ಚಿಕ್ಕಮಗಳೂರು: ಹಾಸನ (Hassan) ಜಿಲ್ಲೆಯ ಬೇಲೂರಲ್ಲಿ (Beluru) ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಕಿಡಿಗೇಡಿ ಮಹಿಳೆಗಾಗಿ ಪೊಲೀಸರು ಚಿಕ್ಕಮಗಳೂರಿನಲ್ಲಿ ಹುಡುಕಾಟ ನಡೆಸಿದ್ದಾರೆ.
ಚಿಕ್ಕಮಗಳೂರು (Chikkamagaluru) ಬಸ್ ನಿಲ್ದಾಣದಲ್ಲಿ ಮಹಿಳೆ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಬೇಲೂರು ಪೊಲೀಸರು ಚಿಕ್ಕಮಗಳೂರಿಗೆ ಬಸ್ ನಿಲ್ದಾಣದಲ್ಲಿ ಹುಡುಕಾಟ ನಡೆಸಿದ್ದಾರೆ. ಚಿಕ್ಕಮಗಳೂರು ಡಿವೈಎಸ್ಪಿ ಶೈಲೇಂದ್ರ ನೇತೃತ್ವದಲ್ಲಿ ಚಿಕ್ಕಮಗಳೂರು ಪೊಲೀಸರು ಸಹ ಕಿಡಿಗೇಡಿ ಮಹಿಳೆಯ ಹುಡುಕಾಟದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: Hassan | ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು
ಏನಿದು ಪ್ರಕರಣ?
ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣ ಮುಂಭಾಗದ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ (Ganesha Idol) ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದರು. ಇಂದು (ಸೆ.21) ಬೆಳಿಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವುದು ