Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ

Cinema

ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ

Public TV
Last updated: August 30, 2025 4:57 pm
Public TV
Share
2 Min Read
Vishnu memorial
SHARE

ಹಿರಿಯ ನಟ ಬಾಲಣ್ಣ ಅವರ ಅಭಿಮಾನ್‌ ಸ್ಟುಡಿಯೋಗೆ (Abhiman Studio) ಸರ್ಕಾರ ನೀಡಿದ್ದ ಜಾಗವನ್ನು ವಶಪಡಿಸಿಕೊಳ್ಳಬೇಕು ಅಂತ ಬೆಂಗಳೂರಿನ ಜಿಲ್ಲಾಧಿಕಾರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಈ ಪತ್ರ ಬರೆದ ಬೆನ್ನಲ್ಲೇ ಡಾ.ವಿಷ್ಣುಸೇನಾ ಸಮತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್, ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ಅವರನ್ನು ಭೇಟಿ ಮಾಡಿದ್ದಾರೆ. ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣು ಸಮಾಧಿಯನ್ನು ನೆಲಸಮಗೊಳಿಸಲಾಗಿದೆ. ಆ ಸಮಾಧಿಯನ್ನು ಮರುಸ್ಥಾಪಿಸಬೇಕು ಮತ್ತು ಅಭಿಮಾನ್‌ ಸ್ಟುಡಿಯೋ ಜಾಗವನ್ನು ಸರ್ಕಾರ ವಾಪಸ್ಸು ಪಡೆಯಬೇಕು ಅಂತ ಮನವಿ ನೀಡಿದ್ದಾರೆ.

ಭಾರಿ ವಿವಾದದಿಂದ ಕೂಡಿದ್ದ ಬೆಂಗಳೂರಿನ ಅಭಿಮಾನ್ ಸ್ಡುಡಿಯೋ ಮುಟ್ಟುಗೋಲಿಗೆ ಆಗ್ರಹ ಕೇಳಿ ಬಂದಿತ್ತು. ಅಭಿಮಾನ್ ಸ್ಡುಡಿಯೋಗಾಗಿ ಬಾಲಕೃಷ್ಣಗೆ ನೀಡಿದ್ದ ಪ್ರದೇಶವನ್ನ ಹಿಂಪಡೆಯಲು ಹೋರಾಟ ಕೂಡ ಮಾಡಲಾಗಿತ್ತು. ಇದೀಗ ಅರಣ್ಯ ಇಲಾಖೆಯು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ. ಸಹಜವಾಗಿಯೇ ಇದು ಕುತೂಹಲಕ್ಕೆ ಕಾರಣವಾಗಿದೆ.ಇದನ್ನೂ ಓದಿ: ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!

ಜಿಲ್ಲಾಧಿಕಾರಿಗೆ ಬರೆದ ಪತ್ರದಲ್ಲಿ ಏನಿದೆ?
ಇದೇ ಆಗಸ್ಟ್ 7 ರಂದು ರಾತ್ರೋರಾತ್ರಿ ಅಭಿಮಾನ್ ಸ್ಡುಡಿಯೋದಲ್ಲಿದ್ದ ಕನ್ನಡದ ಮೇರುನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನ ಧ್ವಂಸ ಮಾಡಲಾಗಿತ್ತು. ಈ ಕಾರಣಕ್ಕೆ ಭಾರೀ ವಿವಾದಕ್ಕೀಡಾಗಿದ್ದ ಜಾಗವನ್ನ ಇದೀಗ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಡಿಸಿ ಜಗದೀಶ್ ಅವರಿಗೆ ಪತ್ರ ಬರೆದಿದೆ. ಈ ಮೂಲಕ ಅಭಿಮಾನ್ ಸ್ಟುಡಿಯೋ ಜಾಗ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.

