Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್

Cinema

ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್

Public TV
Last updated: September 20, 2025 7:16 pm
Public TV
Share
2 Min Read
Vijay
SHARE

– ಈಳಂ ತಮಿಳಿಗರ ಪರ ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಕರೆ

ಚೆನ್ನೈ: ಶ್ರೀಲಂಕಾದ ತಮಿಳರ ಸಮಸ್ಯೆ ಬಗ್ಗೆ ಮಾತನಾಡುವ ವೇಳೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ವಿಜಯ್‌ ವಿವಾದಿತ ಹೇಳಿಕೆಯೊಂದನ್ನ ನೀಡಿದ್ದಾರೆ. ಮಾತನಾಡುವ ವೇಳೆ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ (Rajiv Gandhi) ಹತ್ಯೆಯ ಹಿಂದಿನ ಸೂತ್ರಧಾರಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ವೇಲುಪಿಳ್ಳೈ ಪ್ರಭಾಕರನ್‌ನನ್ನು (Velupillai Prabhakaran) ಹೊಗಳಿದ್ದಾರೆ.

2026ರ ವಿಧಾನಸಭಾ ಚುನಾವಣೆಗಾಗಿ ವಿಜಯ್‌ (Thalapathy Vijay) ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಇದರ ಭಾಗವಾಗಿ ತಮಿಳುನಾಡಿನ ನಾಗಪಟ್ಟಣಂನಲ್ಲಿ ನಡೆದ ಸಮಾವೇಶದಲ್ಲಿ ಶ್ರೀಲಂಕಾದ ತಮಿಳರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ವೇಲುಪಿಳ್ಳೈ ಪ್ರಭಾಕರನ್‌ ʻಈಳಂʼ ತಮಿಳರ ಸಮುದಾಯಕ್ಕೆ ತಾಯಿಯಂತೆ. ಹಾಗಾಗಿ ಲಂಕಾ ತಮಿಳರ ಸಮಸ್ಯೆ ತಮಿಳುನಾಡಿನಲ್ಲಿ ಅದ್ರಲ್ಲೂ ನಾಗಪಟ್ಟಣಂನಂತಹ ಪ್ರದೇಶಗಳ ಮೀನುಗಾರರಲ್ಲಿ ಭಾವನಾತ್ಮಕವಾಗಿದೆ ಎಂದಿದ್ದಾರೆ. ʻಈಳಂʼ ಎನ್ನುವುದು ಶ್ರೀಲಂಕಾದ ಆ ಪ್ರದೇಶವನ್ನು ಸೂಚಿಸುವ ಹೆಸರು.

Velupillai Prabhakaran

ಅಲ್ಲದೇ, ಶ್ರೀಲಂಕಾ ಹಾಗೂ ವಿಶ್ವದ ವಿವಿಧೆಡೆ ಇರುವ ನಮ್ಮ ಈಳಂ ತಮಿಳರು ಇಂದು ಮಾತೃ ವಾತ್ಸಲ್ಯ ತೋರಿಸಿದ ನಾಯಕನನ್ನ ಕಳೆದುಕೊಂಡು ಬಳಲುತ್ತಿದ್ದಾರೆ. ಅವರಿಗಾಗಿ ನಾವಿಂದು ಧ್ವನಿ ಎತ್ತುವುದು ನಮ್ಮ ಕರ್ತವ್ಯ ಎಂದು ಕರೆ ನೀಡಿದ್ದಾರೆ.

1990ರ ದಶಕದಿಂದ ಭಾರತದಲ್ಲಿ ನಿಷೇಧಿಸಲ್ಪಟ್ಟ ಎಲ್‌ಟಿಟಿಇ ಶ್ರೀಲಂಕಾದ ಉತ್ತರ ಮತ್ತು ಪೂರ್ವ ಪ್ರಾಂತ್ಯಗಳಲ್ಲಿ ಆಳ್ವಿಕೆ ನಡೆಸುತ್ತಿದ್ದ ಸಶಸ್ತ್ರ ಪಡೆಯಾಗಿತ್ತು. ಆದ್ರೆ 2009ರಲ್ಲಿ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸುವವರೆಗೂ ಅದು ದಶಕಗಳ ಕಾಲ ಸ್ವತಂತ್ರ ತಮಿಳು ರಾಜ್ಯ ಸ್ಥಾಪಿಸಲು ಹೋರಾಡಿತ್ತು. ಅದೇ ವರ್ಷ ವೇಲುಪಿಳ್ಳೈ ಪ್ರಭಾಕರನ್‌ ರನ್ನ ಶ್ರೀಲಂಕಾ ಸೇನೆ ಕೊಂದಿತು.

