Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯದ ಅಭಿವೃದ್ಧಿಗೆ 1,970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಂಡ್ಯದ ಅಭಿವೃದ್ಧಿಗೆ 1,970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

Districts

ಮಂಡ್ಯದ ಅಭಿವೃದ್ಧಿಗೆ 1,970 ಕೋಟಿ ರೂ. ಐತಿಹಾಸಿಕ ಅನುದಾನ: ಡಿಕೆಶಿ

Public TV
Last updated: September 15, 2025 12:14 pm
Public TV
Share
4 Min Read
DK Shivakumar 2 1
SHARE

– ಪ್ರವಾಸೋದ್ಯಮ ನೀತಿಯಿಂದ 1.50 ಲಕ್ಷ ಉದ್ಯೋಗ ಸೃಷ್ಟಿ

ಮಂಡ್ಯ: ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1,970 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ (Karnataka) ಇತಿಹಾಸದಲ್ಲಿಯೇ ಮಂಡ್ಯ (Mandya) ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಹೇಳಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ (Malavalli) ಭಾನುವಾರ (ಸೆ.14) ನಡೆದ ಗಗನಚುಕ್ಕಿ ಜಲಪಾತೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಅನುದಾನದ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಸುಳ್ಳು ಹೇಳಿದ್ದರೇ ವಿರೋಧ ಪಕ್ಷದವರು ಚರ್ಚೆ ಮಾಡಬಹುದು. ಜಿಲ್ಲೆಯ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಮಂಡ್ಯ ಜಿಲ್ಲೆಯ ರೈತರ ಬದುಕಿನ ಉನ್ನತಿ ಸೇರಿದಂತೆ ಎಲ್ಲರ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಸಿದ್ದರಾಮಯ್ಯ ಅವರ ಸರ್ಕಾರ ಪಣತೊಟ್ಟಿದೆ ಎಂದು ತಿಳಿಸಿದರು. ಇದನ್ನೂ ಓದಿ: ಎರಡು ದಿನಗಳ ವರ್ಣರಂಜಿತ ಗಗನಚುಕ್ಕಿ ಜಲಪಾತೋತ್ಸವಕ್ಕೆ ತೆರೆ

ಮಳವಳ್ಳಿಯ ಜನಪ್ರಿಯ ಶಾಸಕರಾದ ನರೇಂದ್ರ ಸ್ವಾಮಿ ಅವರು ತಮ್ಮ ಕ್ಷೇತ್ರದ ಅಭಿವೃದ್ಧಿಗೆ 300 ಕೋಟಿ ರೂ. ಅನುದಾನ ತಂದಿದ್ದಾರೆ. ಮಂಡ್ಯದ ಜನತೆಯ ಸೇವೆಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ನಾವು ನಿಮ್ಮ ನಂಬಿಕೆ ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವೊಬ್ಬರು ಜಿಲ್ಲೆಯಲ್ಲಿ ಶಾಂತಿಭಂಗ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದರು.

ನಗುವು ಸಹಜದ ಧರ್ಮ, ನಗಿಸುವುದು ಪರಧರ್ಮ, ನಗುವ ಕೇಳುತ ನಗುವುದತಿಶಯದ ಧರ್ಮ, ನಗುವ ನಗಿಸುವ ನಗಿಸಿ ನಗುತ ಬಾಳುವ ವರವಮಿಗೆ ನೀನು ಬೇಡಿಕೊಳ್ಳೋ ಮಂಕುತಿಮ್ಮ ಎಂದು ಡಿವಿಜಿ ಹೇಳಿದ್ದಾರೆ. ಏನೇ ಬಂದರೂ ಎಲ್ಲರೂ ನಗುತಾ ಒಟ್ಟಾಗಿ ಬಾಳಬೇಕು ಎಂದು ಕರೆ ನೀಡಿದರು.

