ಕೋಲಾರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ- ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಾಶ

Public TV
1 Min Read
vlcsnap 2017 05 20 08h46m34s193

ಕೋಲಾರ: ಬರದ ಜಿಲ್ಲೆ ಕೋಲಾರದಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ, ರೈತರ ಬದುಕೇ ಮೂರಾಬಟ್ಟೆಯಾಗಿದೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಬೆಳೆ, ಬಿರುಗಾಳಿ ಸಹಿತ ಮಳೆಗೆ ಕೊಚ್ಚಿಹೋಗಿದೆ.

KLR RAIN

ಜಿಲ್ಲೆಯ ನಂಬಿಗಾನಹಳ್ಳಿ, ಆನೇಪುರ, ಶಕ್ಲಿಪುರ, ಚಿಕ್ಕಸಬ್ಬೇನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿನ ನೂರಾರು ಎಕರೆಯಲ್ಲಿ ಬೆಳೆದಿದ್ದ ಟೊಮ್ಯಾಟೋ, ಕ್ಯಾಪ್ಸಿಕಂ, ಬೀನ್ಸ್, ಮಾವಿನಕಾಯಿ, ಬಾಳೆ ತೋಟ, ಹಿಪ್ಪುನೇರಳೆ ಬೆಳೆ ನೆಲಸಮವಾಗಿದೆ.

vlcsnap 2017 05 20 08h48m14s190

ನಂಬಿಗಾನಹಳ್ಳಿ ಕಾಲೋನಿಯಲ್ಲಿ ಐದಾರು ಮನೆಗಳ ಹೆಂಚುಗಳು ಹಾಗೂ ಸಿಮೆಂಟ್ ಶೀಟ್‍ಗಳು ಹಾರಿಹೋಗಿವೆ. ಇನ್ನೂ ಕೆಲವು ಕಡೆ ಲೈಟ್ ಕಂಬಗಳು, ನೂರಾರು ಮರಗಳು ನೆಲ್ಲಕ್ಕುರುಳಿವೆ. ಇತ್ತ ಜಿಲ್ಲೆಯ ಮುಳಬಾಗಿಲು ತಾಲೂಕಿನ ಅಪ್ಪೇನಹಳ್ಳಿಯಲ್ಲಿ ಮನೆ ಗೋಡೆ ಕುಸಿದು ಒರ್ವ ಸಾವನ್ನಪ್ಪಿ, ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ.

vlcsnap 2017 05 20 08h47m58s22

vlcsnap 2017 05 20 08h47m45s148

vlcsnap 2017 05 20 08h47m39s85

vlcsnap 2017 05 20 08h47m29s234

vlcsnap 2017 05 20 08h47m05s13

vlcsnap 2017 05 20 08h46m47s86

vlcsnap 2017 05 20 08h46m40s4

vlcsnap 2017 05 20 08h48m31s48

Share This Article
Leave a Comment

Leave a Reply

Your email address will not be published. Required fields are marked *