Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವಿಬ್ಬರು, ನಮಗೆ ಮೂವರು – ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾವಿಬ್ಬರು, ನಮಗೆ ಮೂವರು – ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್

Latest

ನಾವಿಬ್ಬರು, ನಮಗೆ ಮೂವರು – ಪ್ರತಿ ಕುಟುಂಬವೂ ಮೂರು ಮಕ್ಕಳನ್ನ ಹೊಂದಬೇಕು: ಮೋಹನ್ ಭಾಗವತ್

Public TV
Last updated: August 28, 2025 8:41 pm
Public TV
Share
2 Min Read
Mohan Bhagwat 2 1
SHARE

– ಸರಿಯಾದ ವಯಸ್ಸಿನಲ್ಲಿ ಮದ್ವೆಯಾದ್ರೆ ಪೋಷಕರು, ಮಕ್ಕಳು ಆರೋಗ್ಯವಾಗಿರ್ತಾರೆ
– ಹಿಂದೂಗಳು ಎಲ್ಲವನ್ನೂ ಕಿತ್ತುಕೊಳ್ತಾರೆ ಅಂತ ಭಾವಿಸುವಂತೆ ಮಾಡಲಾಗಿದೆ; ಕಳವಳ

ನವದೆಹಲಿ: ಭಾರತದ ಪ್ರತೀ ಕುಟುಂಬವು ಮೂರು ಮಕ್ಕಳನ್ನು ಹೊಂದಬೇಕು, ಇದು ದೇಶಕ್ಕೂ ಒಳ್ಳೆಯದು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ (Mohan Bhagwat) ಹೇಳಿದರು.

ಆರ್‌ಎಸ್‌ಎಸ್‌ (RSS) 100 ವರ್ಷಗಳನ್ನು ಪೂರೈಸಿದ ಹಿನ್ನೆಲೆ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಪ್ರತೀ ಕುಟುಂಬವು ಮೂರು ಮಕ್ಕಳನ್ನು ಹೊಂದಬೇಕು, ಇದು ದೇಶಕ್ಕೂ ಒಳ್ಳೆಯದು. ಮೂರಕ್ಕಿಂತ ಕಡಿಮೆ ಜನನದರ (Birth Rate) ಹೊಂದಿರುವ ಸಮುದಾಯಗಳು ನಿಧಾನವಾಗಿ ನಶಿಸಿಹೋಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಎಲ್ಲಾ ದೇಶಗಳಲ್ಲೂ ಈ ಪ್ರಕ್ರಿಯೆ ಸಹಜ. ಆದ್ದರಿಂದ ಮೂರಕ್ಕಿಂತ ಹೆಚ್ಚಿನ ಜನನ ಪ್ರಮಾಣವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಕೇಂದ್ರದಿಂದ ಬೀದಿ ಬದಿ ವ್ಯಾಪಾರಿಗಳಿಗೆ ಗಣೇಶ ಹಬ್ಬದ ಬಂಪರ್‌ ಗಿಫ್ಟ್‌ – ಪಿಎಂ ಸ್ವನಿಧಿ ಯೋಜನೆ 5 ವರ್ಷ ವಿಸ್ತರಣೆ

Mohan Bhagwat 1

ಸರಿಯಾದ ವಯಸ್ಸಿನಲ್ಲಿ ಮದ್ವೆಯಾಗೋದ್ರಿಂದ (Marriage) ಮೂವರು ಮಕ್ಕಳನ್ನು ಹೊಂದಬಹುದು. ಜೊತೆಗೆ ಪೋಷಕರು ಮತ್ತು ಮಕ್ಕಳು ಇಬ್ಬರು ಆರೋಗ್ಯವಾಗಿರ್ತಾರೆ ಅಂತ ವೈದ್ಯರೇ ಹೇಳಿದ್ದಾರೆ. ಮೂವರು ಒಡಹುಟ್ಟಿದವರು ಇರುವ ಮನೆಗಳಲ್ಲಿ ಅಹಂಕಾರ ನಿಯಂತ್ರಿಸೋದನ್ನ ಕಲಿಯುತ್ತಾರೆ. ಇದರಿಂದ ಭವಿಷ್ಯದಲ್ಲಿ ಅವರಿಗೆ ಯಾವುದೇ ತೊಂದರೆ ಇರೋದಿಲ್ಲ. ಇದಕ್ಕೂ ಕೂಡ ವೈದ್ಯರೇ ಹೇಳಿರುವುದಾಗಿ ತಿಳಿಸಿದರು.

