Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

Bagalkot

ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

Public TV
Last updated: September 15, 2025 2:43 pm
Public TV
Share
2 Min Read
Bagalkote Stray dog 1
SHARE

ಬಾಗಲಕೋಟೆ: ಕೈ,ಕಾಲುಗಳ ಮೇಲೆ ಜಿನುಗುತ್ತಿರುವ ರಕ್ತ, ಗಂಭೀರ ಗಾಯಗೊಂಡವರಿಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು, ಏನೋ ದುರಂತ ನಡೆದಿದೆ ಎಂದು ಗಾಬರಿಯಿಂದ ಮುಗಿಬಿದ್ದಿರುವ ಜನತೆ.

ಅಂದ ಹಾಗೆ ಈ ದೃಶ್ಯಗಳು ಕಂಡು ಬಂದಿದ್ದು ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ. ಕಳೆದ ನಾಲ್ಕೈದು ದಿನಗಳ ಹಿಂದೆ ನವನಗರದ ಎಪಿಎಂಸಿ ಬಳಿ ಹುಚ್ಚು ನಾಯಿಯೊಂದು (Stray Dog) ಕೆಲಸಕ್ಕೆಂದು ಹೊರಟವರ, ಬಸ್‌ಗಾಗಿ ಕಾಯುತ್ತಿದ್ದವರ ಸುಮಾರು ಹತ್ತು ಜನರ ಮೇಲೆ ತೀವ್ರ ದಾಳಿ ನಡೆಸಿ ಗಾಯಗೊಳಿಸಿತ್ತು. ಸಾಲದು ಎಂಬಂತೆ ಪಕ್ಕದಲ್ಲೇ ಎಪಿಎಂಸಿ ಯಾರ್ಡ್‌ನಲ್ಲಿರುವ ಅಂಧ ಶಾಲಾ ಮಕ್ಕಳ ಮೇಲೂ ದಾಳಿ ನಡೆಸಿ ಕೈ, ಕಾಲು ಸೇರಿ ದೇಹದ ಬೇರೆ ಬೇರೆ ಭಾಗದಲ್ಲಿ ತೀವ್ರವಾಗಿ ಕಚ್ಚಿತ್ತು.

ಒಟ್ಟು 15 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಅವರೆಲ್ಲಾ ಜಿಲ್ಲಾಸ್ಪತ್ರೆಗೆ (Bagalkote District Hospital) ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ಘಟನೆಯಿಂದ ನಗರದ ಜನತೆ ಆತಂಕಕ್ಕೊಳಗಾಗಿತ್ತು. ಸಾಮಾನ್ಯ ನಾಯಿಗಳು ಬಳಿ ಬಂದರು ಸಹ ಭಯದಿಂದ ದೂರ ಸರಿಯುವ ರೀತಿಯಾಗಿತ್ತು. ಕಣ್ಣಿದ್ದವರು ಹೇಗೋ ವಾಸಿಯಾಗಿ ಬಿಡುತ್ತಾರೆ. ಆದರೆ ಜಗತ್ತೇ ಕತ್ತಲಾಗಿದ್ದವರ ಗತಿ ಏನು? ಹೀಗಾಗಿ ಹುಚ್ಚು ನಾಯಿ ಕಡಿತಕ್ಕೊಳಗಾದ ಅಂಧ ಶಾಲಾ ಶಿಕ್ಷಕಿ ಹೇಮಾವತಿ ಹಾಗೂ ಸ್ಥಳೀಯರು ಹುಚ್ಚು ನಾಯಿ, ಬೀದಿ ನಾಯಿಗಳ ಹಾವಳಿಯಿಂದ ನಮ್ಮನ್ನು ರಕ್ಷಿಸಿ, ಮೇಲಿಂದ ಮೇಲೆ ನಾಯಿ ದಾಳಿ ನಡೆಯುತ್ತಿದೆ. ಭಯದಲ್ಲೇ ಜೀವನ ಮಾಡಬೇಕಿದೆ. ಬೀದಿ ನಾಯಿಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾಡಳಿತ, ನಗರಸಭೆಗೆ ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚೆಗೆ ಬಾಗಲಕೋಟೆ ನಗರದಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚಾಗಿವೆ ಎಂದು ಅಂಕಿ ಅಂಶಗಳೇ ಹೇಳುತ್ತಿವೆ.ಜಿಲ್ಲೆಯಲ್ಲಿ ಒಂದೇ ವರ್ಷದಲ್ಲಿ 1669 ಜನರಿಗೆ ನಾಯಿ ಕಡಿತವಾಗಿದೆ.ಇದನ್ನೂ ಓದಿ: Bengaluru | ಆಟೋಗೆ ಕಸ ನೀಡದ ಮನೆಗಳಿಗೆ ನೋಟಿಸ್

