Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Bengaluru City

ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ- ಬೆಂಗಳೂರಿನಲ್ಲಿ ಸಿಡಿಮದ್ದಿಗೆ ಸಿಡಿಲು ಬಡಿದು ಇಬ್ಬರು ಸಾವು

Public TV
Last updated: May 19, 2017 9:09 am
Public TV
Share
2 Min Read
RAIN fmd
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮರಗಳು ಧರೆಗಪ್ಪಳಿಸಿವೆ. ಕೆ.ಜಿ.ನಗರ, ವಿದ್ಯಾರಣ್ಯಪುರ, ಆರ್.ಆರ್.ನಗರ, ನಾಗರಬಾವಿ, ಮಾರುತಿ ನಗರ, ಸಿಟಿ ಸಿವಿಲ್ ಕೋರ್ಟ್ ಬಳಿ ಮರಗಳು ಧರೆಗಪ್ಪಳಿಸಿದ್ದವು.

rain 3 1

ಬಸವೇಶ್ವರನಗರದ ಪುಟ್ಟೇಗೌಡ ಎಂಬವರ ಮನೆ ಮೇಲೆ ಬುಡ ಸಮೇತ ಮರ ಕಿತ್ತು ಬಿದ್ದಿದ್ದರಿಂದ, ಮನೆಯ ವರಾಂಡದಲ್ಲೆಲ್ಲಾ ಮರದ ಕೊಂಬೆಗಳು ಮುರಿದು ಬಿದ್ದಿತ್ತು. ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮನೆಯ ಮೇಲೆ ಬಿದ್ದ ಮರ ತೆರವುಗೊಳಿಸಲು ಹರಸಾಹಸ ಪಡುವಂತಾಯಿತು.

rain 6

ಬೆಸ್ಕಾಂಗೆ ಫೋನ್ ದೂರುಗಳ ಸುರಿ`ಮಳೆ: ತಿಳಿ ಮುಸ್ಸಂಜೆಯಿಂದ ಆರಂಭವಾದ ಮಳೆ ಆರ್ಭಟ ನಡುರಾತ್ರಿವರೆಗೆ ಆರ್ಭಟ ಮುಂದುವರಿದಿತ್ತು. ಕೇವಲ ಮೂರು ಗಂಟೆಯಲ್ಲಿ ಬೆಸ್ಕಾಂಗೆ ಬರೋಬ್ಬರಿ 3715 ದೂರುಗಳು ಬಂದಿವೆ. ಕರೆ ಸ್ವೀಕರಿಸಲಾಗದೇ 1912-ಬೆಸ್ಕಾಂ ಸಹಾಯವಾಣಿ ಸಂಪೂರ್ಣ ಸ್ಥಗಿತಗೊಂಡಿದೆ.

rain 5

ಬೆಂಗಳೂರು ಹೊರವಲಯದ ತಾವರೆಕೆರೆ ಠಾಣೆಯ ಮಾದಪಟ್ಟಣದ ಬಳಿ ಕಲ್ಲುಬಂಡೆ ಸಿಡಿಸಲು ಇಟ್ಟಿದ್ದ ಸಿಡಿಮದ್ದಿನ ಬಾಕ್ಸ್ ಗೆ ಸಿಡಿಲು ಬಡಿದು ಜಿಲೆಟಿನ್ ಕಡ್ಡಿಗಳು ಸ್ಫೋಟವಾಗಿ, ಇಬ್ಬರು ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗೊಂಡಿದ್ದಾರೆ.

rain 1 2

ಹವಾಮಾನ ವೈಪರೀತ್ಯದಿಂದಾಗಿ ವಿಮಾನಗಳ ಸಂಚಾರದಲ್ಲೂ ವ್ಯತ್ಯಯ ಉಂಟಾಯ್ತು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆನ್ನೈ, ಹೈದ್ರಾಬಾದ್ ಕಡೆ ವಿಮಾನಗಳು ಮಾರ್ಗ ಬದಲಿಸಿದ್ವು. ಇನ್ನೊಂದೆಡೆ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್‍ಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಬಸವನಗುಡಿಯ ಶಂಕರಪುರ ಠಾಣೆ ಬಳಿ ಘಟನೆ ನಡೆದಿದೆ. ಡ್ರೈವ್ ಮಾಡುತ್ತಿದ್ದ ವೃದ್ಧನ ಕೈ ಮುರಿದಿದೆ.

rain 2

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಸಾಕಷ್ಟು ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಯಕ್ಲಾಸಪೂರ ಗ್ರಾಮ ನಿನ್ನೆ ಸಂಜೆಯಿಂದ ಸುರಿದ ಮಳೆಗೆ ಬಹುತೇಕ ಗ್ರಾಮ ಜಲಾವೃತವಾಗಿದೆ. ಗಾಳಿ ಮಳೆಗೆ ಮನೆಗಳು, ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಕೆಲವು ಮನೆಗಳ ಮೆಲ್ಛಾವಣಿ ತಗಡುಗಳು ಹಾರಿಹೋಗಿದ್ದು ಜನ ಹೈರಾಣಾಗಿದ್ದಾರೆ.

