬೋಗಸ್ ವೋಟ್‌ಗಳ ಅಕ್ರಮ ಮಾಡಿದ್ದಕ್ಕೆ ಬಂಧಿತರಾಗಿದ್ದಾರೆ. ಬೆಂಗಳೂರಿನ ಗಾಂಧಿನಗರದ ಒಂದು ಚಿಕ್ಕ ಮನೆಯಲ್ಲಿ 18 ಮುಸ್ಲಿಂ ಮತದಾರರಿದ್ದಾರೆ. ಒಂದೇ ಮನೆಯಲ್ಲಿ ಇಷ್ಟೊಂದು ವೋಟು ಇರಲು ಹೇಗೆ ಸಾಧ್ಯ? ಸರ್ವಜ್ಞನಗರ ಕ್ಷೇತ್ರದ ನಾಗವಾರ ವಾರ್ಡ್ನಲ್ಲಿ ಕಾಂಗ್ರೆಸ್ ಶಾಸಕರಿಗಿಂತಲೂ ಸಂಸದರಿಗೆ 5,965 ಹೆಚ್ಚುವರಿ ಮತ ಸಿಕ್ಕಿದೆ. ಹಾಗಾದ್ರೆ ಕಾಂಗ್ರೆಸ್‌ಗೆ ಹೆಚ್ಚು ಮತ ಸಿಕ್ಕಿದ್ದು ಹೇಗೆ? ಹೆಚ್‌ಬಿಆರ್ ಲೇಔಟ್‌ನಲ್ಲಿ ಶಾಸಕರಿಗಿಂತಲೂ ಸಂಸದರಿಗೆ 3,646 ಮತ ಹೆಚ್ಚಾಗಿ ಸಿಕ್ಕಿದೆ. ಕಾಡುಗೊಂಡನಹಳ್ಳಿಯಲ್ಲಿ 3432 ಹೆಚ್ಚು ಮತ ಸಿಕ್ಕಿದೆ. ಹಾಗಾದರೆ ಇವೆಲ್ಲವನ್ನೂ ಸೇರಿಸಿದ್ದು ಯಾರು? ಸೋತ ಕೂಡಲೇ ಚುನಾವಣಾ ಆಯೋಗ ಸರಿ ಇಲ್ಲ ಎನ್ನುತ್ತಾರೆ ಎಂದರು. ಇದನ್ನೂ ಓದಿ: ಅಮೆರಿಕದ ಶಸ್ತ್ರಾಸ್ತ್ರ, ವಿಮಾನ ಖರೀದಿಸುವ ಯೋಜನೆ ಸ್ಥಗಿತಗೊಳಿಸಿಲ್ಲ: ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ

2023ರ ವಿಧಾನಸಭಾ ಚುನಾವಣೆ ಬಳಿಕ 2024 ರಲ್ಲಿ ಲೋಕಸಭಾ ಚುನಾವಣೆ ನಡೆಯಿತು. ಒಂದೇ ವರ್ಷದಲ್ಲಿ ಕೆಲವು ಹೊಸ ಮತದಾರರು ಬಂದಿದ್ದಾರೆ. ಪದ್ಮನಾಭನಗರದಲ್ಲಿ 57,000 ಮತ ನನಗೆ ಬಂದಿದೆ. ಇನ್ನೂ 20,000 ಬರಬೇಕಿತ್ತು. ಆದರೆ ಬೇರೆ ಕಡೆಯಿಂದ ಮುಸ್ಲಿಮರನ್ನ ತಂದು ಇಲ್ಲಿಗೆ ಸೇರಿಸಿದ್ದಾರೆ. ಕಂದಾಯ ಇಲಾಖೆ ಎಲ್ಲ ಚುನಾವಣೆ ನಡೆಸುತ್ತದೆ. ಎಲ್ಲರೂ ಕಾಂಗ್ರೆಸ್ ಸರ್ಕಾರದವರೇ ಆಗಿರುವಾಗ ಅಕ್ರಮವಾಗಲು ಹೇಗೆ ಸಾಧ್ಯ? ಈ ಹಿಂದೆ ಕಾಂಗ್ರೆಸ್ ಎಲ್ಲ ಕಡೆ ಅಧಿಕಾರದಲ್ಲಿದ್ದಾಗ ಕಳ್ಳ ಮತದಾನ ಸಾಮಾನ್ಯವಾಗಿತ್ತು. ಮತ ಪೆಟ್ಟಿಗೆಗಳನ್ನು ಎತ್ತಿಕೊಂಡು ಹೋಗುತ್ತಿದ್ದರು. ಪೂಲನ್ ದೇವಿಯಂತಹ ಡಕಾಯಿತರ ಆಡಳಿತವೇ ಎಲ್ಲ ಕಡೆ ನಡೆಯುತ್ತಿತ್ತು. ಅಂತಹ ಚುನಾವಣೆ ರಾಹುಲ್ ಗಾಂಧಿಗೆ ಈಗ ಬೇಕಿದೆ ಅಂತ ಕಿಡಿಕಾರಿದರು. ಇಂದಿರಾಗಾಂಧಿ ಚುನಾವಣಾ ಅಕ್ರಮ ಮಾಡಿ ಗೆದ್ದು ಅನರ್ಹರಾಗಿದ್ದರು. ಅದೇ ರೀತಿ ನರೇಂದ್ರ ಮೋದಿಗೆ ಆಗಿಲ್ಲ. ಗಾಂಧಿ ಕುಟುಂಬದ ಇತಿಹಾಸವೇ ಅಕ್ರಮ. ಚುನಾವಣೆಯಲ್ಲಿ ಅಕ್ರಮ ಮಾಡಿಯೇ ಎಲ್ಲರೂ ಗೆದ್ದಿದ್ದಾರೆ ಅಂತ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

TAGGED:bjpnarendra modir ashokRahul GandhiVote Riggingಆರ್. ಅಶೋಕ್‍ನರೇಂದ್ರ ಮೋದಿಬಿಜೆಪಿಮತಗಳ್ಳತನರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Salim Pistol
Latest

ಭಾರತದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌

Public TV
By Public TV
1 hour ago
BY Vijayendra
Bengaluru City

ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

Public TV
By Public TV
1 hour ago
Siddaramaiah
Bengaluru City

ರಾಜ್ಯ ಪಠ್ಯಕ್ರಮದಿಂದ ಹಿಂದಿಗೆ ಕೊಕ್ – ದ್ವಿಭಾಷಾ ಸೂತ್ರಕ್ಕೆ ಸರ್ಕಾರಕ್ಕೆ ತಜ್ಞರ ಶಿಫಾರಸು

Public TV
By Public TV
2 hours ago
R Ashoka 1
Chikkaballapur

ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಸುಧಾಕರ್‌ ಗುರಿಯಾಗಿಸಿ FIR: ಆರ್‌.ಅಶೋಕ್‌ ಕಿಡಿ

Public TV
By Public TV
2 hours ago
Agniveer Soldier
Chamarajanagar

ಚಾಮರಾಜನಗರ | ಎರಡು ಬೈಕ್ ನಡುವೆ ಡಿಕ್ಕಿ ಅಗ್ನಿವೀರ್ ಯೋಧ ಸಾವು

Public TV
By Public TV
2 hours ago
Raghavendraswamy
Districts

ಮಂತ್ರಾಲಯದಲ್ಲಿ ರಾಯರ ಆರಾಧನಾ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಪ್ತರಾತ್ರೋತ್ಸವಕ್ಕೆ ಚಾಲನೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?