Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

Bengaluru City

ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

Public TV
Last updated: August 20, 2025 12:48 pm
Public TV
Share
3 Min Read
Dharmasthala Msk Man Friend Raju Mandya
SHARE

– ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಮಂಡ್ಯ ಮೂಲದ ರಾಜು 
– ಆತ ಹಣಕ್ಕಾಗಿ ಈ ರೀತಿಯ ಆರೋಪ ಮಾಡಿರುವ ಸಾಧ್ಯತೆಯಿದೆ
– ಈಗ ಏನು ಹೇಳಿದ್ದೇನೋ ಅದನ್ನೇ ನಾನು ಎಸ್‌ಐಟಿಗೆ ತಿಳಿಸಿದ್ದೇನೆ

ಬೆಂಗಳೂರು: ಅನಾಮಿಕ ವ್ಯಕ್ತಿ ಹಣಕ್ಕೆ ಧರ್ಮಸ್ಥಳ ದೇವಸ್ಥಾನದ ಮೇಲೆ ಆರೋಪ ಮಾಡಿರುವ ಸಾಧ್ಯತೆಯಿದೆ ಎಂದು ಈ ಹಿಂದೆ ದೇವಸ್ಥಾನದಲ್ಲಿ ಕಸ ಗುಡಿಸುತ್ತಿದ್ದ ಮಂಡ್ಯ ಮೂಲದ ರಾಜು ಹೇಳಿದ್ದಾರೆ.

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ನಾನು ನಾಲ್ಕು ವರ್ಷಗಳ ಕಾಲ ಧರ್ಮಸ್ಥಳದಲ್ಲಿ‌ 10 ವರ್ಷಗಳ ಹಿಂದೆ ಕೆಲಸ ಮಾಡಿದ್ದೇನೆ. ನಮಗೆ ಮಾಹಿತಿ ಕಚೇರಿಯಿಂದ ವಿಷಯ ತಿಳಿಸಲಾಗಿತ್ತು. ಆಗ ನಾವು ಹೆಣಗಳನ್ನು ಎತ್ತಿ ದಡಕ್ಕೆ ತರುತ್ತಿದ್ದೆವು. ನಂತರ ಅದನ್ನು ಅಂಬುಲೆನ್ಸ್‌ ಮೂಲಕ ಬೆಳ್ತಂಗಡಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಸಿದರು.

ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು. ಶವ ಹೂತಿದ್ದರೆ ಮೂಳೆಗಳು ಸಿಗಬೇಕಿತ್ತು. ಜೆಸಿಬಿ ತಂದರೂ ಮೂಳೆ ಸಿಕ್ಕಿಲ್ಲ. ಕೆಲಸ ಕೊಟ್ಟ ಧಣಿಗಳ ಮೇಲೆ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಇದು ಬಹಳ ತಪ್ಪು ಎಂದು ಹೇಳಿದರು. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

 
ಪಬ್ಲಿಕ್‌ ಟಿವಿಗೆ ರಾಜು ತಿಳಿಸಿದ್ದೇನು?
ಮೊದಲು ಇಲ್ಲಿ ನನ್ನ ಅತ್ತೆ, ಮಾವ ಇಲ್ಲಿ ಸಚ್ಛತಾ ಕೆಲಸ ಮಾಡುತ್ತಿದ್ದರು. ನಂತರ ಅವರಿಗೆ ಹುಷಾರಿಲ್ಲದ ಕಾರಣ ನಾನು ಹೋಗಿದ್ದೆ. ಈ ಸಂದರ್ಭದಲ್ಲಿ ನಮ್ಮ ಕುಟುಂಬ ಮತ್ತು ಮಾಸ್ಕ್‌ ಮ್ಯಾನ್‌ ಕುಟುಂಬ ಹತ್ತಿರ ಹತ್ತಿರ ನೆಲೆಸಿದ್ದೆವು.

ನಾನು ದೇವಸ್ಥಾನ, ನೇತ್ರಾವತಿ ಸ್ನಾನಘಟ್ಟ, ಬಾಹುಬಲಿ ಬೆಟ್ಟದಲ್ಲಿ ಕೆಲಸ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ಕೆಲಸದ ಜಾಗ ಬದಲಾವಣೆ ಆಗುತ್ತಿತ್ತು. ಧಣಿಗಳು ಯಾವತ್ತೂ ಆ ಕೆಲಸ ಮಾಡು ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ಎದುರು ಸಿಕ್ಕಿದಾಗ ನಾವು ನಮಸ್ಕಾರ ಮಾಡುತ್ತಿದ್ದೆವು.

ಮಾಹಿತಿ ಕಚೇರಿಯಿಂದ ಬರುತ್ತಿದ್ದ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದ್ದೆವು. ಮಕ್ಕಳು ನಾಪತ್ತೆಯಾಗಿದ್ದರೆ ಮೈಕ್‌ ಮೂಲಕ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಮಾಹಿತಿ ಕಚೇರಿ ಮತ್ತು ನೇತ್ರಾವತಿ ಬಳಿ ಪ್ರಕಟಣೆಯಾಗುತ್ತಿತ್ತು. ಮಕ್ಕಳು ಸಿಕ್ಕಿದರೆ ಮಾಹಿತಿ ಕಚೇರಿಗೆ ಬಿಡುತ್ತಿದ್ದರು. ನಂತರ ಪೋಷಕರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಮಕ್ಕಳನ್ನು ಅವರಿಗೆ ಹಸ್ತಾಂತರ ಮಾಡಲಾಗುತ್ತಿತ್ತು.

