Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?

Public TV
Last updated: August 17, 2025 6:17 pm
Public TV
Share
3 Min Read
Aniruddha
SHARE

ಅಭಿಮಾನಿ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ (Vishnuvardhan) ಸಮಾಧಿ ನೆಲಸಮ ಆಗುತ್ತಿದ್ದಂತೆಯೇ ಭಾರೀ ಆಕ್ರೋಶ ವ್ಯಕ್ತವಾಯಿತು. ನಟ ಸುದೀಪ್ (Sudeep) ಸೇರಿದಂತೆ ಹಲವರು ಸಮಾಧಿ ನೆಲಸಮ ಆದ ಕುರಿತಂತೆ ಆವೇಶ ಭರಿತ ಮಾತುಗಳನ್ನು ಆಡಿದರು. ಸಮಾಧಿಯ ಜಾಗವನ್ನು ದುಡ್ಡು ಕೊಟ್ಟ ಖರೀದಿಸುವ ಮಾತುಗಳನ್ನು ಸುದೀಪ್ ಆಡಿದರು. ಈ ಕುರಿತಂತೆ ಇವತ್ತು ವಿಷ್ಣು ಮನೆಯಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಸುದೀಪ್ ಅವರ ಹೆಸರನ್ನು ತಗೆದುಕೊಳ್ಳದೇ, ಈವರೆಗೂ ಜಾಗ ಖರೀದಿ ಯಾಕೆ ಮಾಡಿಲ್ಲ? ಅಂತ ಅನಿರುದ್ಧ ಪ್ರಶ್ನೆ ಮಾಡಿದರು. ಈ ಮೂಲಕ ಸುದೀಪ್ ಅವರಿಗೆ ಅನಿರುದ್ಧ (Aniruddha) ಟಾಂಗ್ ಕೊಟ್ಟರಾ? ಅನ್ನುವ ಚರ್ಚೆ ಶುರುವಾಗಿದೆ.

ನಟ ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆದ ಕುರಿತು ಸಾಕಷ್ಟು ಟೀಕೆಗಳು ಕೇಳಿ ಬಂದವು. ಸಮಾಧಿ ನೆಲಸಮ ಆಗಿದ್ದರ ಹಿಂದೆ ಸ್ವತಃ ವಿಷ್ಣುವರ್ಧನ್ ಕುಟುಂಬವೂ ಇದೆ ಅಂತ ಕೆಲವರು ಆರೋಪ ಮಾಡಿದ್ದರು. ಸಮಾಧಿ ಉಳಿಸಿಕೊಳ್ಳಲು ಅಭಿಮಾನಿಗಳು ಮಾಡಿದ ಹೋರಾಟಕ್ಕೆ ವಿಷ್ಣು ಕುಟುಂಬದ ಬೆಂಬಲವಿರಲಿಲ್ಲ ಅನ್ನೋ ಆರೋಪ ಕೂಡ ಕೇಳಿ ಬಂದಿತ್ತು. ದೂರ ಉಳಿಯುವುದಕ್ಕಾಗಿಯೇ ವಿಷ್ಣು ಕುಟುಂಬ ಹಣ ಪಡೆದಿದೆ ಅಂತಾನೂ ಆರೋಪ ಹೊರಸಲಾಗಿತ್ತು. ಈ ಎಲ್ಲದರ ಕುರಿತು ಮಾತನಾಡಲು ವಿಷ್ಣುವರ್ಧನ್ ಅಳಿಯ, ನಟ ಅನಿರುದ್ಧ ಅಭಿಮಾನಿಗಳ ಸಭೆ ಕರೆದಿದ್ದರು. ತಮ್ಮ ಮೇಲಿನ ಆರೋಪಗಳ ಬಗ್ಗೆ ಮಾತಾಡಿದರು. ವಿಷ್ಣು ಸಮಾಧಿ ಕುರಿತಾದ ಹೋರಾಟಕ್ಕೆ ತಮ್ಮ ಬೆಂಬಲವನ್ನೂ ಅವರು ವ್ಯಕ್ತಪಡಿಸಿದರು.

