ಬೆಳಗಾವಿ: ಹೋಟೆಲ್ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕನ ಕೂಡಿಹಾಕಿ ಹಿಂಸೆ ನೀಡಿ, ಹಲ್ಲೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಖಾನಾಪುರ (Khanapura) ತಾಲೂಕಿನಲ್ಲಿ ನಡೆದಿದೆ.
ಮಾಣಿಕವಾಡಿ ನಿವಾಸಿ ವೆಂಕಪ್ಪ ಮೈಯೆಕರ್(18) ಸಾವನ್ನಪ್ಪಿದ ಕಾರ್ಮಿಕ ಎಂದು ಗುರುತಿಸಲಾಗಿದೆ. ಖಾನಾಪುರ ಹೊರವಲಯದ ಸ್ವರಾಜ್ ಹೋಟೆಲ್ನಲ್ಲಿ ಮೂರು ತಿಂಗಳಿನಿಂದ ಯುವಕ ಕೆಲಸ ಮಾಡುತ್ತಿದ್ದ. ಆ.20 ರಂದು ಯುವಕನ ಮೇಲೆ ಕಳ್ಳತನ ಆರೋಪ ಹೊರಿಸಿ, ಆತನನ್ನು ಕೂಡಿ ಹಾಕಿ ಹೋಟೆಲ್ ಮಾಲೀಕ ನಾಗೇಶ್ ಗುಂಡು ಬೆಡರೆ, ಸಹೋದರ ವಿಜಯ್ ಬೆಡರೆ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಸ್ಪೈ ಕ್ಯಾಮೆರಾ ಬಳಸಿ ಮಹಿಳೆ ವೀಡಿಯೋ ರೆಕಾರ್ಡ್ – ದೆಹಲಿಯಲ್ಲಿ ಪೈಲಟ್ ಬಂಧನ
ಈ ವಿಚಾರ ತಿಳಿದ ಗ್ರಾಮಸ್ಥರು ಯುವಕನ ತಂದೆಯ ಬೆನ್ನಿಗೆ ನಿಂತು, ಖಾನಾಪುರ ಪೊಲೀಸ್ (Khanapura Police) ಠಾಣೆಗೆ ದೂರು ನೀಡಿದ್ದಾರೆ. ಇದೀಗ ಪೊಲೀಸರು ಕೊಲೆ ಕೇಸ್ ದಾಖಲಿಸಿಕೊಂಡಿದ್ದಾರೆ. ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಪೋಷಕರು ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಟ್ಟಿದ್ದಾರೆ.