DK Shivakumar 1 1

ಪ್ರವಾಸೋದ್ಯಮ ನೀತಿಯಿಂದ 1.5 ಲಕ್ಷ ಉದ್ಯೋಗ ಸೃಷ್ಟಿ ಗುರಿ:
ನಮ್ಮ ಕರ್ನಾಟಕ ಸಾಹಿತ್ಯ, ಸಂಗೀತ, ಚಿತ್ರಕಲೆ, ಶಿಲ್ಪಕಲೆ, ಧಾರ್ಮಿಕ, ಶೈಕ್ಷಣಿಕ ಹೀಗೆ ಅನೇಕ ರಂಗಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ರಾಜ್ಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಿ ನಾವು ಇತರರಿಗೆ ಮಾದರಿಯಾಗಿದ್ದೇವೆ. ಇದರಿಂದ 1.5 ಲಕ್ಷ ಉದ್ಯೋಗ ಸೃಷ್ಟಿಗೆ ನಾವು ಮುಂದಡಿಯಿಟ್ಟಿದ್ದೇವೆ. ಈ ಭಾಗದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಪಟ್ಟ ಸಚಿವರು, ಜನಪ್ರತಿನಿಧಿಗಳ ಜೊತೆ ಚರ್ಚೆ ನಡೆಸುತ್ತೇವೆ. ಪ್ರವಾಸೋದ್ಯಮದಿಂದ ಯುವಕರ ಬದುಕಿನಲ್ಲಿ ಬದಲಾವಣೆಯಾಗಲಿದೆ. ಉದ್ಯೋಗ ಸೃಷ್ಟಿಯಾಗಲಿದೆ. ಕಬಿನಿ ಭಾಗದಲ್ಲಿನ ಪ್ರಾಕೃತಿಕ ಸಂಪತ್ತು ದೇಶದಲ್ಲಿಯೇ ಅಪರೂಪ. ಕರ್ನಾಟಕ ಜಲಪಾತಗಳ ತವರೂರು. ನಮ್ಮ ರಾಜ್ಯದಲ್ಲಿ ಸುಮಾರು 544ಕ್ಕೂ ಹೆಚ್ಚು ಜಲಪಾತಗಳಿವೆ ಎಂದರು. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಅನುಮತಿ ನೀಡಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ

ಕಾವೇರಿ ಆರತಿ ಮೂಲಕ ತಾಯಿಗೆ ನಮನ ಸಲ್ಲಿಸಲು ಹೊರಟಿದ್ದೆವು. ಕೋರ್ಟ್ ನಿರ್ಬಂಧ ಹಾಗೂ ರೈತ ಸಂಘದವರ ಅಡಚಣೆಯಿಂದ ನಿಧಾನವಾಗುತ್ತಿದೆ. ಪ್ರಾರ್ಥನೆ ಸಲ್ಲಿಸಲು, ಆರತಿ ಮಾಡಲು ಯಾರೂ ಸಹ ನಿರ್ಬಂಧ ಮಾಡಲು ಸಾಧ್ಯವಿಲ್ಲ. ಇನ್ನೂ ಹೆಚ್ಚುವರಿ ಕಾವೇರಿ ನೀರಿನ ಸಂಗ್ರಹಕ್ಕಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ನಾನು ಹೋರಾಟ ಪ್ರಾರಂಭ ಮಾಡಿದೆ. ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಲಾಯಿತು. ಪ್ರಕೃತಿಯನ್ನು ಪೂಜಿಸುವುದು ನಮ್ಮ ಸಂಸ್ಕೃತಿ. ಜೂನ್ ತಿಂಗಳಿನಲ್ಲಿಯೇ ಕನ್ನಂಬಾಡಿ ಅಣೆಕಟ್ಟು ತುಂಬಿ ಇತಿಹಾಸ ನಿರ್ಮಾಣವಾಗಿದೆ. ಈ ವರ್ಷ 125 ಟಿಎಂಸಿ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ತೀರ್ಪಿನ ಪ್ರಕಾರ 177 ಟಿಎಂಸಿ ನೀರು ಹರಿಸಬೇಕಿತ್ತು ಎಂದು ತಿಳಿಸಿದರು.

DK Shivakumar 3

ಕಾವೇರಿ ತಾಯಿ ನಮಗೆ ಬದುಕು, ಅನ್ನ, ಜನ್ಮ ನೀಡಿದ್ದಾಳೆ. ಈಕೆ ಪುಣ್ಯದಾತೆ. ಕೊಡಗಿನಲ್ಲಿ ಜನಿಸಿ ಅರಬ್ಬಿ ಸಮುದ್ರ ಸೇರುವ ತನಕ ಲಕ್ಷಾಂತರ ಜನರಿಗೆ ಜೀವನ ನೀಡಿದ್ದಾಳೆ. ಕಾವೇರಿ ಹರಿಯುವ ಭೂಮಿ ಪವಿತ್ರ ಭೂಮಿ. ಕುಡಿಯುವ ನೀರಿಗೆ, ಕೈಗಾರಿಕೆಗೆ, ವಿದ್ಯುತ್ ಉತ್ಪಾದನೆಗೆ, ಪ್ರಮುಖವಾಗಿ ಕೃಷಿಗೆ, ಮೀನುಗಾರಿಕೆಗೆ ಹೀಗೆ ಪ್ರತಿ ಹಂತದಲ್ಲಿಯೂ ತಾಯಿ ಜೊತೆಯಾಗಿ ನಿಂತಿದ್ದಾಳೆ ಎಂದರು.

