Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಶಕಗಳ ಕನಸು ನನಸು – ಕಣಿವೆ ರಾಜ್ಯ ಮಿಜೋರಾಂಗೆ ಮೊದಲ ರೈಲು ಮಾರ್ಗ; ವಿಶೇಷತೆಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದಶಕಗಳ ಕನಸು ನನಸು – ಕಣಿವೆ ರಾಜ್ಯ ಮಿಜೋರಾಂಗೆ ಮೊದಲ ರೈಲು ಮಾರ್ಗ; ವಿಶೇಷತೆಗಳೇನು?

Latest

ದಶಕಗಳ ಕನಸು ನನಸು – ಕಣಿವೆ ರಾಜ್ಯ ಮಿಜೋರಾಂಗೆ ಮೊದಲ ರೈಲು ಮಾರ್ಗ; ವಿಶೇಷತೆಗಳೇನು?

Public TV
Last updated: September 17, 2025 7:39 am
Public TV
Share
4 Min Read
Mizoram Bairabi–Sairang Train
SHARE

ಮಿಜೋರಾಂ ರಾಜಧಾನಿ ಐಜ್ವಾಲ್ ಅನ್ನು ದೆಹಲಿಯೊಂದಿಗೆ ಸಂಪರ್ಕಿಸುವ ರಾಜ್ಯದ ಮೊದಲ ರಾಜಧಾನಿ ಎಕ್ಸ್‌ಪ್ರೆಸ್ ರೈಲಿಗೆ‌ ಸೆ.13ರಂದು ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದ್ದಾರೆ. ಈ ಮೂಲಕ ಅಲ್ಲಿನ ಜನತೆಯ ದಶಕದ ಕನಸು ನನಸಾಗಿದೆ. ಅಲ್ಲದೇ ಐಜ್ವಾಲ್‌ ನಗರ ಮೊಟ್ಟ ಮೊದಲ ಬಾರಿಗೆ ಭಾರತೀಯ ರೈಲ್ವೆ ಜಾಲ ಸೇರಿಕೊಂಡಿದೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿ ರೈಲು ಮಾರ್ಗ ನಿರ್ಮಾಣ ಮಾಡುವುದು ಅತ್ಯಂತ ಸವಾಲಿನ ಕೆಲಸವಾಗಿತ್ತು. ಇದೀಗ ನಿಧಾನಗತಿಯಲ್ಲಿ ಸಾಗಿದ್ದ ರೈಲ್ವೆ ಕಾಮಗಾರಿ 11 ವರ್ಷಗಳ ಬಳಿಕ ಪೂರ್ಣಗೊಂಡಿದೆ. ಹಾಗಿದ್ರೆ ಇದರ ವಿಶೇಷತೆ ಏನು ಎಂಬುದರ ಕುರಿತು ಇಲ್ಲಿ ವಿವರಿಸಲಾಗಿದೆ.

ಬೈರಾಬಿ- ಸೈರಾಂಗ್‌ ನಡುವಿನ ಈ ರೈಲು ಮಾರ್ಗವನ್ನು ಸೆ.13 ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ದುರ್ಗಮ ಗುಡ್ಡಗಾಡು ಪ್ರದೇಶ, ಆಳವಾದ ಕಂದಕ, ಕಣಿವೆಗಳಿಂದ ಕೂಡಿರುವ ಈಶಾನ್ಯ ರಾಜ್ಯದಲ್ಲಿರೈಲು ಮಾರ್ಗ ಕಾರ್ಯಗತಗೊಂಡಿದ್ದೇ ದೊಡ್ಡ ಸಾಹಸ. ಮೊದಲು ಸಿಲ್ಚಾರ್‌ನಿಂದ ಐಜ್ವಾಲ್‌ಗೆ 8-10 ಗಂಟೆ ಪ್ರಯಾಣ ಮಾಡಬೇಕಿತ್ತು. ಈಗ ಕೇವಲ 4 ಗಂಟೆಯಲ್ಲಿ ಐಜ್ವಾಲ್‌ ತಲುಪಬಹುದು.

Bairabi–Sairang Train Mizoram

8,070 ಕೋಟಿ ರೂ. ವೆಚ್ಚದ ಯೋಜನೆ:
ಭಾರತೀಯ ರೈಲ್ವೆ (ಎನ್‌ಎಫ್‌ಆರ್) ಈ ನೂತನ ರೈಲು ಮಾರ್ಗವನ್ನು ನಿರ್ಮಿಸಿದೆ. ಅಸ್ಸಾಂ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಈ ರಾಜ್ಯದ ಗಡಿ ಭಾಗದವರೆಗೆ ರೈಲ್ವೆ ಸಂಪರ್ಕ ಈ ಹಿಂದೆಯೇ ಇತ್ತು. ಆದರೆ, ರಾಜ್ಯದೊಳಗೆ ಇನ್ನೂ ರೈಲು ಸಂಪರ್ಕ ಕಲ್ಪಿಸಿರಲಿಲ್ಲ. ಈಗ ರಾಜ್ಯದೊಳಗೆ ರೈಲಿನ ಸದ್ದು ಮೊಳಗಲಿದೆ. 2014ರ ನವೆಂಬರ್‌ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಿಜೋರಾಂ ರಾಜ್ಯದಲ್ಲಿ ಬೈರಾಬಿಯಿಂದ ಸೈರಾಂಗ್‌ ತನಕ ಹೊಸ ರೈಲು ಮಾರ್ಗದ ಶಿಲಾನ್ಯಾಸ ನೆರವೇರಿಸಿದ್ದರು. 2016ರ ಮಾ.21ರಂದು ಅಸ್ಸಾಂನಿಂದ ಬೈರಾಬಿವರೆಗೆ ರೈಲು ಮಾರ್ಗವನ್ನು ಬ್ರಾಡ್‌ಗೇಜ್‌ಗೆ ಪರಿವರ್ತನೆ ಮಾಡುವ ಮೂಲಕ ಮಿಜೋರಾಂನ ಬೈರಾಬಿಗೆ ಮೊದಲ ರೈಲು ತಲುಪಿತು. ಈ ಯೋಜನೆಗೆ 8,070 ಕೋಟಿ ರೂ. ವೆಚ್ಚವಾಗಿದೆ.

11 ವರ್ಷಗಳ ಬಳಿಕ ಕಾಮಗಾರಿ ಪೂರ್ಣ:
ರೈಲ್ವೆ ಟ್ರ್ಯಾಕ್‌ ಬಹುತೇಕ ಸುರಂಗ ಮತ್ತು ಸೇತುವೆ ಮೇಲೆಯೇ ನಿರ್ಮಾಣವಾಗಿದೆ. ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೂ ಇಲ್ಲಿಭಾರಿ ಮಳೆ ಸುರಿಯುತ್ತಿರುತ್ತದೆ. ಈ ಸಂದರ್ಭದಲ್ಲಿಕೆಲಸ ಮಾಡಲು ಸಾಧ್ಯವೇ ಇಲ್ಲ. ವರ್ಷದಲ್ಲಿ ನಾಲ್ಕೈದು ತಿಂಗಳು ಮಾತ್ರವೇ ಕಾಮಗಾರಿ ಸಾಧ್ಯ. ಸಣ್ಣ ಮಳೆ ಬಂದರೂ ಕಾರ್ಮಿಕರು ಕಾಮಗಾರಿ ಪ್ರದೇಶಕ್ಕೆ ತಲುಪುವುದೇ ದೊಡ್ಡ ಸಾಹಸ. ಯಾವಾಗ ಗುಡ್ಡ ಕುಸಿದು ಬೀಳುತ್ತದೆಯೋ ಎನ್ನುವ ಆತಂಕ. ನಿರ್ಮಾಣಕ್ಕೆ ಬೇಕಾದ ಭಾರಿ ವಾಹನಗಳನ್ನು ತೆಗೆದುಕೊಂಡು ಹೋಗುವುದು ಇನ್ನಷ್ಟು ದುಸ್ತರ.  ಈ ಎಲ್ಲಾಕಷ್ಟಗಳ ಹೊರತಾಗಿಯೂ ಸುಸಜ್ಜಿತ ಟ್ರ್ಯಾಕ್‌ ನಿರ್ಮಾಣವಾಗಿದೆ. ಇಂಥ ರೈಲು ಮಾರ್ಗದಲ್ಲಿಸಾಗುವುದೇ ಒಂದು ಸುಂದರ ಅನುಭವ. ಈ ಮಾರ್ಗದಲ್ಲಿಹೊರ್ಟೋಕಿ, ಕೌನ್ಪುಯಿ, ಮುವಾಲ್ಖಾಂಗ್‌ ಮತ್ತು ಸೈರಾಗ್‌ ಸೇರಿದಂತೆ ಒಟ್ಟು ನಾಲ್ಕು ರೈಲು ನಿಲ್ದಾಣಗಳಿವೆ.

