Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಟ ದರ್ಶನ್‌ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ ತೀರ್ಪಿನಲ್ಲೇನಿದೆ?

Public TV
Last updated: August 14, 2025 3:30 pm
Public TV
Share
2 Min Read
Actor Darshan
SHARE

– ಆರೋಪಿ ಎಷ್ಟೇ ದೊಡ್ಡವರಿದ್ದರೂ, ಕಾನೂನಿಗಿಂತ ಯಾರೂ ಮೇಲಲ್ಲ ಎಂದ ಕೋರ್ಟ್‌

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ (Darshan) ಸೇರಿ 7 ಆರೋಪಿಗಳಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ (Supreme Court) ರದ್ದುಗೊಳಿಸಿದೆ. ಕೋರ್ಟ್‌ ತೀರ್ಪಿನಲ್ಲಿ ಏನೇನಿದೆ ಎಂಬ ವಿವರ ಇಲ್ಲಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಆರ್.ಮಹಾದೇವನ್ ಅವರ ಪೀಠವು ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿ, ಅದು ವಿವಿಧ ದೋಷಗಳಿಂದ ಕೂಡಿದೆ ಎಂದು ಹೇಳಿದೆ. ನಾವು ಎಲ್ಲವನ್ನೂ ಪರಿಗಣಿಸಿದ್ದೇವೆ. ಜಾಮೀನು ಮಂಜೂರು ಮತ್ತು ರದ್ದತಿ ಎರಡೂ ವಿಷಯದಲ್ಲಿ ಹೈಕೋರ್ಟ್ ಆದೇಶವು ಗಂಭೀರ ಲೋಪಗಳಿಂದ ಕೂಡಿದೆ ಎಂಬುದು ಸ್ಪಷ್ಟವಾಗಿದೆ. ಹೈಕೋರ್ಟ್ ಯಾಂತ್ರಿಕವಾಗಿ ತೀರ್ಪು ನೀಡಿದಂತಿದೆ. ಮೇಲಾಗಿ, ಹೈಕೋರ್ಟ್ ವಿಚಾರಣೆಯ ಪೂರ್ವ ಹಂತದಲ್ಲಿ ತೀರ್ಪು ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದನ್ನೂ ಓದಿ: ಜಾಮೀನು ರದ್ದು ಬೆನ್ನಲ್ಲೇ ದರ್ಶನ್‌ ಆಪ್ತ ಪ್ರದೂಷ್ ಅರೆಸ್ಟ್‌

supreme Court 1

ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಆತಿಥ್ಯ ನೀಡಲಾಗಿದೆ. ಜೈಲು ಸೂಪರಿಂಟೆಂಡೆಂಟ್‌ನನ್ನು ಸಸ್ಪೆಂಡ್ ಮಾಡಬೇಕಿತ್ತು. ಈ ತೀರ್ಪು ಲ್ಯಾಂಡ್‌ಮಾರ್ಕ್ ತೀರ್ಪೆಂದು ಸುಪ್ರೀಂ ಕೋರ್ಟ್ ಹೇಳಿದೆ. ತಕ್ಷಣವೇ ದರ್ಶನ್ ಹಾಗೂ ಇತರ ಆರೋಪಿಗಳನ್ನು ಜೈಲಿಗೆ ಕಳುಹಿಸಬೇಕೆಂದು ಎಂದು ಸುಪ್ರೀಂ ಹೇಳಿದೆ.

