Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದ ಸಿಎಂ

Bengaluru City

ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದ ಸಿಎಂ

Public TV
Last updated: August 29, 2025 1:24 am
Public TV
Share
2 Min Read
KN Rajanna Siddaramaiah
SHARE

– ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ಸಾಲ ವಿತರಣೆ ಗುರಿ

ಬೆಂಗಳೂರು: ಸಹಕಾರ ಇಲಾಖೆಯ ಸಚಿವ ಸ್ಥಾನಕ್ಕೆ ಕೆ.ಎನ್‌ ರಾಜಣ್ಣ (KN Rajanna) ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ಸಹಕಾರ ಇಲಾಖೆಯ ಮೊದಲ ಸಭೆ ನಡೆಸಿದರು.

ಸಿಎಂ ಅಧಿಕೃತ ನಿವಾಸ ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ (Cooperation Department KDP Meeting) ನಡೆಸಿ ಹಲವು ಮಹತ್ವದ ವಿಷಯಗಳನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಅಲ್ಲದೇ ರಾಜ್ಯದಲ್ಲಿ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಹಕಾರ ಇಲಾಖೆ ಅಧಿಕಾರಿಗಳು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.

ಇಂದು ಕೃಷ್ಣಾದಲ್ಲಿ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಚರ್ಚಿಸಿದೆ.
ಸಭೆಯ ಮುಖ್ಯಾಂಶಗಳು ಹೀಗಿವೆ:

• ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ… pic.twitter.com/DNzxspPoyM

— Siddaramaiah (@siddaramaiah) August 28, 2025

ಸಿಎಂ ಸಭೆಯ ಮುಖ್ಯಾಂಶಗಳೇನು?
* ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37 ಲಕ್ಷ ರೈತರಿಗೆ ರೂ.28,000 ಕೋಟಿ ಸಾಲ ವಿತರಣೆಯ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8,362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲ ಸಿಗುವುದನ್ನು ಪ್ರತಿ ಜಿಲ್ಲೆಯಲ್ಲೂ ಖಾತ್ರಿಪಡಿಸಬೇಕು.

• ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು ಹಿಂದಿನ ಸಾಲಿನಲ್ಲಿದ್ದ ರೂ.5,600 ಕೋಟಿಗಳಿಂದ ರೂ.3,236.11 ಕೋಟಿಗೆ ಅಂದರೆ ಶೇ.42.21ರಷ್ಟು ಕಡಿಮೆ ಮಾಡಿದೆ. ಆದರೂ ಸಾಲ ವಿತರಣೆಯಲ್ಲಿ ಶೇ.96.07 ರಷ್ಟು ಪ್ರಗತಿ ಸಾಧಿಸಲಾಗಿದೆ. 2024-25ನೇ ಸಾಲಿನಲ್ಲಿ 29,75,598 ರೈತರಿಗೆ 25,939.09 ಕೋಟಿ ಕೃಷಿ ಸಾಲ ವಿತರಣೆ ಮಾಡಲಾಗಿದೆ.

• ರಾಜ್ಯದಲ್ಲಿ 28,516 ಸಹಕಾರ ಸಂಘಗಳು ಲಾಭದಲ್ಲಿದ್ದು, 14,670 ಸಂಘಗಳು ನಷ್ಟದಲ್ಲಿವೆ. ಸಾಲ ವಸೂಲಾತಿ ಸರಿಯಾಗಿ ಆಗದ ಕಾರಣ ಬಹುತೇಕ ಸಂಘಗಳು ನಷ್ಟದಲ್ಲಿದ್ದು, ಅಂತಹ ಸಂಘಗಳು ಸಾಲ ವಸೂಲಾತಿಗೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಇದರಲ್ಲಿ 2,200 ಹಾಲು ಉತ್ಪಾದಕ ಸಂಘಗಳು ನಷ್ಟದಲ್ಲಿವೆ. ಹಾಲು ಉತ್ಪಾದಕ ಸಹಕಾರ ಸಂಘಗಳ ವೆಚ್ಚದ ಮೇಲೆ ನಿಗಾ ಇರಿಸಬೇಕು. ಹಾಲು ಉತ್ಪಾದನೆಯನ್ನು ಹೆಚ್ಚಿಸುವುದು ಸಂಘಗಳ ಕಾರ್ಯದರ್ಶಿಗಳ ಜವಾಬ್ದಾರಿ. ಹಾಲು ಉತ್ಪಾದಕ ಸಹಕಾರ ಸಂಘಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು.

• ಕನ್ನಡ ಸಾಹಿತ್ಯ ಪರಿಷತ್‌‌ನ ಅವ್ಯವಹಾರಗಳ ಕುರಿತು ಡಿಆರ್‌ಸಿಎಸ್ ತನಿಖೆ ನಡೆಸುತ್ತಿದೆ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲೇ ಕೆಲವು ಸದಸ್ಯರ ಸದಸ್ಯತ್ವವನ್ನು ಪರಿಷತ್ ರದ್ದುಪಡಿಸುತ್ತಿರುವ ಕುರಿತು ದೂರುಗಳು ಬಂದಿದ್ದು, ಈ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು.

• ಸಹಕಾರ ಸಂಘಗಳ ಹಿರಿಯ ನಿರೀಕ್ಷಕರ 126 ಹುದ್ದೆಗಳು ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 403 ಹುದ್ದೆಗಳು ಖಾಲಿಯಿವೆ. ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಬೇಕು.

• ಸಹಕಾರ ಸಂಘಗಳ ನಿಬಂಧಕರ ಕಚೇರಿಯ ವ್ಯಾಪ್ತಿಯ ಸೇವೆಗಳನ್ನು ಗಣಕೀಕರಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.

• ರಾಜ್ಯದಲ್ಲಿ 7,074 ಗಿರವಿದಾರ ಸಂಸ್ಥೆಗಳು ಹಾಗೂ 1,468 ಚೀಟಿ ಸಂಸ್ಥೆಗಳು ಕರ್ನಾಟಕ ಲೇವಾದೇವಿಗಾರರ ಅಧಿನಿಯಮ 1961, ಕರ್ನಾಟಕ ಗಿರವಿದಾರರ ಅಧಿನಿಯಮ 1961 ಮತ್ತು ಚೀಟಿನಿಧಿಗಳ ಅಧಿನಿಯಮ 1982ರಡಿ ನೋಂದಣಿಯಾಗಿವೆ. ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಗಿರವಿದಾರ ಸಂಸ್ಥೆಗಳು ಹಾಗೂ ಚೀಟಿ ಸಂಸ್ಥೆಗಳ ಮೇಲೆ ನಿಗಾ ಇರಿಸಬೇಕು…

TAGGED:bengaluruCooperation DepartmentfarmersKN Rajannasiddaramaiahಕೆ.ಎನ್.ರಾಜಣ್ಣಬೆಂಗಳೂರುರೈತರುಸಹಕಾರ ಇಲಾಖೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories
Chaitra Kundapura Ashwini Gowda 1
ಸೋಶಿಯಲ್‌ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್‌ ವಾರ್‌!
Cinema Latest Sandalwood Top Stories

You Might Also Like

kalaburagi gun dance
Kalaburagi

ಮದುವೆ ಸಮಾರಂಭದಲ್ಲಿ ಪಿಸ್ತೂಲ್, ಹಣದ ಜೊತೆ ಕಾಂಗ್ರೆಸ್ ಮುಖಂಡ ಡ್ಯಾನ್ಸ್ – ವಿಡಿಯೋ ವೈರಲ್

Public TV
By Public TV
5 hours ago
Raichuru Hundi Counting
Districts

ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ ಮುಕ್ತಾಯ – 21 ದಿನದಲ್ಲಿ 3.08 ಕೋಟಿ ರೂ. ಸಂಗ್ರಹ

Public TV
By Public TV
5 hours ago
CJ Roy
Bengaluru City

ಸಿಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆ ಚುರುಕು – ಪೊಲೀಸರಿಂದ ಐಟಿ ಅಧಿಕಾರಿಗಳ ವಿಚಾರಣೆ

Public TV
By Public TV
6 hours ago
MM Naravane Book
Latest

ತಮ್ಮ ಪುಸ್ತಕ ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ನರವಾಣೆ

Public TV
By Public TV
6 hours ago
TIRUPATI LADDU
Latest

ತಿರುಪತಿ ಲಡ್ಡು ಕಲಬೆರಕೆ ವಿವಾದ – ಸಿಬಿಐ ಬಳಿಕ ಇ.ಡಿ ಎಂಟ್ರಿ

Public TV
By Public TV
6 hours ago
Byrati Basavaraj 1
Bengaluru City

ಬಿಕ್ಲುಶಿವ ಕೊಲೆ ಕೇಸ್ – ಬೈರತಿ ಬಸವರಾಜುಗೆ ಮತ್ತೆ ಸಂಕಷ್ಟ, ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?