ನಾನು ನಾಲ್ಕು ವರ್ಷದ ಕೆಲಸ ಅವಧಿಯಲ್ಲ ನೇತ್ರಾವತಿ ಬಳಿ ಎರಡು ಶವ ಸಿಕ್ಕಿತ್ತು. ಸಿಕ್ಕಿದ ಕೂಡಲೇ ಹೆಣವನ್ನು ಹೂಳುತ್ತಿರಲಿಲ್ಲ. ಶವ ಎತ್ತಿದ ನಂತರ ಅಂಬುಲೆನ್ಸ್‌ ಬರುತ್ತಿತ್ತು. ವೈದ್ಯರು, ಪೊಲೀಸರು ಬರುತ್ತಿದ್ದರು. ನಂತರ ಆ ದೇಹವನ್ನು ಬೆಳ್ತಂಗಡಿಗೆ ಕಳುಹಿಸಲಾಗುತ್ತಿತ್ತು. ನಾನು ಇದ್ದಾಗ ಪುರುಷ ಮತ್ತು ಮಹಿಳೆಯ ಶವ ಸಿಕ್ಕಿತ್ತು. ಅದನ್ನು ಬೆಳ್ತಂಗಡಿಗೆ ತೆಗೆದುಕೊಂಡು ಹೋಗಲಾಗಿತ್ತು. ಸಾವಿರಾರು ಶವ ಸಿಕ್ಕಿದೆ ಎನ್ನುವುದು ಸುಳ್ಳು.

 

ಯಾರು ನೇತ್ರಾವತಿ ಬಳಿ ಕೆಲಸ ಮಾಡುತ್ತಿದ್ದರೋ ಅವರು ಶವವನ್ನು ಎತ್ತುತ್ತಿದ್ದರು. ಶವ ಎತ್ತಿದ ದಿವಸ ನಮ್ಮ ಕೆಲಸಕ್ಕೆ ರಜೆ ಇರುತ್ತಿತ್ತು. ಒಟ್ಟು ನಾಲ್ಕು ಕುಟುಂಬಗಳು ಸ್ವಚ್ಛತಾ ಕೆಲಸ ಮಾಡುತ್ತಿದ್ದವು. ಮಾಹಿತಿ ಕಚೇರಿ ಬಿಟ್ಟರೆ ಬೇರೆ ಯಾರೂ ನಮಗೆ ಆ ಕೆಲಸ ಮಾಡು, ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ನಮಗೆ ಧಣಿಗಳು ಕೈಯಾರೆ ಸಂಬಳ ಕೊಡುತ್ತಿರಲಿಲ್ಲ.

ನಮ್ಮ ಜೊತೆ ಕೆಲಸ ಮಾಡುವಾಗ ಮಾಸ್ಕ್‌ಮ್ಯಾನ್‌ ಚೆನ್ನಾಗಿಯೇ ಇದ್ದ. ನಾವು ಬರುವ ಮೊದಲೇ ಅವರ ಕುಟುಂಬ ಅಲ್ಲಿ ನೆಲೆಸಿತ್ತು. ನಾನು ಕೆಲಸ ಬಿಟ್ಟು ಬಂದ ನಂತರವೂ ಆತ ಅಲ್ಲಿ ಕೆಲಸ ಮಾಡುತ್ತಿದ್ದ. ಆತ ಶವದಿಂದ ಚಿನ್ನ ಕದಿಯುತ್ತಿದ್ದ ವಿಚಾರ ನನಗೆ ಗೊತ್ತಿಲ್ಲ. ನಾನು ಬಿಟ್ಟ ಬಂದ ನಂತರ ಆತ ಯಾಕೆ ಕೆಲಸ ಬಿಟ್ಟ ಅನ್ನೋದು ಗೊತ್ತಿಲ್ಲ.

ಎಸ್‌ಐಟಿಯವರು ನನ್ನನ್ನು ವಿಚಾರಣೆ ನಡೆಸಿದ್ದರು. ನಾನು ಟಿವಿಗೆ ಈಗ ಏನು ಹೇಳುತ್ತಿದ್ದೇನೋ ಅದನ್ನೇ ಹೇಳಿದ್ದೇನೆ. ಮುಂದೆ ಕೋರ್ಟ್‌ನವರು ಏನಾದರೂ ಹೇಳಬೇಕಾದರೂ ಇದನ್ನೇ ಹೇಳುತ್ತೇನೆ. ನಮಗೆ ಉದ್ಯೋಗ, ಅನ್ನ ಕೊಟ್ಟ ಧಣಿಯ ವಿರುದ್ಧ ಈ ರೀತಿ ಸುಳ್ಳು ಹೇಳುವುದು ಸರಿಯಲ್ಲ.

TAGGED:dharmasthalapolicesitಅನಾಮಿಕಎಸ್‍ಐಟಿಧರ್ಮಸ್ಥಳಪೊಲೀಸ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
7 minutes ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
38 minutes ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
40 minutes ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
1 hour ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
1 hour ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?