Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಸಮಯ ಬಂದಾಗ ಮತ್ತೆ ಸಚಿವ ಸ್ಥಾನ ಪಡೆಯುತ್ತೇನೆ: ಕೆ.ಎನ್.ರಾಜಣ್ಣ

Public TV
Last updated: August 15, 2025 4:21 pm
Public TV
Share
3 Min Read
k.n.rajanna press meet
SHARE

– ಕಾಣದ ಕೈಗಳ ಕೈವಾಡ ಇದೆ, ಸಿಎಂಗೂ ಅದು ಗೊತ್ತಿಲ್ಲ ಎಂದ ಮಾಜಿ ಸಚಿವ

ತುಮಕೂರು: ಸಮಯ ಬಂದಾಗ ಇದೇ ಅವಧಿಯಲ್ಲಿ ಸಚಿವ ಸ್ಥಾನ ಮತ್ತೆ ಪಡೆಯುತ್ತೇನೆ. ಹೈಕಮಾಂಡ್ ಕನ್ವಿನ್ಸ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ (K.N.Rajanna) ಭರವಸೆ ವ್ಯಕ್ತಪಡಿಸಿದರು.

ಸಚಿವ ಸ್ಥಾನದಿಂದ ವಜಾ ಆದ ಬಳಿಕ ರಾಜಣ್ಣ ತಮ್ಮ ಸ್ವಕ್ಷೇತ್ರ ಮಧುಗಿರಿಗೆ ಇದೇ ಮೊದಲ ಬಾರಿಗೆ ಭೇಟಿ ಕೊಟ್ಟಿದ್ದಾರೆ. ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ನಡೆಸಿದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ಮಧುಗಿರಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದನ್ನೂ ಓದಿ: ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಪತ್ರ