45 ಸುರಂಗ, 153 ಸೇತುವೆ:
ಬೈರಾಬಿ- ಸೈರಾಂಗ್‌ ರೈಲು ಮಾರ್ಗದಲ್ಲಿಒಟ್ಟು 45 ಸುರಂಗಗಳಿದ್ದು ಒಟ್ಟು ಮಾರ್ಗದ 15.885 ಕಿ.ಮೀ ನಷ್ಟು (31%) ದೂರವನ್ನು ಸುರಂಗ ಮಾರ್ಗಗಳೇ ಒಳಗೊಂಡಿವೆ. ಒಟ್ಟು ಸೇತುವೆಗಳ ಉದ್ದ 11.78 ಕಿ.ಮೀ ಇದ್ದು, ಮೇಲ್ಸೇತುವೆ, ಕೆಳಸೇತುವೆ ಸೇರಿ ಒಟ್ಟು 153 ಸೇತುವೆಗಳಿವೆ. ನೆಲದಿಂದ 114 ಮೀಟರ್‌ ಎತ್ತರದಲ್ಲಿ ಕಂಬ ನಿರ್ಮಿಸಿ ಸೇತುವೆ ನಿರ್ಮಿಸಲಾಗಿದೆ. ಸೇತುವೆ ಹಾಗೂ ಸುರಂಗಗಳನ್ನು ಹೊರತುಪಡಿಸಿ 23.715 ಕಿ.ಮೀ ರೈಲ್ವೆ ಮಾರ್ಗ ಬಯಲಿನಲ್ಲಿದೆ.  ಕೆಲವೆಡೆ ಮಳೆಯಿಂದಾಗಿ ಭೂಕುಸಿತ ತಡೆಯಲು ಗುಡ್ಡಗಳನ್ನು ಸೂಕ್ತ ರಕ್ಷಣಾ ಯೋಜನೆಗಳೊಂದಿಗೆ ಬಲಪಡಿಸಲಾಗಿದೆ. ಸದ್ಯಕ್ಕೆ ಈ ಮಾರ್ಗದಲ್ಲಿ 3 ರೈಲು ಸಂಚಾರ ಆರಂಭಿಸಲಾಗಿದೆ. ಐಜ್ವಾಲ್‌- ದಿಲ್ಲಿ ರಾಜಧಾನಿ ಎಕ್ಸ್‌ಪ್ರೆಸ್‌, ಐಜ್ವಾಲ್‌- ಕೋಲ್ಕತ್ತಾ ಎಕ್ಸ್‌ಪ್ರೆಸ್‌ ಮತ್ತು ಐಜ್ವಾಲ್‌- ಗುವಾಹಟಿ ಎಕ್ಸ್‌ಪ್ರೆಸ್‌ ರೈಲಿನ ಸಂಚಾರ ಆರಂಭಗೊಂಡಿದೆ.

Bairabi–Sairang Train Mizoram 2

ಸುರಂಗಗಳಲ್ಲಿ ಈಶಾನ್ಯ ಸಂಸ್ಕೃತಿ ಚಿತ್ರಣ:
ಸುರಂಗಗಳ ಮುಖಭಾಗಗಳಲ್ಲಿ ಮಿಜೋರಾಂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾತ್ಮಕ ಚಿತ್ರಗಳನ್ನು ಮೂಡಿಸಲಾಗಿದೆ.ಇವುಗಳಲ್ಲಿ ಮಿಜೋರಾಂ ಜನರ ಉಡುಪು, ಹಬ್ಬ, ಸಂಪ್ರದಾಯಗಳು, ಗ್ರಾಮೀಣ ಜೀವನಶೈಲಿ, ಹಾಗೆಯೇ ರಾಜ್ಯದ ಸಸ್ಯಜೀವಿ ಮತ್ತು ಪ್ರಾಣಿಜೀವಿಗಳ ಚಿತ್ರಣ ನೀಡಲಾಗಿದೆ. 