ಬೆಂಗಳೂರಿನ ಅಭಿಮಾನ್‌ ಸ್ಟುಡಿಯೋದಲ್ಲಿದ್ದ (Abhiman Studio) ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿತ್ತು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವಿಷ್ಣುವರ್ಧನ್ ಸಮಾಧಿ ಉಳಿವಿಗಾಗಿ ಹೋರಾಟ ಮಾಡುತ್ತಿದ್ದು, ವಿಷ್ಣು ಅಭಿಮಾನಿಗಳು ಅಕ್ಷರಶಃ ಕಣ್ಣೀರಿಟ್ಟಿದ್ದರು. ಜೊತೆಗೆ ವಿಷ್ಣುವರ್ಧನ್ ಕುಟುಂಬದ ಮೇಲೆಯೇ ಹರಿಹಾಯ್ದಿದ್ದರು. ವಿಷ್ಣು ಸಮಾಧಿ ನೆಲಸಮ ಆಗುವ ವಿಚಾರ, ವಿಷ್ಣು ಕುಟುಂಬಕ್ಕೆ ಮೊದಲೇ ಗೊತ್ತಿತ್ತು. ಅವರು ಅದಕ್ಕಾಗಿ ಹಣ ಪಡೆದಿದ್ದರಿಂದ, ಮೌನಕ್ಕೆ ಜಾರಿದ್ದಾರೆ ಅಂತ ಆರೋಪ ಮಾಡಲಾಗಿತ್ತು. ಸಮಾಧಿ ನೆಲಸಮ ಆಗುವುದರ ಹಿಂದೆ ಸ್ವತಃ ವಿಷ್ಣು ಕುಟುಂಬವೇ ಇದೆ ಅನ್ನುವ ಮಾತು ಕೇಳಿ ಬಂದಿತ್ತು. ಈ ಕುರಿತು ಅನಿರುದ್ಧ ಇದೀಗ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇದನ್ನೂ ಓದಿ: ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ

 

ವಿಷ್ಣುವರ್ಧನ್ ಅವರ ಸಮಾಧಿಯು ನೆಲಸಮ ಆಗಿದ್ದಕ್ಕೆ ವಿಷ್ಣು ಕುಟುಂಬ ಸಂಭ್ರಮಿಸುತ್ತಿದೆ ಅಂತ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡರು. ಸಮಾಧಿ ಜಾಗಕ್ಕೆ ಕುಟುಂಬದವರು ಕಾಲಿಡದೇ ಇರುವ ಕಾರಣಕ್ಕಾಗಿ, ಕೋರ್ಟ್ನಲ್ಲೂ ತಮ್ಮ ಹೋರಾಟಕ್ಕೆ ಹಿನ್ನೆಡೆ ಆಯಿತು ಅಂತ ಕೆಲ ಅಭಿಮಾನಿಗಳು ಮಾಧ್ಯಮಗಳ ಜೊತೆ ಮಾತಾಡಿದ್ದರು. ಈ ಎಲ್ಲದರ ಕುರಿತು ಅನಿರುದ್ಧ ಪ್ರತಿಕ್ರಿಯೆ ನೀಡಿದ್ದಾರೆ. ವಿಷ್ಣುವರ್ಧನ್ ಅವರ ಸಮಾಧಿ ನೆಲಸಮ ಆಗಿದ್ದು ನಮಗೂ ಅಪಾರ ನೋವನ್ನುಂಟು ಮಾಡಿದೆ. ಸಂಭ್ರಮಿಸುವ ವಿಕೃತ ಮನಸ್ಸು ನಮ್ಮದಲ್ಲ ಅಂತ ಅನಿರುದ್ಧ ತಿರುಗೇಟು ನೀಡಿದ್ದಾರೆ. ಕುಟುಂಬದ ಘನತೆಯನ್ನು ಹಾಳು ಮಾಡಲು ಹೊರಟರೆ, ಕಾನೂನು ಮೂಲಕ ಉತ್ತರ ಕೊಡುತ್ತೇವೆ ಅಂತ ಎಚ್ಚರಿಕೆಯನ್ನೂ ಅವರು ಕೊಟ್ಟಿದ್ದಾರೆ.

