Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

Bengaluru City

ಸಿಎಂ ಕುರ್ಚಿಯಲ್ಲಿ ಕುಳಿತು ನ್ಯಾಯ ಕೊಡುವುದು ಮುಖ್ಯ: ಬಿ.ವೈ.ವಿಜಯೇಂದ್ರ ಅಭಿಪ್ರಾಯ

Public TV
Last updated: September 10, 2025 6:14 pm
Public TV
Share
2 Min Read
SIDDARAMAIAH BY VIJAYENDRA
SHARE

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ (Siddaramaiah), ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ ಸಿಎಂ ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ. ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರವ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಗ್ಗೆ ಫ್ರೀಡಂ ಪಾರ್ಕ್‌ನಲ್ಲಿ ‘ಬೆಂಗಳೂರು ಚಲೋ’ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಬೇಕಾಗಿತ್ತು ಎಂದು ನುಡಿದರು. ಇದನ್ನೂ ಓದಿ: ಅಕ್ರಮ ಗಣಿ ಆಸ್ತಿ ಜಪ್ತಿ ಕಾನೂನಿಗೆ ಅಧಿಕೃತ ಮುದ್ರೆ: ಹೆಚ್.ಕೆ ಪಾಟೀಲ್

Siddaramaiah 3

ಮುಖ್ಯಮಂತ್ರಿಗಳೇ, ಮನೆ ಮುರಿಯುವ ಕೆಲಸ ಮಾಡುವುದು ಸುಲಭ. ಮನೆ ಕಟ್ಟುವುದು ಅತ್ಯಂತ ಕಷ್ಟದ ಕೆಲಸ ಎಂದು ತಿಳಿಸಿದರು. ರಾಜ್ಯದ ಜನರು ನಿಮಗೆ ಆಶೀರ್ವಾದ ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದಿದ್ದಾರೆ. ಈ ರಾಜ್ಯದ ಎಲ್ಲ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯಗಳು, ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡುವ ಅಪೇಕ್ಷೆ ಜನರಲ್ಲಿತ್ತು ಎಂದು ತಿಳಿಸಿದರು. ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಸರ್ಕಾರವು ಶೋಷಿತರಿಗೆ ನ್ಯಾಯ ನೀಡುವ ವಿಚಾರದಲ್ಲಿ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ಷೇಪಿಸಿದರು.

ಬಂಜಾರ, ಭೋವಿ, ಕೊರಚ, ಕೊರವ, ಅಲೆಮಾರಿ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ನಿಮ್ಮ ಸಮಾಜಕ್ಕೆ ಅನ್ಯಾಯ ಆಗಬಾರದೆಂದು ಶೇ 4.5 ರಷ್ಟು ಮೀಸಲಾತಿ ಕೊಟ್ಟಿದ್ದರು. ಅಲೆಮಾರಿ ಸಮುದಾಯಕ್ಕೆ ನ್ಯಾಯ ಕೊಡಲು ಶೇ.1 ಪ್ರತ್ಯೇಕವಾಗಿ ಇಡಲಾಗಿತ್ತು. ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ ನಿಮ್ಮ ಪರವಾಗಿ ನಿರ್ಧಾರ ಮಾಡಿತ್ತು ಎಂದು ವಿವರಿಸಿದರು. ಇದನ್ನೂ ಓದಿ: ಬಿಜೆಪಿಯವ್ರೇ ನಿಮ್ಮ ಮಕ್ಳನ್ನು ವಿದೇಶದಿಂದ ಕರೆಸಿ, ಅವ್ರನ್ನ ಮುಂದೆ ಬಿಟ್ಟು ಹೋರಾಟ ಮಾಡಿ: ಪ್ರಿಯಾಂಕ್ ಖರ್ಗೆ

ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ಅವರು ತಾಂಡಾ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ ರಚಿಸಿದ್ದರು. ಅಲೆಮಾರಿ ಸಮುದಾಯ, ಕೊರಚ, ಕೊರಮ ಸೇರಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದ ರೀತಿಯಲ್ಲಿ ಹಿಂದೆ ಯಡಿಯೂರಪ್ಪ ಅವರು ನೋಡಿಕೊಂಡಿದ್ದರು ಎಂದು ಗಮನ ಸೆಳೆದರು.

