ಮುಂಬೈ: ಸೋಲಾಪುರದಲ್ಲಿ ಅಕ್ರಮವಾಗಿ ಮಣ್ಣು ಅಗೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಡಿಸಿಎಂ (Maharashtra DCM) ಅಜಿತ್ ಪವಾರ್ (Ajit Pawar) ಮಹಿಳಾ ಐಪಿಎಸ್ ಅಧಿಕಾರಿಯೊಂದಿಗೆ ತೀವ್ರ ವಾಗ್ವಾದ ನಡೆಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗುತ್ತಿವೆ.
ಆ.31ರಂದು ಮಹಿಳಾ ಐಪಿಎಸ್ ಅಧಿಕಾರಿ ಅಂಜನಾ ಕೃಷ್ಣ ಅವರು ರಸ್ತೆ ನಿರ್ಮಾಣಕ್ಕಾಗಿ ಅಕ್ರಮವಾಗಿ ಮಣ್ಣು ಅಗೆಯುತ್ತಿದ್ದ ಸೋಲಾಪುರದ (Solapur) ಕುರ್ದು ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಐಪಿಎಸ್ ಅಧಿಕಾರಿಗೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಕರೆ ಮಾಡಿ, ವಾಗ್ವಾದ ನಡೆಸಿರುವುದು ವೈರಲ್ ಆದ ವಿಡಿಯೋದಲ್ಲಿ ಕಂಡುಬಂದಿದೆ.ಇದನ್ನೂ ಓದಿ: 14 ಪಾಕಿಸ್ತಾನಿ ಉಗ್ರರು, 400 ಕೆಜಿ RDX, 34 ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ
ಎರಡು ನಿಮಿಷಗಳ ಈ ವಿಡಿಯೋದಲ್ಲಿ, ನಾನು ಉಪಮುಖ್ಯಮಂತ್ರಿ ಅಜಿತ್ ಪವಾರ್. ಮಣ್ಣು ಅಗೆಯುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು. ಇಲ್ಲದಿದ್ದರೆ ನಿಮ್ಮ ಮೇಲಾಧಿಕಾರಿಗಳಿಗೆ ತಿಳಿಸಿ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಆದರೆ ಈ ವೇಳೆ ಐಪಿಎಸ್ ಅಧಿಕಾರಿ, ಅಜಿತ್ ಪವಾರ್ ಅವರನ್ನು ಗುರುತಿಸದೇ ನನ್ನ ಮೊಬೈಲ್ಗೆ ಕರೆ ಮಾಡಿ ಎಂದು ಹೇಳಿದ್ದಾರೆ.
Maharashtra Deputy Chief Minister and Nationalist Congress Party (NCP) leader Ajit Pawar has landed in a controversy after a video of him purportedly pressuring a woman IPS officer to halt action against illegal soil excavation in a village in Solapur went viral on social media.… pic.twitter.com/N9yNUTebSH
— IndiaToday (@IndiaToday) September 5, 2025
ಆಗ ಅಜಿತ್ ಪವಾರ್ ಅವರು, ನೀವು ನನ್ನನ್ನು ನೋಡ್ಬೇಕು ಅಲ್ವಾ? ನನಗೆ ನಿಮ್ಮ ಮೊಬೈಲ್ ನಂಬರ್ ಕೊಡಿ ಅಥವಾ ನನಗೆ ವಾಟ್ಸಾಪ್ನಲ್ಲಿ ಕರೆ ಮಾಡಿ. ಆಗ ನಾನು ಯಾರು ಅಂತ ಗೊತ್ತಾಗುತ್ತೆ? ನಾನು ಹೇಳಿದರೂ ಕೇಳುವುದಿಲ್ಲ ಎಂದರೆ ನಿಮಗೆ ಎಷ್ಟು ಧೈರ್ಯ? ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಬೆಳಗಾವಿ ಸುವರ್ಣ ಸೌಧ| ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ – ಹೆಸ್ಕಾಂ ಎಚ್ಚರಿಕೆ