Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆರೆಗಳ ಬಫರ್ ಝೋನ್ ಕಡಿಮೆ ಮಾಡೋ ವಿಧೇಯಕ ವಿಧಾನ ಪರಿಷತ್‌ನಲ್ಲಿ ಪಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆರೆಗಳ ಬಫರ್ ಝೋನ್ ಕಡಿಮೆ ಮಾಡೋ ವಿಧೇಯಕ ವಿಧಾನ ಪರಿಷತ್‌ನಲ್ಲಿ ಪಾಸ್

Bengaluru City

ಕೆರೆಗಳ ಬಫರ್ ಝೋನ್ ಕಡಿಮೆ ಮಾಡೋ ವಿಧೇಯಕ ವಿಧಾನ ಪರಿಷತ್‌ನಲ್ಲಿ ಪಾಸ್

Public TV
Last updated: August 20, 2025 6:26 pm
Public TV
Share
3 Min Read
ns boseraju
SHARE

ಬೆಂಗಳೂರು: ಕೆರೆಗಳ ವಿಸ್ತೀರ್ಣ ಅನುಗುಣವಾಗಿ ಬಫರ್ ಝೋನ್ (Buffer Zone Of Lakes) ನಿಗದಿಗೊಳಿಸುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ಕಾಯ್ದೆಗೆ (Karnataka Lake Conservation and Development Authority Amendment Act) ವಿರೋಧ ಪಕ್ಷದ ಸದಸ್ಯರ ಸಭಾತ್ಯಾಗ ನಡುವೆಯೂ ವಿಧೇಯಕ ವಿಧಾನ ಪರಿಷತ್‌ನಲ್ಲಿ (Legislative Council)  ಪಾಸ್ ಆಗಿದೆ.

ವಿಧೇಯಕ ಮಂಡಿಸಿ ಮಾತನಾಡಿದ ಸಣ್ಣ ನೀರಾವರಿ ಇಲಾಖೆ ಸಚಿವ ಎನ್‌ಎಸ್ ಬೋಸರಾಜು, ರಾಜ್ಯದ ಕೆರೆಗಳ ಬಫರ್ ಝೋನ್ 30 ಮೀಟರ್ ನಿಗದಿ ಮಾಡಲಾಗಿತ್ತು. ಇದೀಗ ಕೆರೆಗಳ ಅನುಗುಣವಾಗಿ ಬಫರ್ ಜೋನ್ ನಿಗದಿಪಡಿಸಲಾಗುತ್ತಿದೆ. 5 ಗುಂಟೆವರೆಗೆ 0 ಮೀಟರ್, 5 ಗುಂಟೆಯಿಂದ 1 ಎಕರೆಯವರೆಗೆ 3 ಮೀಟರ್, 1-10 ಎಕರೆಯವರೆಗೆ 6 ಮೀಟರ್, 10-25 ಎಕರೆಯವರೆಗೆ 12 ಮೀಟರ್, 25 -100 ಎಕರೆಯವರೆಗೆ 24 ಮೀಟರ್ ಮತ್ತು 100 ಎಕರೆಗಿಂತ ದೊಡ್ಡದಾದ ಕೆರೆಗಳಿಗೆ 30 ಮೀಟರ್ ಬಫರ್ ವಲಯ ನಿಗದಿ ಮಾಡಲಾಗಿದೆ. ಬಫರ್ ಝೋನ್‌ಗಳಲ್ಲಿ ರಸ್ತೆ, ಸೇತುವೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ದಿಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ಇದನ್ನೂ ಓದಿ: ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಆದಾಯ ಖೋತಾ: ಪ್ರಹ್ಲಾದ್ ಜೋಶಿ ಆರೋಪ

ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ಮಾಡಿದರು. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಇಂದು ವೇಗವಾಗಿ ಬೆಂಗಳೂರು ಬೆಳೆಯುತ್ತಿದೆ. ಜನಸಂಖ್ಯೆ ಅನುಗುಣವಾಗಿ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿಲ್ಲ. ಕೆರೆ ಸಂರಕ್ಷಣೆ ಕಾಯ್ದೆಗೆ ತಿದ್ದುಪಡಿಯಿಂದ ಬಫರ್ ವಲಯದ ಗಾತ್ರ ಕಡಿಮೆಯಾಗುವುದರಿಂದ ಕೆರೆಗಳ ನಾಶವಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮಳೆ ಬಂದರೆ ಮನೆಗಳಿಗೆ ನೀರು ನುಗ್ಗುತ್ತಿದೆ. ಕೆರ ಪ್ರದೇಶ ಅತಿಕ್ರಮಿಸಿದ ಪರಿಣಾಮ ರಸ್ತೆ ಹಾಗೂ ಮನೆಗಳಿಗೆ ನೀರು ನುಗ್ಗುತ್ತಿದೆ. ರಾಜಕಾಲುವೆ ತೆರವು ವಿಚಾರದಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿವೆ ಎಂಬುದನ್ನ ಒಪ್ಪಿಕೊಳ್ಳಬೇಕಾಗಿದೆ ಎಂದರು. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಕೆರೆ ಸುರಕ್ಷತೆ ಸಂಬಂಧಿಸಿದಂತೆ ಕೆ.ಟಿ.ರಾಮಸ್ವಾಮಿ, ಲಕ್ಷ್ಮಣ್ ರಾವ್, ಯಲ್ಲಪ್ಪ, ಹಾಗೂ ಕೋಳಿವಾಡ ಅವರು ನೀಡಿದ ವರದಿಯನ್ನ ಅಧ್ಯಯನ ನಡೆಸಬೇಕಿದೆ. ಹೀಗಾಗಿ ಇದನ್ನ ಜಂಟಿ ಸದನ ಸಮಿತಿಗೆ ನೀಡಬೇಕಿದೆ ಎಂದು ಆಗ್ರಹಿಸಿದರು. ಸಿ.ಟಿ ರವಿ, ರವಿಕುಮಾರ್ ಸೇರಿ ಬಿಜೆಪಿ ಸದಸ್ಯರು ಬಿಲ್ ವಿರೋಧ ಮಾಡಿ ಜಂಟಿ ಸದನ ಸಮಿತಿ ರಚನೆ ಮಾಡುವಂತೆ ಒತ್ತಾಯ ಮಾಡಿದರು. ಇದನ್ನೂ ಓದಿ: ಪೋಕ್ಸೊ ಪ್ರಕರಣದಲ್ಲಿ ಮಹಿಳೆಗೆ 20 ವರ್ಷ ಜೈಲು

ಬಳಿಕ ಮಾತನಾಡಿದ ಸಚಿವ ಎನ್‌ಎಸ್ ಬೋಸರಾಜು, ಕೆರೆಗಳ ಸಂರಕ್ಷಣೆ ಸರ್ಕಾರದ ಆದ್ಯತೆಯಾಗಿದೆ. ರಾಜ್ಯದಲ್ಲಿ 41,849 ಕೆರೆಗಳಿವೆ. 35,985 ಕೆರೆಗಳ ಸರ್ವೇ ಕಾರ್ಯ ಮುಗಿದಿದ್ದು, 5,687 ಕೆರೆಗಳ ಸರ್ವೇ ಬಾಕಿಯಿದೆ. ಒತ್ತುವರಿಯಾದ 13,644 ಕೆರೆಗಳ ಪೈಕಿ 7,987 ಕೆರೆಗಳಲ್ಲಿ ಒತ್ತುವರಿ ತೆರವುಗೊಳಿಸಲಾಗಿದೆ. 5,687 ಕೆರೆಗಳ ಒತ್ತುವರಿ ತೆರವು ಮಾಡಬೇಕಿದೆ. ಪ್ರತಿ ತಿಂಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಸಭೆ ನಡೆಸಿ ತೆರವು ಕಾರ್ಯ ಚುರುಕುಗೊಳಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರದ ಮೆಪ್ಪಾಡಿಗೆ ಕರ್ನಾಟಕ ಸರ್ಕಾರದಿಂದ 10 ಕೋಟಿ ಹಣ

ಇಂದು ಬೆಂಗಳೂರು ನಗರದಲ್ಲಿರುವ ಕೆರೆಗಳಲ್ಲಿ ಎನ್‌ಜಿಟಿ ಆದೇಶದಂತೆ 30 ಮೀಟರ್ ಬಫರ್ ಜೋನ್ ಇಲ್ಲವಾಗಿದೆ. ಕೆರೆಗಳ ಸಂರಕ್ಷತೆ ಜೊತೆ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ತಿದ್ದುಪಡಿ ವಿಧೇಯಕದ ಉದ್ದೇಶವಾಗಿದೆ. ಹೀಗಾಗಿ ಮಸೂದೆಯನ್ನ ಅಂಗೀಕರಿಸಬೇಕೆಂದು ಮನವಿ ಮಾಡಿದರು. ತಿದ್ದುಪಡಿ ಕಾಯ್ದೆಗೆ ವಿರೋಧ ಪಕ್ಷದ ಸದಸ್ಯರು ವಿರೋಧಿಸಿ ಸಭಾತ್ಯಾಗ ಮಾಡಿದರು. ಅಂತಿಮವಾಗಿ ವಿಧೇಯಕ ಅಂಗೀಕಾರವಾಯಿತು. ಇದನ್ನೂ ಓದಿ: ಸಿದ್ದರಾಮಯ್ಯ ನಮಗೆ ಸಿಎಂ ಅಲ್ಲ, ನಮಗೆ ಡಿಕೆಶಿಯೇ ಸಿಎಂ: ಅಶೋಕ್‌

TAGGED:bengaluruBuffer ZonecongresslakeLegislative CouncilNS Bosarajuಎನ್‌ಎಸ್ ಬೋಸರಾಜುಕಾಂಗ್ರೆಸ್ಕೆರಗಳ ಬಫರ್ ಝೋನ್ಬಿಜೆಪಿಬೆಂಗಳೂರುವಿಧಾನ ಪರಿಷತ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
22 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
34 minutes ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
37 minutes ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
49 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
1 hour ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?