Rahul Gandhi 3

ಕಳೆದ ವಾರ ಸಚಿವನಾಗಿ ಮಧುಗಿರಿಗೆ ಬಂದಿದ್ದೆ. ಈ ವಾರ ಮಾಜಿ ಸಚಿವನಾಗಿ ಬಂದಿದ್ದೇನೆ. ಇದರಲ್ಲಿ ಯಾವುದೇ ವ್ಯತ್ಯಾಸ ನನಗೆ ಕಾಣುತ್ತಿಲ್ಲ. ಜನರ ಪ್ರೀತಿ-ವಿಶ್ವಾಸ ಒಂದಿದ್ದರೆ ಸಾಕು. ನಿನ್ನೆ ರಾತ್ರಿ ಜಿ ಪರಮೇಶ್ವರ್ ಕೂಡ ನನ್ನ ಮನೆಗೆ ಬಂದು ಕುಶಲೋಪರಿ ವಿಚಾರಿಸಿ ಹೋಗಿದ್ದಾರೆ. ಅಸೆಂಬ್ಲಿ ಮುಗಿದ ಬಳಿಕ ಹೈಕಮಾಂಡ್‌ಗೆ ಭೇಟಿ ಆಗಿ ಸತ್ಯ ವಿವರಿಸುತ್ತೇನೆ. ನನಗೆ ರಾಜಕೀಯ ಏಳು-ಬೀಳು ಹೊಸತಲ್ಲ. ಸಮಯ ಬಂದಾಗ ಮತ್ತೆ ಸಚಿವನಾಗುತ್ತೇನೆ. ಹೈಕಮಾಂಡ್ ಕನ್ವಿನ್ಸ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಶೂ ಭಾಗ್ಯ ನನ್ನ ಮನವಿ ಮೇರೆಗೆ ಜಾರಿ ಮಾಡಿದ್ದು. ರಾಹುಲ್ ಗಾಂಧಿ ಮತಗಳ್ಳತನ ವಿರುದ್ಧ ಹೋರಾಟ ಮಾಡುತ್ತಿದ್ದರು. ಸಿಟಿಯಲ್ಲಿ ಮತಗಳ್ಳತನ ಹೆಚ್ಚಾಗುತ್ತದೆ. ಗ್ರಾಮಾಂತರದಲ್ಲಿ ಮತಗಳ್ಳತನ ಆಗಲ್ಲ. ಆರ್‌ಎಸ್‌ಎಸ್ ನವರು ಬಹಳ ಪದ್ಧತಿ ಪೂರ್ವಕವಾಗಿ ಚುನಾವಣೆ ಮಾಡುತ್ತಾರೆ. ನಮ್ಮ ಕಾರ್ಯಕರ್ತರು ಮತಗಳ್ಳತನ ಕುರಿತಂತೆ ಎಚ್ಚರಿಕೆಯಿಂದ ಇರಬೇಕು. ಮತಗಳ್ಳತನದ ವಿರುದ್ಧದ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ. ಅಸೆಂಬ್ಲಿ ಮುಗಿದ ಬಳಿಕ ನಾನು ಹೈಕಮಾಂಡ್‌ಗೆ ಭೇಟಿಯಾಗಿ ವಿವರಿಸುತ್ತೇನೆ. ಆಗ ನನಗೆ ನೈಜ ಕಾರಣ ಗೊತ್ತಾಗುತ್ತದೆ. ನನಗೆ ಯಾವ ಬೇಸರನೂ ಇಲ್ಲ. ಇಂಡಿಯಾ ಒಕ್ಕೂಟಕ್ಕೆ 20 ಸೀಟ್ ಜಾಸ್ತಿ ಪಡೆದರೆ, ಮೋದಿ ಪ್ರಧಾನಿ ಆಗುತ್ತಿರಲಿಲ್ಲ. ನನಗೆ ರಾಜಕೀಯ ಏಳು-ಬೀಳು ಹೊಸತ್ತಲ್ಲ. ಜನರ ವಿಶ್ವಾಸ, ಆಶೀರ್ವಾದ ಇರೋವರೆಗೂ ಎಂತಹ ಸಂದರ್ಭವನ್ನೂ ಎದುರಿಸಬಹುದು. ಅಧಿಕಾರ ಬಂದರೆ ಜನಪರ ಕೆಲಸ ಮಾಡುತ್ತೇನೆ. ನಾನು ಸುಳ್ಳು ಹೇಳೋನು, ಮೋಸ ಮಾಡೋನು ಅಲ್ಲ. ಸ್ವಾರ್ಥಕೋಸ್ಕರ ಸುಳ್ಳು ಹೇಳಿಲ್ಲ. ಅಧಿಕಾರ ಇಲ್ಲದೇ ಹಾಳಾಗಿ ಹೋಗಲಿ. ಜನರ ವಿಶ್ವಾಸ-ಪ್ರೀತಿ ಹೀಗೆ ಇರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಹುಲ್‌ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ವಜಾ ಮಾಡಲಾಗಿದೆ: ಸಿದ್ದರಾಮಯ್ಯ

KN Rajanna Siddaramaiah

ವಿ.ಸೋಮಣ್ಣ ಮಧುಗಿರಿ ಹಾಗೂ ಕೊರಟಗೆರೆಗೆ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಹೇಳಿದರೆ ಸೋಮಣ್ಣನ ಹೊಗಳಿದರು ಅಂತಾರೆ. ಶ್ರೀರಾಮುಲು ಅವರನ್ನು ನಾನೇ ಕಾಂಗ್ರೆಸ್‌ಗೆ ಕರೆದುಕೊಂಡು ಬರುತ್ತೇನೆ. ಶ್ರೀರಾಮುಲುಗೆ ನನ್ನ ಮೇಲೆ ವಿಶ್ವಾಸ ಇದೆ. ಹಾಗಾಗಿ ಅವರು ಬಿಜೆಪಿಗೆ ಬರುವಂತೆ ಹೇಳಿರಬಹುದು. ನನಗೆ ಕಾಂಗ್ರೆಸ್ ಏನೂ ಕಡಿಮೆ ಮಾಡಿಲ್ಲ. ಸಿಎಂ ಅಧಿವೇಶನಕ್ಕೆ ಬಂದು ವಿಧಾನ ಸೌಧದಲ್ಲಿ ಇಳಿಯುತ್ತಿದ್ದಂತೆ ಕಾಲ್ ಬಂದಿದೆ. ಸಿಎಂ ಕಾರಿನಲ್ಲೇ ಕುಂತು ಮಾತನಾಡಿದರು. ಅದೇ ಮಾತು ನನ್ನ ವಿಚಾರ ಎಂದರು.

