Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ?

Karnataka

ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ?

Public TV
Last updated: August 27, 2025 11:06 am
Public TV
Share
3 Min Read
moon ganesha 1
SHARE

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿದ್ದು ಗಣೇಶ ಹಬ್ಬಕ್ಕೂ (Ganesh Chaturthi) ಕಥೆಯಿದೆ. ಈ ದಿನದಂದು ಚಂದ್ರನನ್ನು (Moon) ನೋಡಬಾರದೆಂಬ ನಂಬಿಕೆ ಇದೆ.

ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದೆನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೇವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದ್ರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ ಕೆಲವೆಡೆ ಚಾಲ್ತಿಯಲ್ಲಿದೆ.

ಚಂದ್ರನನ್ನು ಯಾಕೆ ನೋಡಬಾರದು?
ಮೊದಲ ದಿನ ತಾಯಿ ಸ್ವರ್ಣಗೌರಿಯ ಹಬ್ಬ. ಮಾರನೆ ದಿನವೇ ಗಣೇಶನ ಹಬ್ಬ. ತಾಯಿಯನ್ನು ಮರಳಿ ಕರೆದುಕೊಂಡು ಹೋಗುವ ಕೆಲಸ ಗಣಪನದಾಗಿರುವುದರಿಂದ, ತಾಯಿ ಭೂಲೋಕಕ್ಕೆ ಬಂದ ಮಾರನೆ ದಿನವೇ ಅಜ್ಜಿ ಮನೆಗೆ ಬಂದು, ಅಜ್ಜಿ ಮನೆಯಲ್ಲಿ ಮಾಡಿದ ವಿವಿಧ ಭಕ್ಷ್ಯ ಭೋಜನಗಳನ್ನು ಭಕ್ಷಿಸಿ ತಾಯಿಯೊಂದಿಗೆ ಹಿಂದಿರುಗುತ್ತಿರುತ್ತಾನೆ. ಗಣಪತಿ ತನ್ನ ವಾಹನವಾದ ಇಲಿಯ ಮೇಲೆ ಕುಳಿತುಕೊಂಡು ಚಂದ್ರಲೋಕಕ್ಕೆ ಬರುತ್ತಾನೆ. ಇದನ್ನೂ ಓದಿ: ಗಣೇಶನಿಗೆ ಮೊದಲ ಪೂಜೆ ಯಾಕೆ?

moon ganesha

ಈ ವೇಳೆ ಚಂದ್ರನು ಗಣೇಶನನ್ನು ನೋಡುತ್ತಾನೆ. ಸರ್ವಾಂಗ ಸುಂದರನಾಗಿರುವ ಚಂದ್ರ, ಗಣಪತಿಯ ಆನೆ ಮುಖ, ಡೊಳ್ಳುಹೊಟ್ಟೆ ಮತ್ತು ವಾಹನ ಇಲಿಯನ್ನು ನೋಡಿ ಹಾಸ್ಯ ಮಾಡಿ ನಕ್ಕು ಬಿಡುತ್ತಾನೆ. ಇದನ್ನು ಕಂಡ ಗಣಪತಿಗೆ ಸಿಟ್ಟು ಬರುತ್ತದೆ.

ಸಿಟ್ಟಾದ ಗಣಪತಿ `ಎಲೈ ಚಂದ್ರನೇ ನಿನಗೆ ನಿನ್ನ ಸೌಂದರ್ಯದ ಮದ ಹೆಚ್ಚಾಗಿದೆ. ಎಲ್ಲ ಲೋಕಗಳಲ್ಲೂ ಪೂಜಿಸುತ್ತಿರುವ ನನ್ನನ್ನು ನೀನು ಮಾತ್ರ ಹಾಸ್ಯ ಮಾಡಿ ನಗುತ್ತಿರುವೆಯಾ? ಮೂರ್ಖ. ಇದೋ.. ನಿನ್ನ ಅಹಂಕಾರಕ್ಕೆ ತಕ್ಕ ಪ್ರತಿಫಲ ಅನುಭವಿಸು. ನಿನ್ನ ಅಹಂಕಾರಕ್ಕೂ ಅಜ್ಞಾನಕ್ಕೂ ಕಾರಣವಾಗಿರುವ ನಿನ್ನ ಸೌಂದರ್ಯ ಕುಗ್ಗಿ ಹೋಗಲಿ. ಇನ್ನು ಮುಂದೆ ನನ್ನ ಹುಟ್ಟಿದ ದಿನವಾದ ಭಾದ್ರಪದ ಚೌತಿಯಂದು ನಿನ್ನನ್ನು ನೋಡುವವರು ಸುಳ್ಳು ಅಪವಾದಾಕ್ಕೆ ಗುರಿಯಾಗಲಿ’ ಎಂದು ಚಂದ್ರನಿಗೆ ಶಾಪ ಹಾಕುತ್ತಾನೆ. ಇದನ್ನೂ ಓದಿ: ಗಣೇಶ ಮೋದಕ ಪ್ರಿಯ ಯಾಕೆ?

ಗಣಪತಿಯ ಶಾಪದಿಂದ ಚಂದ್ರನ ಅಹಂಕಾರವೆಲ್ಲ ಕೆಲವೇ ಕ್ಷಣಗಳಲ್ಲಿ ಇಳಿದು ಹೋಯಿತು. ತನ್ನ ತಪ್ಪಿನ ಅರಿವಾಗಿ ಪಶ್ಚತ್ತಾಪ ಪಡುತ್ತಾ ಗಣಪತಿ ಮುಂದೆ ಕೈ ಮುಗಿದು ಕ್ಷಮೆ ಕೇಳುತ್ತಾನೆ. `ಸ್ವಾಮಿ ನನ್ನ ಅಜ್ಞಾನವನ್ನು ಮನ್ನಿಸು. ನನಗೆ ಕೊಟ್ಟ ಶಾಪವನನ್ನು ವಾಪಸ್ ತೆಗೆದುಕೊ’ ಅಂತ ಗಣಪತಿ ಮುಂದೆ ಚಂದ್ರ ಅಂಗಲಾಚಿಕೊಳ್ಳುತ್ತಾನೆ.