ಬೆಂಗಳೂರಿನ ವಿಷ್ಣುವರ್ಧನ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಭಿಮಾನಿಗಳ ಪ್ರಶ್ನೆಗಳನ್ನು ಆಲಿಸಿದ ಅನಿರುದ್ಧ, ಅಭಿಮಾನಿ ಸ್ಟುಡಿಯೋದಲ್ಲಿ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ತಮ್ಮ ಕುಟುಂಬದ ಬೆಂಬಲವಿದೆ ಎಂದು ಹೇಳಿದ್ದಾರೆ. ಅಭಿಮಾನ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸಮಾಧಿ ಉಳಿಯಬೇಕು ಅಂತ ಬಯಸಿದ್ದವರಲ್ಲಿ ನಾನೂ ಒಬ್ಬ. ಈಗಲೂ ಹೋರಾಟ ಮುಂದುವರೆಯುತ್ತದೆ ಅಂದರೆ, ಕಂಡಿತಾ ನಮ್ಮ ಕುಟುಂಬದ ಬೆಂಬಲ ಇದ್ದೇ ಇರುತ್ತದೆ ಅಂತ ಅನಿರುದ್ಧ ಘೋಷಿಸಿದ್ದಾರೆ. ಸಮಾಧಿ ನೆಲಸಮ ಆಗಿದ್ದರ ಹಿಂದೆ ತಾವಾಗಲಿ, ತಮ್ಮ ಕುಟುಂಬವಾಗಲಿ ಇಲ್ಲ ಅನ್ನುವುದನ್ನು ಸ್ಪಷ್ಟ ಪಡಿಸಿದ್ದಾರೆ. ಇದರ ಜೊತೆಗೆ ಅಭಿಮಾನ ಸ್ಟುಡಿಯೋದಲ್ಲೇ ಸ್ಮಾರಕ ಆಗಬೇಕು ಅಂತ ತಾವು ಪಟ್ಟಿರುವ ಕಷ್ಟವನ್ನೂ ವಿವರಿಸಿದ್ದಾರೆ. ಅದು ಫಲ ಕೊಡದೇ ಹೋದಾಗ, ಮೈಸೂರಿಗೆ ಶಿಫ್ಟ್ ಮಾಡಲಾಯಿತು ಅಂದಿದ್ದಾರೆ.

 

ಬೆಂಗಳೂರಿನ ಅಭಿಮಾನ ಸ್ಟುಡಿಯೋದಲ್ಲೂ ವಿಷ್ಣುವರ್ಧನ್ ಅವರ ಸಮಾಧಿ ಇರಬೇಕು ಅಂತ ಇದೇ ಸಂದರ್ಭದಲ್ಲಿ ಕೆಲವು ಅಭಿಮಾನಿಗಳು ಆಗ್ರಹಿಸಿದರು. ಸರಕಾರದ ವಿರುದ್ಧ ಘೋಷಣೆ ಕೂಡ ಕೂಗಿದರು. ತಮಗೆ ನ್ಯಾಯ ಸಿಗಬೇಕು ಅಂತ ಕೆಲವರು ಆಗ್ರಹಿಸಿದರು. ಅಭಿಮಾನಿಗಳ ಎಲ್ಲ ಪ್ರಶ್ನೆಗಳಿಗೂ ಅನಿರುದ್ಧ ಸಮಾಧಾನದಿಂದಲೇ ಉತ್ತರಿಸಿದರು. ಇನ್ಮುಂದೆ ತಮ್ಮ ಕುಟುಂಬದ ವಿರುದ್ಧ ಮಾತಾಡಬೇಕಾದರೆ, ಎಚ್ಚರಿಕೆಯಿಂದ ಮಾತಾಡಿ ಅಂತ ಗುಡುಗಿದರು. ತಮ್ಮ ಕುಟುಂಬದ ವಿರುದ್ಧ ಮಾತಾಡುವ ಅಭಿಮಾನಿಗಳ ವಿರುದ್ಧ ದೂರು ನೀಡುವುದಾಗಿಯೂ ಅವರು ಹೇಳಿದ್ದಾರೆ. ಸಮಾಧಿ ನೆಲಸಮ ವಿಚಾರದಲ್ಲಿ ಸ್ಯಾಂಡಲ್ವುಡ್ ಕೂಡ ಆಕ್ರೋಶ ವ್ಯಕ್ತ ಪಡಿಸಿದೆ. ವಿಷ್ಣು ಕುಟುಂಬ ಕೂಡ ಹೋರಾಟಕ್ಕೆ ಜೊತೆಯಾಗುವುದಾಗಿ ತಿಳಿಸಿದೆ. ಸಮಾಧಿಗಾಗಿ ಮತ್ತೊಂದು ಸುತ್ತಿನ ಹೋರಾಟ ನಡೆಯುತ್ತಾ? ಕಾದು ನೋಡಬೇಕು.

