ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನೋಟಿಸ್ ಕೊಡೋಕೆ ಅವರು ಯಾರು ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಚುನಾವಣೆ ಆಯೋಗಕ್ಕೆ ಪ್ರಶ್ನೆ ಮಾಡಿದ್ದಾರೆ.ಇದನ್ನೂ ಓದಿ: Mysuru Dasara | ಅಂಬಾರಿ ಹೊರುವ ಅಭಿಮನ್ಯುಗಿಂತ ಭೀಮನೇ ಬಲಶಾಲಿ
ರಾಹುಲ್ ಗಾಂಧಿಗೆ ಚುನಾವಣೆ ಆಯೋಗ ನೋಟಿಸ್ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ ಎಂದು ಕಿಡಿಕಾರಿದ್ದಾರೆ.
ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಕೇಸ್; ಇಂದು ಪಾಯಿಂಟ್ 17ರಲ್ಲಿ ಉತ್ಖನನ – ಸಿಗುತ್ತಾ ಬುರುಡೆ, ಮೂಳೆ ಕುರುಹು?