rain 4 1

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಂಡಮಿಂದಪಲ್ಲಿ ಗ್ರಾಮದಲ್ಲಿ ಸಿಡಿಲು ಬಡಿದು ಐದು ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ರಾಮನಗರ ತಾಲ್ಲೂಕಿನ ರಾಮನಹಳ್ಳಿ ಗ್ರಾಮದ ನಾಗರಾಜು ಎಂಬುವವರ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ಇಟ್ಟುಮಡು ಗ್ರಾಮದಲ್ಲಿ 5 ವಿದ್ಯುತ್ ಕಂಬಗಳು ಹಾಗೂ ನಾಲ್ಕು ಮರಗಳು ಧರೆಗೆ ಉರುಳಿಬಿದ್ದಿವೆ.

rain 11

ಕೋಲಾರ ಜಿಲ್ಲೆ ಮುಳಬಾಗಲು ತಾಲೂಕಿನ ಪಾತಿಪಾಳ್ಯದಲ್ಲಿ ಸುರಿದ ಭಾರಿ ಮಳೆಗೆ ಚಿನ್ನಕ್ಕ ಎಂಬುವರ ಮನೆಯ ಗೋಡೆ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇರಲಿಲ್ಲ.

rain 9

ಶಿವಮೊಗ್ಗದಲ್ಲಿ ಮಳೆಯ ಆರ್ಭಟಕ್ಕೆ ಸಾಗರ ರಸ್ತೆಯ ಎಪಿಎಂಸಿ ಬಳಿ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ಸಂಚಾರ ಈ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡು ಜನ ಕತ್ತಲೆಯಲ್ಲಿ ಕಳೆಯುವಂತಾಯ್ತು.

rain 10

ಮಂಡ್ಯದಲ್ಲಿ ರಾತ್ರಿ ಸುರಿದ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿದ್ದ ಪರಿಣಾಮ, ಮಕ್ಕಳು ವೃದ್ಧರೆನ್ನದೇ ಹಲವರು ಬೀದಿಯಲ್ಲೇ ರಾತ್ರಿ ಕಳೆದಿದ್ದಾರೆ. ನಿನ್ನೆ ರಾತ್ರಿ ಮಂಡ್ಯ ದಲ್ಲಿ ಸಾಧಾರಣ ಮಳೆಯಾಗಿತ್ತು. ಆದ್ರೆ ಒಳ ಚರಂಡಿಯನ್ನು ಟೈಂಗೆ ಕ್ಲೀನ್ ಮಾಡಿಸದ ಕಾರಣ ಗಾಂಧಿನಗರದ ಮೂರನೇ ಕ್ರಾಸ್‍ನಲ್ಲಿ ನೀರು ಸಂಪೂರ್ಣ ಬ್ಲಾಕ್ ಆಗಿ ಮನೆಗಳಿಗೆ ನುಗ್ಗಿದೆ. ಪರಿಣಾಮ ಮನೆಯೊಳಗೆ ಇದ್ದ ದಿನಸಿ, ದಿನ ಬಳಕೆ ವಸ್ತುಗಳೆಲ್ಲಾ ನೀರು ಪಾಲಾಗಿವೆ. ಮನೆಯೊಳಗೆ ನೀರು ಹೆಚ್ಚಾದ ಹಿನ್ನೆಲೆಯಲ್ಲಿ ಎಲ್ರೂ ಹೊರಗೆ ಬಂದು ರಾತ್ರಿ ಕಳೆದಿದ್ದಾರೆ. ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

rain 7

rain 8

rain 12

rain 13

rain 14

rain 15

vlcsnap 2017 05 19 08h42m05s193

TAGGED:bengaluruChikkaballapurakolarapublictvrainramanagaraಕೋಲಾರಚಿಕ್ಕಬಳ್ಲಾಪುರಪಬ್ಲಿಕ್ ಟಿವಿಬೆಂಗಳೂರುಮಳೆರಾಮನಗರ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Haveri
Districts

ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!

Public TV
By Public TV
1 minute ago
Bidar Siddaramaiah
Bidar

40ನೇ ರಾಜ್ಯಮಟ್ಟದ ಕಾರ್ಯನಿರತ ಪತ್ರಕರ್ತರ ಸಮ್ಮೇಳನಕ್ಕೆ ಸಿಎಂ ಚಾಲನೆ

Public TV
By Public TV
31 minutes ago
mobile phones are not allowed during matches in the Indian Premier League Rajasthan Royals were seen breaking the rule and using a mobile phone during the match
Cricket

RCB ವಿರುದ್ಧ ಗೆದ್ದ RRಗೆ ಬಿಗ್ ಶಾಕ್ – ತಂಡದ ಮೇಲೆ ಶಿಸ್ತುಕ್ರಮದ ತೂಗುಗತ್ತಿ

Public TV
By Public TV
33 minutes ago
JDS
Bengaluru City

ಮೋದಿ ಅವ್ರನ್ನ ನೋಡಿ ಸಿದ್ದರಾಮಯ್ಯ ಕಲಿಯಬೇಕು: ಸಿಎಂಗೆ ತಿವಿದ ದೊಡ್ಡಗೌಡರು

Public TV
By Public TV
35 minutes ago
JD Vance Pak F 16s Escort
Latest

ಇಸ್ಲಾಮಾಬಾದ್‌ಗೆ ಆಗಮಿಸಿದ ಅಮೆರಿಕ ಉಪಾಧ್ಯಕ್ಷರ ಫ್ಲೈಟ್‌ಗೆ ಪಾಕ್‌ನ ಎಫ್‌-16 ಜೆಟ್‌ಗಳ ಬೆಂಗಾವಲು

Public TV
By Public TV
44 minutes ago
UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?