 

ಚಂದ್ರನ ಮೊರೆಗೆ ಗಣಪತಿ ಮನಸ್ಸು ಕರಗಿ ಶಾಂತನಾಗುತ್ತಾನೆ. ಹೀಗಾಗಿ ಚಂದ್ರನನ್ನು ಸಂತೈಸಿ `ನಿನಗೆ ನಿನ್ನ ತಪ್ಪಿನ ಅರಿವಾಗಿದೆ. ನಿನ್ನ ಅಹಂಕಾರ ಇಳಿಸುವುದೇ ನನಗೆ ಮುಖ್ಯವಾಗಿತ್ತು. ಆದ್ರೆ ಈವಾಗ ಏನ್ ಮಾಡಿದರೂ ನನ್ನ ಶಾಪ ಯಾವತ್ತಿಗೂ ಸುಳ್ಳಾಗದು. ಆದ್ರೆ ಚೌತಿಯಂದು ನಿನ್ನನ್ನು ನೋಡಿ ಅಪವಾದಕ್ಕೆ ಗುರಿಯಾದವರು ಇತರ ತಿಂಗಳುಗಳ ಕೃಷ್ಣಪಕ್ಷದ ಚತುರ್ಥಿಯಂದು ನಿನ್ನನ್ನು ನೋಡಿದ ನಂತರವೇ ಎಲ್ಲರೂ ಊಟಮಾಡಲಿ. ಸಂಕಷ್ಟ ಚತುರ್ಥಿಯಂದು ನಿನ್ನ ದರ್ಶನವಾಗದೆ ಯಾರೂ ಭೋಜನವನ್ನು ಸ್ವೀಕರಿಸುವುದಿಲ್ಲ’ ಅಂತ ಗಣಪತಿ ಹೇಳುತ್ತಾನೆ. ಗಣಪತಿಯ ಮಾತು ಕೇಳಿ ಚಂದ್ರ ಸಂತಸ ವ್ಯಕ್ತಪಡುತ್ತಾನೆ.

ಈ ಕಾರಣದಿಂದ ಚೌತಿಯಂದು ಚಂದ್ರನನ್ನು ನೋಡಬಾರದು ಅಂತ ಹಿರಿಯರು ಹೇಳುತ್ತಾರೆ. ಈ ನಂಬಿಕೆ ಇಂದಿಗೂ ಕೆಲವು ಕಡೆಗಳಲ್ಲಿ ಇದ್ದು, ರಾತ್ರಿಯಾಗುತ್ತಿದ್ದಂತೆಯೇ ಹೊರಗಡೆ ತೆರಳುವ ತಮ್ಮ ಮಕ್ಕಳಿಗೆ ಹಿರಿಯರು ತಪ್ಪಿಯೂ ಇಂದು ಆಕಾಶ ನೋಡಬೇಡ ಅಂತ ಹೇಳುತ್ತಾರೆ. ಒಟ್ಟಿನಲ್ಲಿ ದೇಶದಾದ್ಯಂತ ಗಣೇಶ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಬೆಳ್ಳಿ ಅಥವಾ ಮ‌ಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ, ವೃತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ ಮೋದಕ, ಕಡುಬು ಮೊದಲಾದ ಸಿಹಿತಿಂಡಿ ಮಾಡಿ ಗಣಪತಿಗೆ ನೈವೇದ್ಯ ಮಾಡಲಾಗುತ್ತದೆ. ಅಲ್ಲದೇ ದೇಗುಲಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಲಾಗುತ್ತದೆ.

TAGGED:ganapathiganesh chaturthimoonಗಣಪತಿಗಣೇಶ ಚತುರ್ಥಿಚಂದ್ರ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Kodagu
Latest

ಇರಾನ್ ಮೇಲೆ ಅಮೆರಿಕ -ಇಸ್ರೇಲ್ ಜಂಟಿ ದಾಳಿ; ಇಂಟಲಿಜೆನ್ಸ್‌ ಕಚೇರಿ ಸೇರಿ 30 ಗುರಿಗಳು ಟಾರ್ಗೆಟ್‌

Public TV
By Public TV
30 seconds ago
Bolivian Air Force
Latest

ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ವಾಯುಪಡೆಯ ವಿಮಾನ ಪತನ – 15 ಮಂದಿ ಸಾವು

Public TV
By Public TV
31 minutes ago
Haveri Ranebennuru hall ticket
Crime

ಫೀಸ್ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದ ಆಡಳಿತ ಮಂಡಳಿ – ಪುಕ್ಸಟ್ಟೆ ಕಲಿಸ್ತಾರಾ ಅಂತ ಶಿಕ್ಷಕಿ ಕಿರಿಕ್‌,  ವಿದ್ಯಾರ್ಥಿನಿ ಪರದಾಟ

Public TV
By Public TV
49 minutes ago
heart attack
Belgaum

ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

Public TV
By Public TV
58 minutes ago
DK SURESH
Bengaluru City

ಹೊರೆ ಆಗುತ್ತೆ ಅಂದ್ರೆ ಗ್ಯಾರಂಟಿ ಕೊಡೋ ಮುಂಚೆನೇ ಚಿಂತನೆ ಮಾಡಬೇಕಾಗಿತ್ತು: ಡಿಕೆ ಸುರೇಶ್‌

Public TV
By Public TV
1 hour ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರವೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?