Stray Dogs
ಸಾಂದರ್ಭಿಕ ಚಿತ್ರ

ಪ್ರತಿ ತಿಂಗಳು ಸರಾಸರಿ 200 ಜನ ನಾಯಿ ಕಡಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅದರಲ್ಲೂ ಇಬ್ಬರೂ ನಾಯಿ ಕಡಿತದಿಂದ ಸಾವನ್ನಪ್ಪಿದ್ದು ಭಯ ಮೂಡಿಸುತ್ತದೆ. ಒಂದೇ ತಿಂಗಳಲ್ಲಿ ಬಾಗಲಕೋಟೆ ನಗರದಲ್ಲಷ್ಟೇ 30ಕ್ಕೂ ಹೆಚ್ಚು ಜನರ ಮಾರಣಾಂತಿಕ ನಾಯಿ ದಾಳಿಗೆ ಒಳಗಾಗಿದ್ದಾರೆ.

ಬಾಗಲಕೋಟೆ ಮತ್ತು ಇಳಕಲ್‌ ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಯಿ ಕಡಿತದ ಪ್ರಕರಣ ಬೆಳಕಿಗೆ ಬಂದಿದೆ. ಹುಚ್ಚು ಹಿಡಿದ ಹಿನ್ನೆಲೆ ನಾಯಿಯನ್ನು ಯಾರೋ ಬೀದಿಗೆ ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ.ಮಹೇಶ್ ಕೋಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಸಿದ ದರ್ಶನ್ ಪರ ವಕೀಲರು

ಜಿಲ್ಲಾಸ್ಪತ್ರೆಗೆ ಮೂರು ಕೆಟಗೆರಿಗೆಯಲ್ಲಿ ಪ್ರಕರಣ ದಾಖಲಾಗುತ್ತವೆ. ಕೆಟಗೆರಿ ಮೂರರ ಪ್ರಕರಣಗಳೇ ಜಿಲ್ಲಾಸ್ಪತ್ರೆಗೆ ಹೆಚ್ಚು ದಾಖಲಾಗಿವೆ. ಮೊದಲ ಕೆಟಗೆರಿಯಲ್ಲಿ ಕೇವಲ ಟಿಟಿ ಇಂಜೆಕ್ಷನ್ ಮಾತ್ರ, ಎರಡರಲ್ಲಿ ಟಿಟಿ+ಇಂಟ್ರಾ ಮಸಿಕ್ಯೂಲರ್ ಇಂಜೆಕ್ಷನ್ ಕೊಡಲಾಗುತ್ತೆ. ಕೆಟಗರಿ ಮೂರರ ವ್ಯಕ್ತಿಗಳಿಗೆ ಟಿಟಿ,ಇಂಟ್ರಾ ಮಸಿಕ್ಯೂಲರ್, ಎಆರ್ 5 ಡೋಸ್‌ ಇಂಜೆಕ್ಷನ್ ಕೊಡಲಾಗುತ್ತೆ ಎಂದು ನಾಯಿ ಕಡಿತಕ್ಕೆ ಒಳಗಾಗು ವ್ಯಕ್ತಿಗಳ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿದರು.

ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ ಮತ್ತು ಪಸು ಸಂಗೋಪನೆ ಇಲಾಖೆಯಿಂದ ತಂಡ ರಚನೆ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವುದಾಗಿ ಮಹೇಶ್ ಕೋಣಿ ತಿಳಿಸಿದರು.

TAGGED:bagalkotehospitalstray dogಜಿಲ್ಲಾಸ್ಪತ್ರೆಬಾಗಲಕೋಟೆಬೀದಿ ನಾಯಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
7 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?