722 ಕಿ.ಮೀ. ಅಂತಾರಾಷ್ಟ್ರೀಯ ಗಡಿ:
ಮಿಜೋರಾಂ 21,087 ಚ.ಕಿ.ಮೀ ಗಳಷ್ಟು ವಿಸ್ತಾರವಾಗಿದ್ದು, ಪಶ್ಚಿಮಕ್ಕೆ ಬಾಂಗ್ಲಾದೇಶ ಮತ್ತು ಪೂರ್ವ ಮತ್ತು ದಕ್ಷಿಣಕ್ಕೆ ಮ್ಯಾನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಇದು 722 ಕಿ.ಮೀ. ಗಳ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿದೆ. ಮಿಜೋರಾಂನ ರಾಜಧಾನಿ ಐಜ್ವಾಲ್‌. ಇದು ತನ್ನ ಅಪೂರ್ವ ಪ್ರಕೃತಿ ಸೌಂದರ್ಯದಿಂದ ಮೈದುಂಬಿಕೊಂಡಿದೆ. ಐಜ್ವಾಲ್ ಸಮುದ್ರಮಟ್ಟದಿಂದ ಸುಮಾರು 1,131 ಮೀಟರ್‌ ಎತ್ತರದಲ್ಲಿದ್ದು, ಮುಗಿಲೆತ್ತರದ ಬೆಟ್ಟಗಳಿಂದ ರಮಣೀಯವಾಗಿ ಕಂಗೊಳಿಸುತ್ತಿದೆ.

ಪ್ರವಾಸೋದ್ಯಮಕ್ಕೆ ಲಾಭ:
ಮಿಜೋರಾಂನಲ್ಲಿ ಸದ್ಯಕ್ಕೆ ಪ್ರವಾಸೋದ್ಯಮ, ಬಿದಿರಿನ ಕರಕುಶಲ ವಸ್ತುಗಳು, ಶುಂಠಿ, ಅಡಿಕೆ, ಅರಣ್ಯಜನ್ಯ ಉತ್ಪನ್ನಗಳನ್ನೇ ಅವಲಂಬಿಸಿದೆ. ದೊಡ್ಡ ಶಿಕ್ಷಣ ಸಂಸ್ಥೆಗಳಾಗಲಿ, ವೈದ್ಯಕೀಯ ಕ್ಷೇತ್ರದಲ್ಲಾಗಲಿ ಮುಂಚೂಣಿಯಲ್ಲಿಲ್ಲ. ಆದರೆ, ಸಂಪೂರ್ಣ ಸಾಕ್ಷರತೆಯನ್ನು ಘೋಷಿಸಿಕೊಂಡಿರುವುದು ಹೆಮ್ಮೆಯ ವಿಷಯವೇ ಸರಿ. ರೈಲ್ವೆ ಸಂಪರ್ಕದಿಂದ ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗುವುದರ ಜೊತೆಗೆ, ಉನ್ನತ ಶಿಕ್ಷಣ, ವ್ಯಾಪಾರ, ವೈದ್ಯಕೀಯ ಕ್ಷೇತ್ರದಲ್ಲಿ ಜನರು ಬೇರೆ ರಾಜ್ಯದೊಂದಿಗೆ ಸುಲಭ ಸಂಪರ್ಕಕ್ಕೆ ಸಹಕಾರಿಯಾಗಿದೆ. 2025ರ ಆಗಸ್ಟ್‌ನಲ್ಲಿ ಐಆರ್‌ಸಿಟಿಸಿ ಮಿಜೋರಾಂ ಸರ್ಕಾರದೊಂದಿಗೆ 2 ವರ್ಷಗಳ ಅವಧಿಗೆ ಪ್ರವಾಸೋದ್ಯಮ ಪ್ರೋತ್ಸಾಹಕ್ಕಾಗಿ ಒಪ್ಪಂದ ಮಾಡಿಕೊಂಡಿದೆ.

Bairabi–Sairang Train Mizoram 1

ಅಂದಾಜು 15 ಲಕ್ಷ ಜನಸಂಖ್ಯೆವುಳ್ಳ ಮಿಜೋರಾಂ ರಾಜ್ಯದ ಸಾಮಾಜಿಕ, ಆರ್ಥಿಕ ಪ್ರಗತಿಗೆ ಬೈರಾಬಿ ಸೈರಾಂಗ್ ರೈಲು ಮಾರ್ಗವು ವಿಶೇಷ ಕೊಡುಗೆ ನೀಡಲಿದೆ. ಬಹುತೇಕ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಮಿಜೋ ಭಾಷಿಗರ ಜನರ ಜೀವನ ಮಟ್ಟ ಸುಧಾರಿಸುವುದರ ಜೊತೆಗೆ ವ್ಯಾಪಾರ ವಹಿವಾಟಿಗೆ ಈ ಮಾರ್ಗವು ಪೂರಕವಾಗಿ ಕಾರ್ಯನಿರ್ವಹಿಸಲಿದೆ. ಅಸ್ಸಾಂನ ಗುವಾಹಟಿ, ಸಿಲ್ವಾರ್, ದಿಲ್ಲಿಗೆ ನೇರ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಇದಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳಿಗೆ ಉತ್ತಮ ಪ್ರವೇಶ ಸಿಕ್ಕಂತಾಗಿದೆ. ನೂತನ ಮಾರ್ಗದಿಂದ ಐಜ್ವಾಲ್ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಇಳಿಕೆಯಾಗಲಿದ್ದು, ಸ್ಥಳೀಯ ಅರಣ್ಯ ಉತ್ಪನ್ನಗಳು, ಕುಶಲಕಲೆಗಳು, ತೋಟಗಾರಿಕೆ ಉತ್ಪನ್ನಗಳ ಸಾಗಾಟ ಸುಲಭವಾಗಲಿದೆ.