TAGGED:Abhiman StudioAniruddhaVishnuvardhanಅನಿರುದ್ಧಅಭಿಮಾನ್ ಸ್ಟುಡಿಯೋವಿಷ್ಣುವರ್ಧನ್ಸುದೀಪ್
Share This Article
Facebook Whatsapp Whatsapp Telegram

Cinema News

Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories
Yo yo singh
ಒಂದೇ ತಿಂಗಳಲ್ಲಿ ಬರೋಬ್ಬರಿ 18 ಕೆಜಿ ತೂಕ ಇಳಿಸಿಕೊಂಡ ಹನಿ ಸಿಂಗ್
Cinema Latest Sandalwood Top Stories
vijayalakshmi
ಪರಪ್ಪನ ಅಗ್ರಹಾರ ಜೈಲಲ್ಲಿ ಗಂಟೆಗಟ್ಟಲೆ ಕಾದು ದರ್ಶನ್ ಭೇಟಿಯಾದ ವಿಜಯಲಕ್ಷ್ಮಿ
Cinema Latest Sandalwood Top Stories
Vishnuvardhan 3
ದಾದಾ ಫ್ಯಾನ್ಸ್‌ಗೆ ಶುಭ ಸುದ್ದಿ – ಬರುತ್ತಿದೆ ಹೊಸ ಸ್ಮಾರಕ
Cinema Latest Top Stories
Willson Garden Blast
ವಿಲ್ಸನ್ ಗಾರ್ಡನ್ ನಿಗೂಢ ಬ್ಲಾಸ್ಟ್ – ಗಾಯಗೊಂಡಿದ್ದ ತಾಯಿ, ಮಗಳು ಸಾವು
Cinema Latest Sandalwood Top Stories

You Might Also Like

Jaishankar Wang Yi
Latest

3 ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಚೀನಾ ವಿದೇಶಾಂಗ ಸಚಿವ ಭೇಟಿ

Public TV
By Public TV
3 hours ago
Bengaluru Nagarathpete fire
Big Bulletin

Video | ನಗರ್ತಪೇಟೆಯಲ್ಲಿ ಮತ್ತೊಂದು ಅಗ್ನಿ ಅವಘಡ – 4 ಅಂತಸ್ತಿನ ಕಟ್ಟಡಕ್ಕೆ ಬೆಂಕಿ

Public TV
By Public TV
3 hours ago
himachal pradesh cloudburst
Latest

ಹಿಮಾಚಲ ಪ್ರದೇಶದಲ್ಲಿ ಮಳೆ ಅವಾಂತರ – ಈವರೆಗೂ 260ಕ್ಕೂ ಅಧಿಕ ಮಂದಿ ಸಾವು

Public TV
By Public TV
3 hours ago
nitish kumar
Latest

ಉಪರಾಷ್ಟ್ರಪತಿ ಚುನಾವಣೆ- ಸಿ.ಪಿ.ರಾಧಾಕೃಷ್ಣನ್‌ಗೆ ಜೆಡಿಯು ಬೆಂಬಲ

Public TV
By Public TV
4 hours ago
Tumakuru Woman Suicide
Crime

Tumakuru | ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

Public TV
By Public TV
4 hours ago
Mobile Laptop
Latest

ಜಿಎಸ್‌ಟಿ ಸ್ಲ್ಯಾಬ್‌ನಲ್ಲಿ ಬದಲಾವಣೆ; ಕಾರು, ಮೊಬೈಲ್, ಕಂಪ್ಯೂಟರ್ – ಯಾವ್ಯಾವುದರ ಬೆಲೆ ಇಳಿಕೆ?

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?