ಬೆಂಗಳೂರು: ಈ ಬಾರಿ ದಸರಾವನ್ನು (Mysuru Dasara) ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ (Banu Mushtaq) ಉದ್ಘಾಟನೆ ಮಾಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಕರ್ನಾಟಕದ ಒಬ್ಬ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಬಹಳ ಸಂತೋಷ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು. ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿರುವ ಪ್ರಗತಿ ಪರ ಚಿಂತಕರು. ಹಾಗಾಗಿ ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದೇವೆ ಎಂದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್- ಮೊದಲ ಬಾರಿಗೆ ಮೌನ ಮುರಿದ ಸಿಎಂ
ಈ ಬಾರಿ 11 ದಿನ ದಸರಾ ನಡೆಯಲಿದೆ. ಸೆಪ್ಟೆಂಬರ್ 22ರಿಂದ ದಸರಾ ಆರಂಭ ಆಗಲಿದ್ದು, ಅಕ್ಟೋಬರ್ 2 ರಂದು ವಿಜಯದಶಮಿ ಇದೆ. ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸ್ಪಷ್ಟಪಡಿಸಿದರು.