ಪ್ರಸ್ತುತ ದೇಶದ ಜನಸಂಖ್ಯೆಯು 2.1 ಜನನ ದರವನ್ನ ಶಿಫಾರಸು ಮಾಡುತ್ತೆ. ಇದು ಉತ್ತಮ ನೀತಿಯಾಗಿದೆ. ಯಾರೊಬ್ಬರು ಒಂದು ಮಗು ಹೊಂದಲು ಸಾಧ್ಯವಿಲ್ಲ. ಗಣಿತದಲ್ಲಿ 2.1 2 ಆಗುತ್ತದೆ. ಆದ್ದರಿಂದ ಮೂರು ಮಕ್ಕಳ ನೀತಿ ಉತ್ತಮ ಎಂದು ಮೋಹನ್‌ ಭಾಗವತ್‌ ಹೇಳಿದರು. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್

ಜನಸಂಖ್ಯೆ ಮೇಲೆ ಮತಾಂತರದ ಪರಿಣಾಮವೇ?
ಇನ್ನೂ ಜನಸಂಖ್ಯಾ ಮಾದರಿಗಳ ಮೇಲೆ ಪರಿಣಾಮ ಬೀರುವ ಕೆಲವೊಂದು ಅಂಶಗಳನ್ನು ಮೋಹನ್‌ ಭಾಗವತ್‌ ಗುರುತಿಸಿದ್ದು, ಮತಾಂತವೂ ಒಂದು ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಮತಾಂತರವು ಜನಂಖ್ಯೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ರೆ ಕಾಥೊಲಿಕರು, ಉಲೇಮಾಗಳು ನಾವು ಮತಾಂತರದಲ್ಲಿ ತೊಡಗುವುದಿಲ್ಲ ಎನ್ನುತ್ತಾರೆ ಎಂದು ವಿವರಿಸಿದರು.

ಹಿಂದೂ – ಮುಸ್ಲಿಂ ಒಂದೇ
ಇದೇ ವೇಳೆ ಹಿಂದೂ ಮತ್ತು ಮುಸ್ಲಿಮರ ನಡುವಿನ ಸಂಬಂಧಗಳನ್ನುದ್ದೇಶಿಸಿ ಮಾತನಾಡಿದ ಭಾಗವತ್, ಹಿಂದೂ ಮುಸ್ಲಿಮರು ಮೂಲಭೂತವಾಗಿ ಒಬ್ಬರು, ನಮ್ಮ ನಡುವೆ ಏಕತೆಯಿದೆ. ಆದ್ರೆ ಒಂದು ಭಯವನ್ನು ಸೃಷ್ಟಿಸಲಾಗಿದೆ. ಹಿಂದೂಗಳು ಎಲ್ಲವನ್ನೂ ತೆಗೆದುಕೊಳ್ತಾರೆ ಅಂತ ಭಾವಿಸುವಂತೆ ಮಾಡಲಾಗಿದೆ. ಆದ್ರೆ ವಾಸ್ತವದಲ್ಲಿ ನಮ್ಮ ಗುರುತು ಏಕೀಕೃತವಾಗಿದೆ. ಸಾಂಸ್ಕೃತಿಕವಾಗಿ, ನಾವು ಹಿಂದೂಗಳು ಎಂದು ಬಣ್ಣಿಸಿದರು. ಇದನ್ನೂ ಓದಿ: ಟ್ರಂಪ್‌ ಸೂಚಿಸಿದ 5 ಗಂಟೆಗಳೊಳಗೆ ಪಾಕ್‌ ವಿರುದ್ಧ ಮೋದಿ ಯುದ್ಧ ನಿಲ್ಲಿಸಿದ್ರು: ರಾಹುಲ್‌ ಗಾಂಧಿ ಕಿಡಿ