ನನ್ನ ವಜಾಗೆ ಕಾರಣ ಏನೂ ಅನ್ನೋದು ದೆಹಲಿಗೆ ಹೋದ ನಂತರ ಗೊತ್ತಾಗಲಿದೆ. ಮತಗಳ್ಳತನದ ಹೇಳಿಕೆ ಸೇರಿದಂತೆ ಹಿಂದಿನ ಎಲ್ಲಾ ಹೇಳಿಕೆ ಸೇರಿಸಿ ಹೈಕಮಾಂಡ್‌ಗೆ ಬೇರೆ ರೀತಿ ಅರ್ಥೈಸಿದ್ದಾರೆ. ಪಾರ್ಟಿಯಲ್ಲಿ ವಾಕ್ ಸ್ವಾತಂತ್ರ‍್ಯ ಇದೆ. ನಾನು ಒಳಮೀಸಲಾತಿ ಪರ ಇದ್ದೇನೆ. ಎಡಗೈ ಸಮುದಾಯ ರಾಜಕೀಯ ಪ್ರಾತಿನಿಧ್ಯ ಕುಗ್ಗುತ್ತಿದೆ. ಹಾಗಾಗಿ, ಅವರಿಗೆ ಒಳಮೀಸಲಾತಿ ಕೊಡಬೇಕು. ಸಿಎಂ ಸಿದ್ದರಾಮಯ್ಯರಿಗೆ ಕೂಡ ಒಲವಿದೆ ಎಂದು ಹೇಳಿದರು. ಇದನ್ನೂ ಓದಿ: ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ

ಅಲ್ಲಿ (ಹೈಕಮಾಂಡ್) ಯಾರಾದರು ನನ್ನ ವಿರುದ್ಧ ಹೇಳೋರಲೂ ಇರಬಹುದು. ಅದಕ್ಕೆ ನಾನು ತಲೆ ಕೆಡಿಸಿಕೊಂಡಿಲ್ಲ. ಕಾಣದ ಕೈಗಳ ಕೈವಾಡ ಇದೆ. ಸಿಎಂಗೂ ಗೊತ್ತಿರಲಿಲ್ಲ. ಏಕಾಏಕಿ ನಿರ್ಣಯ ಆಗಿದೆ. ಸಿಎಂ ಏನೂ ಮಾಡೋಕೆ ಆಗಲ್ಲ ಅಂದರು ಎಂದು ತಿಳಿಸಿದರು.

TAGGED:congressK.N Rajannatumakuruಕಾಂಗ್ರೆಸ್ಕೆ.ಎನ್.ರಾಜಣ್ಣತುಮಕೂರು
Share This Article
Facebook Whatsapp Whatsapp Telegram

Cinema News

Green Girl Cinema
`ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್
Cinema Latest Sandalwood
Darshan Pavithra
ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ
Bengaluru City Cinema Court Districts Karnataka Latest Top Stories
Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories

You Might Also Like

Narendra Modi Dwaraka Expressway Inaugrate
Latest

UER-II ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

Public TV
By Public TV
6 minutes ago
Star Air
Belgaum

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – ತುರ್ತು ಭೂಸ್ಪರ್ಶ; ತಪ್ಪಿದ ದುರಂತ

Public TV
By Public TV
20 minutes ago
Trump Modi Putin 1
Latest

2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

Public TV
By Public TV
47 minutes ago
Rubina Shaikh
Crime

ಬಂಧನದಲ್ಲಿದ್ದ ಬಾಂಗ್ಲಾದ ಗರ್ಭಿಣಿ ಮುಂಬೈನ ಜೆಜೆ ಆಸ್ಪತ್ರೆಯಿಂದ ಎಸ್ಕೇಪ್

Public TV
By Public TV
55 minutes ago
Stray Dogs 3
Crime

ಶಾಲಾ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ನಾಯಿ ದಾಳಿ – ಗಾಯಾಳುಗಳು ಆಸ್ಪತ್ರೆಗೆ

Public TV
By Public TV
1 hour ago
KR Market Fire
Bengaluru City

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?