ಬಾಗಲಕೋಟೆ: ಜಿಲ್ಲೆಯ ಕಲಾದಗಿ ಗ್ರಾಮದ ವ್ಯಕ್ತಿಯೊಬ್ಬರು ಇಂದು ಮುಂಜಾನೆ ತಿರುಪತಿಯಿಂದ (Tirupati) ಕಲಾದಗಿ ಕಡೆಗೆ ಬರುವಾಗ ರೈಲಿನಲ್ಲಿ ಹೃದಯಘಾತದಿಂದ (Heart Attack) ಮೃತಪಟ್ಟಿದ್ದಾರೆ.
ಕಲಾದಗಿಯ ಕಟ್ಟಡ ಕಾರ್ಮಿಕನಾಗಿದ್ದ ಯಲ್ಲಪ್ಪ ಅಡಗಲ್ಲ (35) ತಿರುಪತಿಗೆ ತೆರಳಿದ್ದರು. ಇಂದು ಬೆಳಗ್ಗೆ ತಿರುಪತಿಯಿಂದ ಹುಬ್ಬಳಿಗೆ ಬರುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಗಲಕೋಟೆಯ ತೋಟಗಾರಿಕೆ ವಿವಿ ಮುಚ್ಚೋದಿಲ್ಲ- ಚೆಲುವರಾಯಸ್ವಾಮಿ
ಮುಂಜಾನೆ 7:30 ರ ವೇಳೆಗೆ ಯಲ್ಲಪ್ಪ ಮೃತಪಟ್ಟಿದ್ದಾರೆ. ಸದ್ಯ ಶವ ಆಂಧ್ರಪ್ರದೇಶದ ನಂದನೂರು ರೈಲ್ವೆ ನಿಲ್ದಾಣದಲ್ಲಿ ಇಳಿಸಿಕೊಳ್ಳಲಾಗಿದ್ದು, ರೈಲ್ವೆ ಪೊಲೀಸರು ಮೃತನ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ.