Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

Cinema

ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

Public TV
Last updated: August 29, 2025 3:13 pm
Public TV
Share
2 Min Read
Raghavendra Swamy
SHARE

ಕರ್ನಾಟಕದ ಎಲ್ಲರ ಅಚ್ಚುಮೆಚ್ಚಿನ ವಾಹಿನಿ ಜೀ ಕನ್ನಡ (Zee Kannada) ವಿಭಿನ್ನ ಕಥೆಗಳ ಮೂಲಕ ಪ್ರೇಕ್ಷಕರ ಹೃದಯಕ್ಕೆ ನಿರಂತರವಾಗಿ ಲಗ್ಗೆ ಇಡುತ್ತಾ ಬಂದಿದೆ. ಇದಕ್ಕೂ ಮೊದಲು ಉಘೆ ಉಘೆ ಮಾದೇಶ್ವರ ಮತ್ತು ವಿಷ್ಣು ದಶಾವತಾರ ಎಂಬ ಭಕ್ತಿಪ್ರಧಾನ ಧಾರಾವಾಹಿಗಳನ್ನು ನೀಡಿ ಕನ್ನಡಿಗರ ಮನಗೆದ್ದ ಜೀ ಕನ್ನಡ ಈಗ ಮತ್ತೊಂದು ಭಕ್ತಿಪ್ರಧಾನ ಧಾರಾವಾಹಿಯನ್ನು ಜನರ ಮುಂದಿಡಲು ಸಜ್ಜಾಗಿದೆ. `ಶ್ರೀ ರಾಘವೇಂದ್ರ ಮಹಾತ್ಮೆ’ (Shree Raghavendra Mahatme) ಎಂಬ ಧಾರಾವಾಹಿ ಇದೇ ಸೆಪ್ಟೆಂಬರ್ 1ರಿಂದ ರಾತ್ರಿ 9 ಗಂಟೆಗೆ ಜೀ ಕನ್ನಡದಲ್ಲಿ ಪ್ರಸಾರ ಆಗಲಿದೆ ಮತ್ತು ಇದರಲ್ಲಿ ರಾಯರ ಬಾಲ್ಯ, ಪವಾಡಗಳು ಮತ್ತು ಅವರ ಜೀವನದಲ್ಲಿ ನಡೆದ ಅನೇಕ ಕಥೆಗಳು ನಮಗೆ ಕಾಣಸಿಗಲಿದೆ.

ಜೀ ಕನ್ನಡವು ನಂಬಿಕೆ, ಸಂಪ್ರದಾಯ ಮತ್ತು ಸಂಸ್ಕೃತಿಯಲ್ಲಿ ಬೇರು ಬಿಟ್ಟಿರುವ ಭವ್ಯವಾದ ಕಥೆಗಳನ್ನು ನಿರಂತರವಾಗಿ ಪ್ರೇಕ್ಷಕರಿಗೆ ಕೊಡುವುದರ ಜೊತೆಗೆ ಅರ್ಥಪೂರ್ಣ ಮನರಂಜನೆಯನ್ನು ನೀಡುವ ತನ್ನ ಮುಖ್ಯಧ್ಯೇಯಕ್ಕೆ ಬದ್ಧವಾಗಿದೆ. ಈ ಪರಂಪರೆಯನ್ನು ಇನ್ನಷ್ಟು ಬಲಪಡಿಸುತ್ತಾ, ಜೀ ಕನ್ನಡ ಈಗ `ಶ್ರೀ ರಾಘವೇಂದ್ರ ಮಹಾತ್ಮೆ’ ಎಂಬ ಭಕ್ತಿಪರ ಧಾರಾವಾಹಿಯನ್ನು ಪ್ರೇಕ್ಷಕರಿಗೆ ನೀಡುತ್ತಿದೆ. ಇದು ಶ್ರೀ ರಾಘವೇಂದ್ರ ಸ್ವಾಮಿಗಳ ಅಸಾಮಾನ್ಯ ಜೀವನಯಾತ್ರೆಯನ್ನು ವಿವರಿಸುತ್ತದೆ. ರಾಯರ ಬಾಲ್ಯದಿಂದ ಹಿಡಿದು ಅವರ ಆತ್ಮಜಾಗೃತಿ, ಉಪದೇಶಗಳು, ಪವಾಡಗಳು ಮತ್ತು ಪರಂಪರೆ ಈ ಧಾರಾವಾಹಿಯಲ್ಲಿ ಕಾಣಸಿಗಲಿದೆ. ಕಥಾಶೈಲಿ, ಮತ್ತು ಭವ್ಯ ದೃಶ್ಯಾವಳಿಗಳ ಸಮನ್ವಯದೊಂದಿಗೆ ಈ ಧಾರಾವಾಹಿ ರಾಯರ ಆತ್ಮಚರಿತ್ರೆ ಮಾತ್ರವಲ್ಲದೆ ಜೀವನದ ಮೌಲ್ಯಗಳನ್ನು ವೀಕ್ಷಕರಿಗೆ ತಿಳಿಸುವಲ್ಲಿ ಯಶಸ್ವಿಯಾಗಲಿದೆ.ಇದನ್ನೂ ಓದಿ: ಕನ್ನಡದಲ್ಲಿ ಹೊಸ ಮೆಗಾ ಸೀರಿಯಲ್ – ಮಂಗಳವಾರ ʻಮಾಂಗಲ್ಯʼವಾರ 

Raghavendra swamy

ಧಾರಾವಾಹಿಯಲ್ಲಿ ಪ್ರತಿಭಾನ್ವಿತ ತಾರಾ ಬಳಗ ಇದ್ದು, ಇದರ ನಿರ್ಮಾಣ ಮತ್ತು ಕ್ರಿಯೇಟಿವ್ ಹೆಡ್ ಆಗಿ ಮಹೇಶ್ ಸುಖಧರೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನು ಟಾಲೆಂಟೆಡ್ ಆಕ್ಟರ್, ಡೈರೆಕ್ಟರ್ ನವೀನ್ ಕೃಷ್ಣ ಅವರು ಹೊತ್ತಿದ್ದಾರೆ. ಇನ್ನು ಈ ಧಾರಾವಾಹಿಗೆ ಮಣಿಕಾಂತ್ ಕದ್ರಿ ಅವರ ಅಮೋಘ ಸಂಗೀತ ಇರಲಿದ್ದು, ವಿಷ್ಣು ಪಾತ್ರದಲ್ಲಿ ಅಮಿತ್ ಕಶ್ಯಪ್ ಅವರು ನಟಿಸಿದ್ದಾರೆ. ಸಿರಿ ಪ್ರಹ್ಲಾದ್ ಲಕ್ಷ್ಮಿ ಪಾತ್ರದಲ್ಲಿ ನಟಿಸಿದ್ದು, ವ್ಯಾಸರಾಯರ ಪಾತ್ರದಲ್ಲಿ ಪರೀಕ್ಷಿತ್ ಅವರು ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕಾಸ್ ವಸಿಷ್ಠ, ದೀಪಿಕಾ, ಕಾರ್ತಿಕ್ ಸಾಮಗ, ಧನ್ಯಶ್ರೀ ಪ್ರಭು, ವಿಕ್ರಂ ಸೂರಿ, ಡಾ.ಸಂಜಯ್, ಸ್ನೇಹಾ ಹೆಗ್ಡೆ, ಶ್ರೀನಿಧಿ, ಶ್ರೀಲತಾ, ಅನುರಾಗ್ ಸೇರಿ ಅನೇಕ ಪ್ರತಿಭಾನ್ವಿತ ಕಲಾವಿದರ ದಂಡು ಕಾಣಸಿಗಲಿದೆ. ಅಷ್ಟೇ ಅಲ್ಲದೆ, ಹಿರಣ್ಯ ಕಶಿಪುವಾಗಿ ಚೆಲುವರಾಜು, ಕಯಾದು ಆಗಿ ಲೂಸಿಯಾ ಚೆಲುವೆ ಶ್ರುತಿ ಹರಿಹರನ್ ಈ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಇನ್ನು ರಾಯರು ಯಾರು ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ. ಒಟ್ಟಿನಲ್ಲಿ ಇದು ಪ್ರೇಕ್ಷಕರಿಗೆ ಮನರಂಜನೆಯ ಹಬ್ಬವನ್ನು ಕೊಡುವುದಂತೂ ಗ್ಯಾರಂಟಿ.

`ಶ್ರೀ ರಾಘವೇಂದ್ರ ಮಹಾತ್ಮೆ’ ಕೇವಲ ಪೌರಾಣಿಕ ಕಥೆಯಾಗಿರದೆ ಈಗಿನ ಜನಾಂಗಕ್ಕೆ ನಮ್ಮ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವತ್ತ ಪ್ರಯತ್ನ ಮಾಡಲಿದೆ. ಉನ್ನತ ಮಟ್ಟದ ಟೆಕ್ನಾಲಜಿ, ಭವ್ಯ ಸೆಟ್ಗಳು ಮತ್ತು ಗಟ್ಟಿಯಾದ ಕಥಾಹಂದರದೊಂದಿಗೆ ಈ ಧಾರಾವಾಹಿ ಕನ್ನಡ ಪೌರಾಣಿಕ ಕಥನಶೈಲಿಗೆ ಹೊಸ ಅರ್ಥ ನೀಡಲು ಸಜ್ಜಾಗಿದೆ. ಇದೇ ಸೆಪ್ಟೆಂಬರ್ 1, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ಪ್ರಸಾರ ಆಗಲಿರುವ `ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಯನ್ನು ನೋಡಲು ಮರೆಯದಿರಿ.ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ನಟಿ ಸಾಯಿ ಧನ್ಸಿಕಾ ಜೊತೆ ನಟ ವಿಶಾಲ್ ನಿಶ್ಚಿತಾರ್ಥ

TAGGED:Kannada SerialRaghavendra SwamyZee Kannadaಕನ್ನಡ ಧಾರಾವಾಹಿಜೀ ಕನ್ನಡರಾಘವೇಂದ್ರ ಸ್ವಾಮಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
6 minutes ago
daily horoscope dina bhavishya
Astrology

ದಿನ ಭವಿಷ್ಯ 02-05-2026

Public TV
By Public TV
31 minutes ago
Super El Nino 2026
Latest

ಪ್ರಬಲಗೊಂಡ ಸೂಪರ್‌ ಎಲ್‌ ನಿನೋ – 2026ರ ಉತ್ತರಾರ್ಧದಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಾ?

Public TV
By Public TV
34 minutes ago
Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
8 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
8 hours ago
bengaluru rain
Bengaluru City

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?