Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

Latest

ಕ್ರಿಮಿನಲ್ ಕೇಸಲ್ಲಿ ಜನಪ್ರತಿನಿಧಿಗಳ ಬಂಧನವಾದ್ರೆ ಹುದ್ದೆಯಿಂದ ವಜಾ – ಮಸೂದೆ ಮಂಡನೆ, ಲೋಕಸಭೆಯಲ್ಲಿ ಕೋಲಾಹಲ

Public TV
Last updated: August 20, 2025 4:35 pm
Public TV
Share
2 Min Read
Amit Shah Lok Sabha
SHARE

– 3 ಪ್ರಮುಖ ಹೈವೊಲ್ಟೇಜ್ ಬಿಲ್ ಮಂಡನೆ
– ಮಸೂದೆ ಹರಿದು ಅಮಿತ್ ಶಾ ಕಡೆಗೆ ಎಸೆದ ವಿಪಕ್ಷ ನಾಯಕರು

ನವದೆಹಲಿ: ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯ ಸಚಿವರು ಬಂಧನಕ್ಕೊಳಗಾದರೆ, ಅವರನ್ನು ಪದಚ್ಯುತಗೊಳಿಸುವ ಮಸೂದೆಗಳನ್ನು (Criminal MP’s Removal Bill) ಲೋಕಸಭೆಯಲ್ಲಿ ಮಂಡಿಸಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ಸಂವಿಧಾನ (130ನೇ ತಿದ್ದುಪಡಿ) ಮಸೂದೆ 2025, ಕೇಂದ್ರಾಡಳಿತ ಸರ್ಕಾರ (ತಿದ್ದುಪಡಿ) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್‌ರಚನೆ (ತಿದ್ದುಪಡಿ) ಮಸೂದೆ- 2025 ಅನ್ನು ಮಂಡಿಸಿ ಈ ಮೂರೂ ಮಸೂದೆಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಒಪ್ಪಿಸಬೇಕು ಎಂದು ಮನವಿ ಮಾಡಿದರು.

ಮೂರು ಮಸೂದೆಗಳ ಮಂಡನೆ ಬೆನ್ನಲ್ಲೇ ಲೋಕಸಭೆಯಲ್ಲಿ (Lok Sabha) ಕೋಲಾಹಲ ಸೃಷ್ಟಿಯಾಯಿತು. ವಿರೋಧ ಪಕ್ಷದ ನಾಯಕರು ಮಸೂದೆಯ ಪ್ರತಿಗಳನ್ನು ಹರಿದು ಅಮಿತ್ ಶಾ ಕಡೆಗೆ ಎಸೆದರು. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಿರೋಧ ಪಕ್ಷಗಳ ವರ್ತನೆಗೆ ಸ್ಪೀಕರ್ ಓಂ ಬಿರ್ಲಾ ಆಕ್ರೋಶ ಹೊರ ಹಾಕಿದರು.

ಅಮಿತ್ ಶಾ ಅವರನ್ನು ಬಂಧಿಸಿದಾಗ ಅವರು ತಮ್ಮ ನೈತಿಕತೆಯನ್ನು ಪ್ರದರ್ಶಿಸಿದ್ದಾರೆಯೇ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನನ್ನ ವಿರುದ್ಧ ಆರೋಪಗಳು ಕೇಳಿ ಬಂದಾಗ, ಬಂಧನಕ್ಕೂ ಮುನ್ನ ನಾನು ನೈತಿಕವಾಗಿ ರಾಜೀನಾಮೆ ನೀಡಿದ್ದೇನೆ. ನ್ಯಾಯಾಲಯದಿಂದ ನಾನು ನಿರಪರಾಧಿ ಎಂದು ಸಾಬೀತಾಗುವವರೆಗೆ ನಾನು ಯಾವುದೇ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡಿಲ್ಲ ಎಂದು ಹೇಳಿದರು.