ಮುಂದುವರಿದು.. ಅನೇಕ ಹಿಂದೂಗಳು ತಾವು ದುರ್ಬಲರೆಂದು ಭಾವಿಸಿ ಅಸುರಕ್ಷಿತವಾಗಿದ್ದೇವೆ. ಅವರಿಗೊಂದು ಸಲಹೆ ನೀಡುತ್ತೇನೆ. ಇತರರೊಂದಿಗೆ ಸಹಬಾಳ್ವೆ ನಡೆಸುವುದರಿಂದ ಸ್ವಂತ ನಂಬಿಕೆಗೆ ಹಾನಿಯಾಗಲ್ಲ. ಈ ವಿಶ್ವಾಸ ಬೇರೂರಿದರೆ, ಸಂಘರ್ಷ ಕೊನೆಗೊಳ್ಳುತ್ತದೆ ಎಂದು ಕಿವಿಮಾತು ಹೇಳಿದರು. ಇದನ್ನೂ ಓದಿ: ಗುಜರಾತ್‌ನಲ್ಲಿ ಹೆಸರೇ ಕೇಳದ ಪಕ್ಷಗಳಿಗೆ 4,300 ಕೋಟಿ ದೇಣಿಗೆ – ರಾಗಾ ಮತ್ತೊಂದು ಬಾಂಬ್‌

TAGGED:3 ಮಕ್ಕಳ ನೀತಿbirth rateIndian Couplemohan bhagwatpopulation controlrssಆರ್‍ಎಸ್‍ಎಸ್ಜನಸಂಖ್ಯೆಮುಸ್ಲಿಮರುಮೋಹನ್ ಭಾಗವತ್ಹಿಂದೂ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Ramanagara Wild Elephant
Districts

ಬೆಳ್ಳಂಬೆಳಗ್ಗೆ ಕೆರೆಯಲ್ಲಿ ಮೂರು ಕಾಡಾನೆಗಳು ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಆತಂಕ

Public TV
By Public TV
6 minutes ago
Mandya SP
Districts

ಫ್ಲೆಕ್ಸ್‌ ವಿಚಾರದಲ್ಲಿ ಕೊನೆಗೂ ಎಚ್ಚೆತ್ತ ಮಂಡ್ಯ ಎಸ್ಪಿ

Public TV
By Public TV
7 minutes ago
pm modi 2
Latest

8,931 ದಿನಗಳ ಆಡಳಿತ; ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

Public TV
By Public TV
8 minutes ago
Lashkar Terrorist Bilal Arif Sarafi
Latest

ಕುಟುಂಬಸ್ಥರಿಂದಲೇ ಪಾಕ್‌ನ ಲಷ್ಕರ್‌ ಭಯೋತ್ಪಾದಕ ಬಿಲಾಲ್ ಆರಿಫ್‌ಗೆ ಚಾಕುವಿನಿಂದ ಇರಿದು, ಗುಂಡಿಕ್ಕಿ ಹತ್ಯೆ

Public TV
By Public TV
47 minutes ago
Mojtaba Khamenei
Latest

ನಿಮ್ಮ ಸುಪ್ರೀಂ ಲೀಡರ್ ಬದುಕಿದ್ದಾರಾ? – ಇರಾನ್‌ಗೆ ಅಮೆರಿಕ ಪ್ರಶ್ನೆ

Public TV
By Public TV
2 hours ago
Samartha Shamanur
Belgaum

ದಾವಣಗೆರೆ ದಕ್ಷಿಣ ಉಪಚುನಾವಣೆ; ಶಾಮನೂರು ಮೊಮ್ಮಗನಿಗೆ ಟಿಕೆಟ್‌ ಘೋಷಿಸಿದ ಕಾಂಗ್ರೆಸ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?