ರಾಜೀವ್‌ ಗಾಂಧಿ ಹತ್ಯೆ ಹಿಂದಿನ ಮಾಸ್ಟರ್‌?
1991 ರಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯ ಹಿಂದೆ ಎಲ್‌ಟಿಟಿಇ ಇದೆ ಎಂದು ಆರೋಪಿಸಲಾಗಿದೆ. 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಆಯೋಜಿಸಿದ್ದ ಬಹಿರಂಗ ಸಮಾವೇಶದಲ್ಲಿ ಎಲ್‌ಟಿಟಿಇ ಮಹಿಳಾ ಆತ್ಮಾಹುತಿ ಬಾಂಬರ್ ರಾಜೀವ್ ಗಾಂಧಿಯನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರಭಾಕರನ್‌ ಆದೇಶಿಸಿದ್ದಾರೆ ಎಂದು ಹೇಳಲಾಗಿತ್ತು. ಇನ್ನು, 2011ರ ಸಂದರ್ಶನವೊಂದರಲ್ಲಿ, ಎಲ್‌ಟಿಟಿಇಯ ಖಜಾಂಚಿ ಮತ್ತು ಅದರ ಮುಖ್ಯ ಶಸ್ತ್ರಾಸ್ತ್ರ ಸಂಪಾದನೆದಾರರಾಗಿದ್ದ ಕುಮಾರನ್ ಪತ್ಮನಾಥನ್ ಅವರು ರಾಜೀವ್ ಗಾಂಧಿಯನ್ನು ಹತ್ಯೆಗೈದ ವೇಲುಪಿಳ್ಳೈ ಪ್ರಭಾಕರನ್ ಅವರ ತಪ್ಪಿಗೆ ಭಾರತದ ಕ್ಷಮೆಯಾಚಿಸಿದ್ದರು.

Rajiv Gandhi

2009ರಲ್ಲಿಯೇ ಪ್ರಭಾಕರನ್‌ ಹತ್ಯೆ; ಶ್ರೀಲಂಕಾ
ಶ್ರೀಲಂಕಾ ಸರ್ಕಾರ ಮೇ 2009ರಲ್ಲಿಯೇ ಪ್ರಭಾಕರನ್ ಅವರನ್ನು ಹತ್ಯೆ ಮಾಡಿದ್ದೇವೆ ಎಂದು ಹೇಳಿಕೊಂಡಿತ್ತು. ಅದಲ್ಲದೇ ಪ್ರಭಾಕರನ್‌ ಹಾಗೂ ಅವರ ಮಗನ ಡಿಎನ್‌ಎ ಹೊಂದಾಣಿಕೆಯಾಗಿತ್ತು ಎಂದು ಶ್ರೀಲಂಕಾ ಸೇನೆ ಹೇಳಿಕೆ ನೀಡಿತ್ತು. ಮುಲ್ಲೈತೀವು ಪ್ರದೇಶದ ನಾಂತಿಕಡಲ್ ತೀರದಲ್ಲಿ ಎಲ್‌ಟಿಟಿಇ ಮುಖ್ಯಸ್ಥನ ಶವ ಪತ್ತೆಯಾಗಿತ್ತು ಎಂದು ವರದಿಗಳು ಹೇಳಿದ್ದವು. ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್‌ ದೇಹವನ್ನು ಆತನ ಇಬ್ಬರು ಮಾಜಿ ಸಹಚರರು ಗುರುತಿಸಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.

ಆದ್ರೆ ಎಲ್‌ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್‌ ಇನ್ನೂ 2023ರಲ್ಲಿ ಆತ ಜೀವಂತವಾಗಿದ್ದು, ಅವರ ಕುಟುಂಬದ ಜೊತೆ ಜೀವಿಸುತ್ತಿದ್ದಾನೆ ಎಂದು ಕಾಂಗ್ರೆಸ್‌ನ ಮಾಜಿ ನಾಯಕ ಪಜಾ ನೆಡುಮಾರನ್‌ ಹೇಳಿದ್ದರು. ಆದ್ರೆ ಆತ ಜೀವಂತವಾಗಿರುವ ಸುಳಿವು ಎಲ್ಲಿಯೂ ಸಿಕ್ಕಿರಲಿಲ್ಲ.

ಇನ್ನೂ ವಿಜಯ್‌ ಲಂಕಾದ ತಮಿಳರಿಗೆ ಬೆಂಬಲ ನೀಡುತ್ತಿರುವುದು ಇದೇ ಮೊದಲೇನಲ್ಲ. 2008ರಲ್ಲೂ ಸಮುದಾಯದ ಸದಸ್ಯರನ್ನ ಹತ್ಯೆ ಖಂಡಿಸಿ ಚೆನ್ನೈನಲ್ಲಿ ನಡೆದ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

TAGGED:Eelam TamilsRajiv Gandhitamil naduThalapathy Vijaytvkಎಲ್‍ಟಿಟಿಇಟಿವಿಕೆತಮಿಳುನಾಡುದಳಪತಿ ವಿಜಯ್
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 04-03-2026

Public TV
By Public TV
29 minutes ago
abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
6 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
7 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
8 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
8 hours ago
KN Rajanna
Districts

ಅಟ್ರಾಸಿಟಿ ಕಾನೂನಿನ ದುರುಪಯೋಗ ಬೇಡ, ತೊಂದರೆ ಕೊಡಲು ಬಳಸಬೇಡಿ : ಕೆಎನ್‌ ರಾಜಣ್ಣ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?