ಚಿಕ್ಕಮಗಳೂರು: ಜೈನ (Jainism) ಧರ್ಮದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಯುವಕನೊಬ್ಬ ಜೈಲುಪಾಲಾಗಿದ್ದಾನೆ.
ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣಕ್ಕೆ (Dharmasthala Mass Burial Case) ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ (Social Media) ಈಗ ಪರ, ವಿರೋಧ ಪೋಸ್ಟ್ಗಳು ಹರಿದಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಒಂದು ಪೋಸ್ಟ್ಗೆ ಅಜ್ಜಂಪುರ ತಾಲೂಕಿನ ಯುವಕ ಉಮೇಶ್ ಗೌಡ ಆಗಸ್ಟ್ 2 ರಂದು ಅಶ್ಲೀಲವಾಗಿ ಕಮೆಂಟ್ ಮಾಡಿದ್ದ. ಇದನ್ನೂ ಓದಿ: ಧರ್ಮಸ್ಥಳದ ವಿರುದ್ಧ ಪೋಸ್ಟ್ ಹಾಕಿದ್ರೆ ಕೇಸ್ ದಾಖಲಾಗಲ್ಲ ಯಾಕೆ: ಅಶ್ವಥ್ನಾರಾಯಣ
ಜೈನ ಧರ್ಮದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕೆಟ್ಟ ಭಾಷೆಯಿಂದ ಕಾಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ ಬಿಎನ್ಎಸ್ ಕಾಯ್ದೆ 196 (1) ಹಾಗೂ 353 (2) ಅಡಿ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈಗ ಉಮೇಶ್ ಗೌಡನನ್ನು ಬಂಧಿಸಿದ್ದು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ಧರ್ಮಸ್ಥಳ ದೇಗುಲದ ವಠಾರದಲ್ಲಿ ಸ್ಥಳ ಮಹಜರು