ಮಸೂದೆಯಲ್ಲಿ ಏನಿದೆ?
* ಗಂಭೀರ ಸ್ವರೂಪದ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಅಥವಾ ರಾಜ್ಯಗಳ ಸಚಿವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿದಾಗ ಅಂಥಹವರನ್ನು ಹುದ್ದೆಗಳಿಂದ ಪದಚ್ಯುತಗೊಳಿಸುವ ಪ್ರಕ್ರಿಯೆಗೆ ಕಾನೂನು ಚೌಕಟ್ಟು ವಿಧಿಸಲು ಈ ಮಸೂದೆಗಳನ್ನು ರೂಪಿಸಲಾಗಿದೆ
* 30 ದಿನಗಳ ಕಾಲ ನಿರಂತರ ಬಂಧನದಲ್ಲಿದ್ದವರನ್ನು 31ನೇ ದಿನ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸಲಾಗುತ್ತದೆ.
* ಬಂಧನದಿಂದ ಬಿಡುಗಡೆ ಆದವರನ್ನು ಪ್ರಧಾನಮಂತ್ರಿ, ಮುಖ್ಯಮಂತ್ರಿ ಅಥವಾ ಸಚಿವರನ್ನಾಗಿ ನೇಮಿಸಲು ಯಾವುದೇ ನಿರ್ಬಂಧ ಇರುವುದಿಲ್ಲ
* ಇದಕ್ಕಾಗಿ ಸಂವಿಧಾನದ 75ನೇ ವಿಧಿಗೆ ಸೆಕ್ಷನ್ 5(ಎ) ಅನ್ನು ಸೇರ್ಪಡೆ ಮಾಡಲಾಗುತ್ತಿದೆ
* ಈ ನಿಯಮದ ಪ್ರಕಾರ, ಹಾಲಿ ಜಾರಿಯಲ್ಲಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾದ ಅಪರಾಧಕ್ಕಾಗಿ ಸತತ 30 ದಿನಗಳಿಂದ ಬಂಧನದಲ್ಲಿರುವ ಅಥವಾ ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಗೆ ಒಳಗಾದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಪ್ರಧಾನಿಯು 31ನೇ ದಿನದಂದು ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಬೇಕು.
* ಪ್ರಧಾನಿಯು, ಶಿಫಾರಸು ಮಾಡದಿದ್ದರೂ ಅಂಥಹ ಸಚಿವರು 31ನೇ ದಿನದಂದು ಅಧಿಕಾರ ಕಳೆದುಕೊಳ್ಳುತ್ತಾರೆ.
* ಇದೇ ನಿಯಮ ರಾಜ್ಯಗಳಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅನ್ವಯಿಸಲಿದೆ.
* ರಾಜ್ಯಗಳಲ್ಲಿ ರಾಜ್ಯಪಾಲರು ಪದಚ್ಯುತಗೊಳಿಸುವ ಅಧಿಕಾರ ಹೊಂದಿರುತ್ತಾರೆ.
* ದೆಹಲಿ ಮತ್ತು ಇತರ ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದಂತೆ ರಾಷ್ಟ್ರಪತಿಯವರು ಹಾಗೂ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಅಲ್ಲಿನ ಲೆಫ್ಟಿನೆಂಟ್ ಗವರ್ನರ್ ಅವರು ಸಕ್ಷಮ ಪ್ರಾಧಿಕಾರಿಗಳಾಗಿರುತ್ತಾರೆ.
* ಹಾಲಿ ಇರುವ ನಿಯಮಗಳ ಅನ್ವಯ, ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣಗಳಲ್ಲಿ 2 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆಗೆ ಗುರಿಯಾದರೆ ಮಾತ್ರವೇ ತಮ್ಮ ಜನಪ್ರತಿನಿಧಿ ಸ್ಥಾನಮಾನ ಕಳೆದುಕೊಳ್ಳುತ್ತಾರೆ. ಜೊತೆಗೆ ಶಿಕ್ಷೆ ಮುಗಿದ ಬಳಿಕ ಮತ್ತೆ 5 ವರ್ಷ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಇಲ್ಲ.

TAGGED:Amit ShahCriminal Mps Removal Billlok sabhaNew Delhiಅಮಿತ್ ಶಾಕ್ರಿಮಿನಲ್ ಕೇಸ್ನವದೆಹಲಿಲೋಕಸಭೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ELEPHANT
Districts

ಪೊನ್ನಂಪೇಟೆಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

Public TV
By Public TV
10 minutes ago
Jairam Ramesh
Latest

ಪಾಕ್‌ ಮಧ್ಯಸ್ಥಿತಿಕೆ|ಭಾರತದ ರಾಜತಾಂತ್ರಿಕತೆಗೆ ದೊಡ್ಡ ಹಿನ್ನಡೆ: ಜೈರಾಮ್‌ ರಮೇಶ್‌

Public TV
By Public TV
26 minutes ago
Accident Sakleshpura
Crime

ಕೇರಳಕ್ಕೆ ಮತ ಚಲಾಯಿಸಲು ಹೊರಟಿದ್ದಾಗ ಕಾರು ಅಪಘಾತ – ವ್ಯಕ್ತಿಯ ಸ್ಥಿತಿ ಗಂಭೀರ

Public TV
By Public TV
37 minutes ago
Iran Uranium Enrichment 3
Latest

ಯುರೇನಿಯಂ ಸಂವರ್ಧನೆ ತನ್ನ ಸಾರ್ವಭೌಮ ಹಕ್ಕು – ಇರಾನ್‌ ಪ್ರಸ್ತಾಪಕ್ಕೆ ಅಮೆರಿಕ ಒಪ್ಪಿಗೆ ನೀಡಿದ್ಯಾ? ಯಾಕೆ ಈ ಗೊಂದಲ?

Public TV
By Public TV
1 hour ago
Gold Silver 2
Bengaluru City

ಇರಾನ್, ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

Public TV
By Public TV
1 hour ago
Bagalkote Lovers Suicide
Bagalkot

ಪ್ರೇಯಸಿ ಆತ್ಮಹತ್ಯೆ – ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?