ಮ್ಯಾನ್ಮಾರ್‌ವರೆಗೆ ವಿಸ್ತರಣೆ ಗುರಿ:
ಐಜ್ವಾಲ್ ಹೊರಭಾಗದಲ್ಲಿರುವ ಸೈರಾಂಗ್‌ನಿಂದ ಮ್ಯಾನ್ಮಾರ್ ಗಡಿಯಲ್ಲಿರುವ ಝರಿನ್ನುಯಿವರೆಗೆ ರೈಲು ಮಾರ್ಗವನ್ನು ವಿಸ್ತರಿಸುವ ಪ್ರಾಥಮಿಕ ಸಮೀಕ್ಷೆ ಪೂರ್ಣಗೊಂಡಿದೆ. ಬಂಗಾಲ ಕೊಲ್ಲಿಯ ಮೂಲಕ 539 ಕಿ.ಮೀ. ಸಮುದ್ರ ಮಾರ್ಗದಲ್ಲಿ ಕೋಲ್ಕತಾ ಬಂದರಿನ ಮೂಲಕ ಮಿಜೋರಾಂಗೆ ಸಂಪರ್ಕಿಸುವ ಗುರಿ ಇದೆ. ಈ ಮಾರ್ಗ ನಿರ್ಮಾಣವಾದರೆ ಆಗ್ನೆಯ ಏಷ್ಯಾದೊಂದಿಗೆ ವ್ಯಾಪಾರ, ಸಂಪರ್ಕ ಇನ್ನಷ್ಟು ಸುಲಭವಾಗಲಿದೆ.

ಈ ರೈಲ್ವೆ ಯೋಜನೆ ಮಿಜೋರಾಂ ಸಾರ್ವಜನಿಕ ಸಾರಿಗೆಯಲ್ಲಿ ಹೊಸ ಮನ್ವಂತರ ಸೃಷ್ಟಿಸಲಿದೆ. ದೇಶದ ಬೇರೆಬೇರೆ ರಾಜ್ಯಗಳೊಂದಿಗೆ ಸಂಪರ್ಕಕ್ಕೆ ಅನುಕೂಲವಾಗಲಿದ್ದು. ರಾಜ್ಯದ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಮತ್ತು ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ. 

TAGGED:AizawlBairabi-Sairang Trainmizoramnarendra modiNortheast Frontier Railway
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
40 minutes ago
BY Vijayendra 1
Bengaluru City

ಫೆ.19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ – ಚುನಾವಣಾ ತಯಾರಿ, ಸರ್ಕಾರದ ವಿರುದ್ಧ ಹೋರಾಟದ ಬಗ್ಗೆ ಚರ್ಚೆ: ಬಿವೈವಿ

Public TV
By Public TV
58 minutes ago
Foreign Student Admissions india
Latest

ಕಡ್ಡಾಯವಾಗಿ 24 ಗಂಟೆಯ ಒಳಗಡೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶದ ವಿವರ ನೀಡಿ – ಶಾಲೆ, ಕಾಲೇಜುಗಳಿಗೆ ಕೇಂದ್ರ ಸೂಚನೆ

Public TV
By Public TV
58 minutes ago
Kaduru Officer 2
Chikkamagaluru

ಶಾಸಕರ ಪಿಎ ಕಿರುಕುಳ ಆರೋಪ – ಡೆತ್‍ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಸರ್ಕಾರಿ ನೌಕರ ಡಿಸಿ ಮುಂದೆ ಹಾಜರ್

Public TV
By Public TV
2 hours ago
DK Shivakumar Rahul Gandhi Sonia Gandhi
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Train
Bengaluru City

ಮಹಾಶಿವರಾತ್ರಿ: ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?