ಗಗನಚುಕ್ಕಿ ಜಲಪಾತವಿರುವ ಜಾಗ ಐತಿಹಾಸಿಕ ಸ್ಥಳ. ಏಷ್ಯಾದಲ್ಲಿಯೇ ಮೊಟ್ಟಮೊದಲ ಜಲವಿದ್ಯುತ್ ಉತ್ಪಾದನೆ ಮಾಡಿದ ಸ್ಥಳವಿದು. ಶಾಲಾ ದಿನಗಳಲ್ಲಿ ಇಲ್ಲಿಗೆ ಪ್ರವಾಸಕ್ಕೆ ಬಂದಿದ್ದೆ. ಆನಂತರ ವಿದ್ಯುತ್ ಸಚಿವನಾಗಿದ್ದಾಗ ಭೇಟಿ ನೀಡಿದ್ದೆ. ಇದೀಗ ಮತ್ತೊಮ್ಮೆ ನೋಡುವ ಸೌಭಾಗ್ಯ ದೊರೆತಿದೆ. ಕೆಜಿಎಫ್‌ಗೆ ವಿದ್ಯುತ್ ನೀಡುವ ಉದ್ದೇಶದಿಂದ 1904ರಲ್ಲಿ ಇಲ್ಲಿಂದ ವಿದ್ಯುತ್ ಉತ್ಪಾದನೆ ಮಾಡಿ ನೀಡಲಾಯಿತು. ಇಲ್ಲಿಂದ ವಿದ್ಯುತ್ ನೀಡದೇ ಇದ್ದಿದ್ದರೆ ಅಭಿವೃದ್ಧಿಯೇ ಇಲ್ಲದಂತಾಗುತ್ತಿತ್ತು. ಇದರಿಂದ ನಮ್ಮೆಲ್ಲರ ಬದುಕಿಗೆ ಬೆಳಕು ಬಂದಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಗಗನಚುಕ್ಕಿ ಜಲಪಾತದ ಸಮೀಪ ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಗಗನಚುಕ್ಕಿ ಜಲಪಾತೋತ್ಸವ 2025ರ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡೆ. pic.twitter.com/o6Uhs84rVR

— DK Shivakumar (@DKShivakumar) September 14, 2025

ಪ್ರವಾಸೋದ್ಯಮದಿಂದ ಸಾಕಷ್ಟು ಅಭಿವೃದ್ಧಿ ಸಾಧ್ಯ. ಕಳೆದ ವರ್ಷ ಸುಮಾರು 10 ಲಕ್ಷ ಜನರು ದಸರಾ ವೀಕ್ಷಣೆ ಮಾಡಿದರು. ಶಕ್ತಿ ಯೋಜನೆಯ ಪರಿಣಾಮ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ದಸರಾದಲ್ಲಿ ಭಾಗವಹಿಸಿದರು. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿನಲ್ಲಿ ಬೆಳಕು ಬಂದಿದೆ. ಈ ಹಸ್ತ ರೈತರ, ಬಡವರ, ಕೂಲಿಕಾರ್ಮಿಕರ, ಮಹಿಳೆಯರ ಬದುಕನ್ನು ಭದ್ರ ಮಾಡಿದೆ ಎಂದರು. ಇದನ್ನೂ ಓದಿ: ಕುರುಬ ಸಮುದಾಯವನ್ನ STಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ನಾಳೆ ಮಹತ್ವದ ಸಭೆ

TAGGED:congressDK ShivakumarGaganachukki FallsMalavallimandyaTourism Departmentಗಗನಚುಕ್ಕಿಡಿ.ಕೆ. ಶಿವಕುಮಾರ್‌ಮಂಡ್ಯಮಳವಳ್ಳಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

siddaramaiah narendramodi delhi 2
Bengaluru City

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಸರ್ವನಾಶ – ಸಿಎಂ, ಡಿಕೆಶಿ, ಸುರ್ಜೇವಾಲಾ ಖಂಡನೆ

Public TV
By Public TV
19 minutes ago
Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
2 hours ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
2 hours ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
2 hours ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
2 hours ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?