ಬೆಂಗಳೂರು ದಕ್ಷಿಣ ತಾಲೂಕು ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮಕ್ಕೆ ಸೇರಿದ ಸರ್ವೇ ನಂ, 26ರಲ್ಲಿ ಅಭಿಮಾನ್ ಸ್ಟುಡಿಯೋಗೆ ಸರ್ಕಾರ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದುಪಡಿಸಿ ಜಾಗ ಹಿಂಪಡೆಯುವ ಬಗ್ಗೆ ಅರಣ್ಯ ಇಲಾಖೆ ಪತ್ರದಲ್ಲಿ ಉಲ್ಲೇಖಿಸಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್ ರವೀಂದ್ರಕುಮಾರ್ ಅವರು ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಆದೇಶದ ಅನ್ವಯ 09-04-1969 ರಂದು ರಂದು 20 ಎಕರೆ ಪ್ರದೇಶವನ್ನು ಟಿ ಎನ್ ಬಾಲಕೃಷ್ಣ ರವರಿಗೆ ಅಭಿಮಾನ್ ಚಿತ್ರ ಸ್ಡುಡಿಯೋ ಸ್ಥಾಪಿಸುವ ಸಲುವಾಗಿ 20 ವರ್ಷಗಳ ಅವಧಿಗೆ ಗೇಣಿ ಆಧಾರದ ಮೇಲೆ ನೀಡಲಾಗಿತ್ತು. ಸರ್ಕಾರಿ ಆದೇಶದಲ್ಲಿ ಅಭಿಮಾನ್ ಸ್ಡುಡಿಯೋ ಅಭಿವೃದ್ಧಿ ಹೊರತಾಗಿ ಬೇರೆ ಯಾವುದೇ ಉದ್ದೇಶಕ್ಕೆ ಬಳಸದಿರಲು ಮಾರಾಟ/ ಪರಭಾರೆ ಕೊಡದಿರಲು ಷರತ್ತು ವಿಧಿಸಿ ಆದೇಶ ನೀಡಲಾಗಿತ್ತು. ಉಲ್ಲಂಘನೆಯಾದಲ್ಲಿ ಮಂಜೂರಾತಿ ರದ್ಧುಪಡಿಸಿ ಭುಮಿಯನ್ನು ಸರ್ಕಾರ ಹಿಂಪಡೆಯಲಾಗುವುದು ಎನ್ನುವ ಆದೇಶ ಸ್ಪಷ್ಟವಾಗಿ ನಮೂದಿಸಲಾಗಿತ್ತು. ಇದನ್ನ ಮನವಿ ಪತ್ರದಲ್ಲಿ ಮತ್ತೆ ಸೂಚಿಸಿ ಅರಣ್ಯ ಇಲಾಖೆ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

ಇದೀಗ ವಿಷ್ಣು ಅಭಿಮಾನಿಗಳಿಂದ ಮೇಲಿಂದ ಮೇಲೆ ಮರು ತನಿಖೆಗೆ ಆದೇಶ, ಅಭಿಮಾನ್ ಸ್ಡುಡಿಯೋ ಉದ್ದೇಶ ಉಲ್ಲಂಘನೆ ವಿಚಾರವಾಗಿ ಕಾನೂನು ಹೋರಾಟ ಜಾರಿಯಲ್ಲಿರುವ ವೇಳೆಯೇ ಪ್ರದೇಶವನ್ನ ಸರ್ಕಾರ ವಶಪಡಿಸಿಕೊಳ್ಳುವಂತೆ ಅರಣ್ಯ ಇಲಾಖೆ ಕೋರಿದೆ. ಅಂದಹಾಗೆ ಬಾಲಕೃಷ್ಣ ನಿಧನದ ಬಳಿಕ ಅವರ ಮಕ್ಕಳಾದ ಗಣೇಶ್ ಹಾಗೂ ಮೊಮ್ಮಗ ಕಾರ್ತಿಕ್ ಅನಧಿಕೃತವಾಗಿ 10 ಎಕರೆ ಆಸ್ತಿ ಮಾರಾಟ ಮಾಡಿದ್ದಾರೆ ಎಂದು ನಮೂದಿಸಲಾಗಿದೆ. ಅಭಿಮಾನ್ ಸ್ಡುಡಿಯೋ ನವೀಕರಣ ಮಾಡುವ ಸಲುವಾಗಿ ಬೇಕಾಗುವ ಹಣಕ್ಕಾಗಿ ಆಸ್ತಿ ಮಾರಾಟಕ್ಕೆ ಅನುಮತಿ ಕೇಳಿ ಮಾರಿದ್ದರು. ಆದರೆ ಸ್ಡುಡಿಯೋ ಅಭಿವೃದ್ಧಿಪಡಿಸದೆ ವೈಯಕ್ತಿಕವಾಗಿ ಉಪಯೋಗಿಸಿಕೊಂಡಿದ್ದಾರೆ. ಹೀಗಾಗಿ ಇಲ್ಲಿಯೂ ಉದ್ದೇಶವನ್ನ ಉಲ್ಲಂಘನೆ ಮಾಡಿದ್ದಾರೆ ಅನ್ನೋದು ಕೂಡ ಅರ್ಜಿ ಪತ್ರದಲ್ಲಿ ದಾಖಲಾಗಿದೆ. ಹೀಗಾಗಿ ಕೂಡಲೇ ಅಭಿಮಾನ್ ಸ್ಡುಡಿಯೋ ಆಸ್ತಿಯನ್ನ ಮುಟ್ಟುಗೋಲು ಹಾಕಬೇಕೆನ್ನುವುದು ಅರಣ್ಯ ಇಲಾಖೆಯ ಬೇಡಿಕೆಯಾಗಿದೆ.ಇದನ್ನೂ ಓದಿ: ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ

TAGGED:Abhiman Studiobengalurueshwar khandreVishnuvardhan Memorialಅಭಿಮಾನ್ ಸ್ಟುಡಿಯೋಈಶ್ವರ್ ಬಿ ಖಂಡ್ರೆವಿಷ್ಣು ಸಮಾಧಿ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Traffic Rules Violation Chikkamagaluru Court
Chikkamagaluru

ಟ್ರಾಫಿಕ್ ರೂಲ್ಸ್ ಬ್ರೇಕ್ – ಬೋರ್ಡ್ ಹಿಡಿದು ಇಡೀ ದಿನ ರಸ್ತೆ ಮಧ್ಯೆ ನಿಲ್ಲುವ ಶಿಕ್ಷೆ!

Public TV
By Public TV
39 minutes ago
LPG Cylinders Jagalur
Davanagere

ಜಗಳೂರು | ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ – 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ

Public TV
By Public TV
1 hour ago
kabul hospital pak strikes
Latest

ಅನಾಗರಿಕ, ಹೇಡಿತನದ ಕೃತ್ಯ: ಕಾಬೂಲ್‌ ಆಸ್ಪತ್ರೆ ಮೇಲಿನ ಪಾಕ್‌ ದಾಳಿ ಖಂಡಿಸಿದ ಭಾರತ

Public TV
By Public TV
1 hour ago
Four workers fall ill due to chemical reaction in Hubballi
Dharwad

ಹುಬ್ಬಳ್ಳಿ | ಫ್ಲೈವುಡ್‌ ಕೆಲಸದ ವೇಳೆ ಕೆಮಿಕಲ್ ರಿಯಾಕ್ಷನ್ – ನಾಲ್ವರು ಕಾರ್ಮಿಕರು ಅಸ್ವಸ್ಥ

Public TV
By Public TV
2 hours ago
congress leader pm modi
Chikkamagaluru

ಸ್ವಪಕ್ಷದ ಮುಖಂಡನ ವಿರುದ್ಧವೇ ದೂರು – ನ್ಯಾಯಕ್ಕಾಗಿ ಪ್ರಧಾನಿ ಮೋದಿ ಕಚೇರಿ ಕದ ತಟ್ಟಿದ ಕಾಂಗ್ರೆಸ್ ನಾಯಕಿ

Public TV
By Public TV
2 hours ago
DK Shivakumar 9
Bengaluru City

ಬಾಕಿ ಇರುವ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಬಗ್ಗೆ ಕರ್ನಾಟಕ ಸಂಸದರ ಜೊತೆ ಚರ್ಚೆ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?