– ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಒಟ್ಟಿಗೆ ಇರುವ ಫೋಟೊ ಶೇರ್ ಮಾಡಿ ಬಣ್ಣನೆ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ (C.P.Radhakrishnan), ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಒಟ್ಟಿಗೆ ಕುಳಿತಿರುವ ಫೋಟೊವನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ (B.L.Santhosh) ಹಂಚಿಕೊಂಡಿದ್ದಾರೆ. ಇವರ್ಯಾರೂ ರಾಜವಂಶಸ್ಥರಲ್ಲ, ಸ್ವಂತ ಪರಿಶ್ರಮದಿಂದ ಮೇಲೆ ಬಂದವರು ಎಂದು ಬಣ್ಣಿಸಿದ್ದಾರೆ.
ಇವರಿಗೆ ತಮ್ಮ ಹಕ್ಕುಗಳ ಪ್ರಜ್ಞೆಯೂ ಇಲ್ಲ. ಮೂವರೂ ಸ್ವಂತ ಪರಿಶ್ರಮದಿಂದ ಮೇಲೆ ಬಂದವರು. ಹಿಂದುಳಿದ ಸಮುದಾಯದಿಂದ ಬಂದವರು. ಜೀವನದ ಪ್ರತಿಯೊಂದು ಹಂತದಲ್ಲೂ ಮೆಟ್ಟಿಲುಗಳನ್ನು ಏರಿ ಬಂದಿದ್ದಾರೆ. ಅದು ಭಾರತದ ಪ್ರಜಾಪ್ರಭುತ್ವ ಮತ್ತು ನಾಗರಿಕತೆಯ ಶಕ್ತಿ ಎಂದು ಬಿಎಲ್ ಸಂತೋಷ್ ತಿಳಿಸಿದ್ದಾರೆ. ಇದನ್ನೂ ಓದಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ಸ್ವೀಕಾರ
• Not dynast nor with sense of entitlement
• All three self made
• From humble backgrounds
• Climbed steps in every phase of life , didn’t use lifts
That’s the strength of Bharath’s Democracy & Civilisation . @rashtrapatibhvn @narendramodi @CPRGuv pic.twitter.com/1IRz4wevTn
— B L Santhosh (@blsanthosh) September 12, 2025
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯ ಕುಟುಂಬದಿಂದ ಬಂದವರು. ಚಿಕ್ಕ ವಯಸ್ಸಿನಲ್ಲಿ ಟೀ ಮಾರುತ್ತಿದ್ದ ವ್ಯಕ್ತಿ ಈಗ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದಾರೆ. ಆರ್ಎಸ್ಎಸ್ ಕಾರ್ಯಕರ್ತನಾಗಿ, ರಾಜಕೀಯ ನಾಯಕನಾಗಿ ಹಲವಾರು ಹುದ್ದೆಗಳನ್ನು ಅಲಂಕರಿಸಿದವರು. ತುರ್ತು ಪರಿಸ್ಥಿತಿ ಸೇರಿ ಆಗಿನ ಕೇಂದ್ರ ಸರ್ಕಾರದ ಹಲವಾರು ಕ್ರಮಗಳ ವಿರುದ್ಧದ ಹೋರಾಟಗಳಲ್ಲೂ ಭಾಗಿಯಾಗಿದ್ದರು. ಸತತ ಮೂರು ಅವಧಿಗೆ ಪ್ರಧಾನಿಯಾಗಿ ದಾಖಲೆ ಕೂಡ ಬರೆದಿದ್ದಾರೆ.
ದ್ರೌಪದಿ ಮುರ್ಮು ಅವರು ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಸಾಮಾನ್ಯ ಕುಟುಂಬದಿಂದ ಬಂದ ಅವರು ಈಗ ರಾಷ್ಟ್ರಪತಿಯಾಗಿದ್ದಾರೆ. ಇವರು ಸಹ ಬಿಜೆಪಿಯ ಹಲವಾರು ಹುದ್ದೆಗಳನ್ನು ಕಾರ್ಯನಿರ್ವಹಿಸಿದ್ದಾರೆ.
ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರು ದೊಡ್ಡ ಕೌಟುಂಬಿಕ ಹಿನ್ನೆಲೆಯಿಂದ ಬಂದವರಲ್ಲ. ಚಿಕ್ಕ ವಯಸ್ಸಿನಲ್ಲೇ ಆರ್ಎಸ್ಎಸ್ನಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡರು. ನಂತರ ಬಿಜೆಪಿ ಸೇರಿ ತಮಿಳುನಾಡಿನಲ್ಲಿ ತಳಮಟ್ಟದಲ್ಲಿ ವ್ಯಾಪಕ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಇಂದು ಪ್ರಮಾಣವಚನ ಸ್ವೀಕಾರ