Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌

Public TV
Last updated: August 9, 2025 6:19 pm
Public TV
Share
4 Min Read
Sudeep
SHARE

– ನಂಬಿಕೆಯುಳ್ಳ ದೇವಸ್ಥಾನ ಒಡೆದಾಗ‌ ಆಗುವಷ್ಟು ನೋವಾಗ್ತಿದೆ – ಸುದೀಪ್‌ ಕಂಬನಿ

ರಾತ್ರೋ ರಾತ್ರಿ ನಟ ಡಾ. ವಿಷ್ಣುವರ್ಧನ್‌ ಸಮಾಧಿಯನ್ನ (Vishnuvardhan Memorial) ತೆರವುಗೊಳಿಸಿರೋದ್ರಿಂದ ಅಭಿಮಾನಿಗಳ ಆಕ್ರೋಶ ಕಟ್ಟೆಯೊಡೆದಿದೆ. ವಿಷ್ಣು ಸಮಾಧಿ ಜಾಗವನ್ನ ಉಳಿಸಿಕೊಳ್ಳಲು ಅಭಿಮಾನಿಗಳು ಹೋರಾಟ ನಡೆಸುತ್ತಿದ್ದಾರೆ. ಅಭಿಮಾನಿಗಳ ಹೋರಾಟಕ್ಕೆ ಈಗ ನಟ ಕಿಚ್ಚ ಸುದೀಪ್‌ (Kichcha Sudeepa) ಕೂಡ ಕೈಜೋಡಿಸಿದ್ದಾರೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ…

— Kichcha Sudeepa (@KicchaSudeep) August 9, 2025

ಎಕ್ಸ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಕಿಚ್ಚ ಸುದೀಪ್‌, ನಾವು ನಂಬಿಕೆಯಿಟ್ಟಂತಹ ದೇವಸ್ಥಾನ ಒಡೆದಾಗ ಎಷ್ಟು ನೋವಾಗುತ್ತದೋ ಅಷ್ಟೇ ನೋವು ಸಂಕಟ ನನಗಾಗಿದೆ. ವಿಷ್ಣು ಸ್ಮಾರಕ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ಮಾಡಿದ್ದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲ. ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ-ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿಕೊಡಿ ಅಂತ ಮನವಿ ಮಾಡಿದ್ದಾರೆ.

With due respect to all…🙏🏼 pic.twitter.com/sq5Segx80M

— Kichcha Sudeepa (@KicchaSudeep) August 9, 2025

ಸುದೀಪ್‌ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನು ಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ, ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುವುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈಕೋರ್ಟ್ ಕೂಡ ಆದೇಶ ಮಾಡಿದೆ.

ನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಅದನ್ನ ಖರೀದಿ ಮಾಡಿರುವರೋ, ಅವರ ಮನವೊಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರ್ಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ.

ಅತಿಯಾದ ನೋವಿದೆ. ವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ನೇಚರ್‌ಗೆ ಸಂಬಂಧ ಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದ್ರೆ, ಇದು ನಾವು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರು ನಟರಿಗೆ, ಬೆಂಗಳೂರಿನಂತಹ ಒಂದು ರಾಜಧಾನಿಯಲ್ಲಿ, ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ, ಇದು ಅತ್ಯಂತ ಖಂಡನೀಯ ವಿಷಯ.

ನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ.

TAGGED:actor VishnuvardhanKannada Film Actorkichcha SudeepaVishnuvardhan Memorialಅಭಿಮಾನ್ ಸ್ಟುಡಿಯೋಕನ್ನಡ ಚಿತ್ರರಂಗಕಿಚ್ಚ ಸುದೀಪ್ವಿಷ್ಣು ಸಮಾಧಿ
Share This Article
Facebook Whatsapp Whatsapp Telegram

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
2 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
3 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
4 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
5 hours ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
5 hours ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?