ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಆಗಬೇಕು ಅಂತಾ ಕಾರ್ಯಕರ್ತರು ಹೇಳೋದ್ರಲ್ಲಿ ಅರ್ಥ ಇದೆ. ಡಿ.ಕೆ ಶಿವಕುಮಾರ್ ಸಿಎಂ ಆಗ್ತಾರೆ ಅಂತಾ ನಾನೂ ಹೇಳಿದ್ದೇನೆ ಅಂತಾ ಕುಣಿಗಲ್ ಶಾಸಕ ರಂಗನಾಥ್ (Ranganath) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸರ್ಕಾರದಲ್ಲಿ ಗೊಂದಲ ಆಗುವ ಹೇಳಿಕೆ ಕೊಡಬಾರದು. ಕೆಲವು ವಿಚಾರದಲ್ಲಿ ನನಗೂ ಅಸಮಾಧಾನ ಇದೆ. ಆದರೆ ತುಮಕೂರು ವಿಚಾರದಲ್ಲಿ ನಾನು ಹೋಗಿ ಕೂತು, ನಾಲ್ಕು ಗೋಡೆ ಮಧ್ಯೆ ಬಗೆಹರಿಸಿಕೊಳ್ತೇನೆ ಎಂದಿದ್ದಾರೆ. ಇದನ್ನೂ ಓದಿ: ನಾವು ಸಿದ್ದರಾಮಯ್ಯ ಶಿಷ್ಯರೇ, ಬ್ರೈನ್ ಮ್ಯಾಪಿಂಗ್ಗೆ ನಾನು ರೆಡಿ – ರಾಜಣ್ಣ ವಿರುದ್ಧ ಮತ್ತೆ ಕಿಡಿಕಾರಿದ ಮಾಗಡಿ ಬಾಲಕೃಷ್ಣ