ಕಾಂಗ್ರೆಸ್ ಸರ್ಕಾರದ ಒಡೆದಾಳುವ ನೀತಿ..
ಇವತ್ತು ಬ್ರಿಟಿಷರ ಒಡೆದಾಳುವ ನೀತಿಯನ್ನು ಕಾಂಗ್ರೆಸ್ ಸರ್ಕಾರ ಅನುಸರಿಸುತ್ತಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಬ್ರಿಟಿಷರ ಒಡೆದಾಳುವ ನೀತಿಯನ್ನು ಅನುಸರಿಸಿದೆ. ಬಂಜಾರ, ಭೋವಿ, ಕೊರಚ, ಕೊರವ, ಅಲೆಮಾರಿ ಸಮುದಾಯದವರಿಗೆ ಅನ್ಯಾಯ ಮಾಡುವ ಮತ್ತು ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಾಡಿದ್ದಾರೆ. ಮುಖ್ಯಮಂತ್ರಿಗಳನ್ನು ಆ ಭಗವಂತನೂ ಕ್ಷಮಿಸಲು ಸಾಧ್ಯವಿಲ್ಲ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಡಾ. ಉಮೇಶ್ ಜಾಧವ್, ಶಾಸಕರಾದ ಪ್ರಭು ಚೌಹಾಣ್, ಎಂ. ಚಂದ್ರಪ್ಪ, ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸುನೀಲ್ ವಲ್ಯಾಪುರೆ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಶಾಸಕರಾದ ಪಿ. ರಾಜೀವ್, ದೇವನಹಳ್ಳಿ ಚಂದ್ರಪ್ಪ, ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

TAGGED:B.Y vijayendrasiddaramaiahಬಿ.ವೈ.ವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

gilli rashika
ಗಿಲ್ಲಿ ಜೊತೆ ಜಗಳಕ್ಕೆ ಬಿದ್ದ ರಾಶಿಕಾ; ಕಾರಣವೇನು ಗೊತ್ತಾ?
Cinema Latest Top Stories TV Shows
Drishyam 3
ದೃಶ್ಯಂ-3 ರಿಲೀಸ್ ಡೇಟ್ ಫಿಕ್ಸ್: ಸಸ್ಪೆನ್ಸ್ ಥ್ರಿಲ್ಲರ್ ಸೀಕ್ವೆಲ್‌ಗೆ ಜನ ಕಾತುರ 
Cinema Latest South cinema Top Stories
bigg boss
ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಕ್ಕೆ ನೂರು ದಿನಗಳ ಸಂಭ್ರಮ; ಆಟ ಇಲ್ಲಿಗೆ ಮುಗಿದಿಲ್ಲ!
Cinema Latest Top Stories TV Shows
kiccha sudeep priya sudeep
ಕಿಚ್ಚನ ಪತ್ನಿಯ ಹುಟ್ಟುಹಬ್ಬ – ಹೊಸ ಪ್ರತಿಭೆಗಳಿಗೆ ಅವಕಾಶ ಘೋಷಣೆ
Cinema Latest Sandalwood Top Stories

You Might Also Like

MB Patil
Districts

ಜ.9ರಂದು ಜಿಲ್ಲೆಯ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ: ಎಂ.ಬಿ ಪಾಟೀಲ್

Public TV
By Public TV
5 minutes ago
tumakuru suicide
Crime

ತುಮಕೂರು| ಮಕ್ಕಳೊಂದಿಗೆ ಸಂಪಿಗೆ ಬಿದ್ದು ತಾಯಿ ಆತ್ಮಹತ್ಯೆ

Public TV
By Public TV
7 minutes ago
bolero accident chitradurga
Chitradurga

ಚಿತ್ರದುರ್ಗ| ಮರಕ್ಕೆ ಬೊಲೆರೊ ಡಿಕ್ಕಿ – ನಾಲ್ವರು ದುರ್ಮರಣ

Public TV
By Public TV
29 minutes ago
kea
Bengaluru City

ಎಲ್ಲ 24 ಪಶು ವೈದ್ಯಕೀಯ ಸೀಟೂ ಹಂಚಿಕೆ: ಕೆಇಎ

Public TV
By Public TV
46 minutes ago
modi prithviraj chavan
Latest

ವೆನೆಜುವೆಲಾದಂತೆ ಟ್ರಂಪ್ ಭಾರತದ ಪ್ರಧಾನಿ ಮೋದಿಯನ್ನು ಕಿಡ್ನ್ಯಾಪ್ ಮಾಡ್ತಾರಾ? – ಪೃಥ್ವಿರಾಜ್ ಚವಾಣ್ ವಿವಾದಿತ ಹೇಳಿಕೆ

Public TV
By Public TV
1 hour ago
Zameer Ahmed Khan
Bellary

ಬ್ಯಾನರ್ ಗಲಾಟೆ | ಮೃತ `ಕೈ’ ಕಾರ್ಯಕರ್ತನ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ – ಸಚಿವ ಜಮೀರ್ ವಿರುದ್ಧ ಐಟಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?