ಸುಪ್ರೀಂ ಕೋರ್ಟ್ ಆದೇಶದಲ್ಲಿ ಏನಿದೆ?
* ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ (ಅವನು ಅಥವಾ ಅವಳು) ಕಾನೂನಿಗಿಂತ ಮೇಲಲ್ಲ ಎಂಬ ಸಂದೇಶವನ್ನು ನಾವು ಕೊಡುವ ಆದೇಶ ನೀಡುತ್ತದೆ.
* ನ್ಯಾಯ ವಿತರಣಾ ವ್ಯವಸ್ಥೆಯು ಯಾವುದೇ ಬೆಲೆ ತೆತ್ತಾದರೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳಬೇಕು ಎಂಬ ಬಲವಾದ ಸಂದೇಶವನ್ನು ಈ ಆದೇಶ ಒಳಗೊಂಡಿದೆ.
* ಯಾವುದೇ ವ್ಯಕ್ತಿ ಕಾನೂನಿಗಿಂತ ಮೇಲಲ್ಲ ಅಥವಾ ಅದಕ್ಕಿಂತ ಕೆಳಗಿಲ್ಲ, ನಾವು ಅದನ್ನು ಪಾಲಿಸುವಾಗ ಯಾರ ಅನುಮತಿಯನ್ನೂ ಕೇಳುವುದಿಲ್ಲ.
* ಎಲ್ಲಾ ಸಮಯದಲ್ಲೂ ಕಾನೂನಿನ ನಿಯಮವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ.
* ಜಾಮೀನು ಮಂಜೂರು ಮತ್ತು ರದ್ದತಿ ಎರಡನ್ನೂ ನಾವು ಪರಿಗಣಿಸಿದ್ದೇವೆ.
* ಜಾಮೀನು ಮಂಜೂರು ಮಾಡುವುದು ಮುಂದಿನ ವಿಚಾರಣೆಯ ಮೇಲೆ ಪರಿಣಾಮ ಬೀರುತ್ತದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು.
* ಹೈಕೋರ್ಟ್ ಆದೇಶ ಗಂಭೀರ ಲೋಪಗಳಿಂದ ಕೂಡಿದೆ. ಮೇಲಾಗಿ, ಹೈಕೋರ್ಟ್ ವಿಚಾರಣೆಯ ಪೂರ್ವ ಹಂತದಲ್ಲಿ ಪರೀಕ್ಷೆಯನ್ನು ಕೈಗೊಂಡಿದೆ.
* ವಿಚಾರಣಾ ನ್ಯಾಯಾಲಯ ಮಾತ್ರ ಜಾಮೀನು ನೀಡಲು ಸೂಕ್ತ ವೇದಿಕೆಯಾಗಿದೆ‌. ಇದು ಸುಸ್ಥಾಪಿತ ಆರೋಪಗಳು, ಪೂರ್ವಭಾವಿ ಸಾಕ್ಷ್ಯಗಳೊಂದಿಗೆ ಸೇರಿಕೊಂಡು ಜಾಮೀನು ರದ್ದತಿಯನ್ನು ಬಲಪಡಿಸುತ್ತವೆ.
* ನಾವು ಅಸಾಧಾರಣ ನ್ಯಾಯವ್ಯಾಪ್ತಿಯನ್ನು ಚಲಾಯಿಸಲು ತೃಪ್ತರಾಗಿದ್ದೇವೆ. ಹಿಗಾಗಿ, ಜಾಮೀನು ರದ್ದು ಮಾಡುತ್ತಿದ್ದೇವೆ. ಕೂಡಲೇ ಆರೋಪಿಗಳು ಶರಣಾಗಬೇಕು ಎಂದು ನ್ಯಾ. ಮಹಾದೇವನ್ ಹೇಳಿದರು.
* ಇದಕ್ಕೆ ಹೆಚ್ಚುವರಿ ಆದೇಶ ಸೇರ್ಪಡೆ ಮಾಡಿದ ನ್ಯಾ.ಜೆ.ಬಿ ಪಾರ್ದಿವಾಲಾ, ಆರೋಪಿಗಳಿಗೆ ಜೈಲಿನಲ್ಲಿ 5-ಸ್ಟಾರ್ ಆತಿಥ್ಯ ನೀಡಲಾಗುತ್ತಿದೆ ಎಂದು ತಿಳಿದ ದಿನ, ಮೊದಲ ಹೆಜ್ಜೆ ಸೂಪರಿಂಟೆಂಡೆಂಟ್ ಮತ್ತು ಇತರ ಎಲ್ಲ ಅಧಿಕಾರಿಗಳನ್ನು ಅಮಾನತುಗೊಳಿಸಬೇಕಿತ್ತು.
* ಮುಂದೆ ಯಾರಿಗಾದರೂ ವಿಐಪಿ ಆತಿಥ್ಯ ನೀಡುತ್ತಿರುವ ಛಾಯಾಚಿತ್ರಗಳು ಅಥವಾ ಯಾವುದೇ ವೀಡಿಯೊವನ್ನು ನಾವು ನೋಡಿದರೆ ಮೊದಲು ರಾಜ್ಯ ಸರ್ಕಾರಕ್ಕೆ ಸಮನ್ಸ್ ನೀಡುತ್ತೇವೆ.
* ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದ್ದು, ಇಂತಹ ಪ್ರಕರಣ ಎಲ್ಲೂ ಮರುಕಳಿಸಬಾರದು.

TAGGED:darshanpavithra gowdarenukaswamy caseSupreme Courtದರ್ಶನ್ಪವಿತ್ರಾ ಗೌಡರೇಣುಕಾಸ್ವಾಮಿ ಪ್ರಕರಣ
Share This Article
Facebook Whatsapp Whatsapp Telegram

Cinema News

Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories

You Might Also Like

Eshwar Khandre
Districts

ಚಿರತೆ ದಾಳಿ| ಬನ್ನೇರುಘಟ್ಟ ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಖಂಡ್ರೆ ಸೂಚನೆ

Public TV
By Public TV
5 hours ago
West Bengal Accident
Crime

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

Public TV
By Public TV
5 hours ago
Dharmasthala Mass Burial Case Youth arrested for insulting Jainism
Karnataka

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌

Public TV
By Public TV
5 hours ago
SATISH JARKIHOLI 1
Belgaum

ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ

Public TV
By Public TV
6 hours ago
H K Patil
Districts

ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

Public TV
By Public TV
6 hours ago
TB Dam
Districts

ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?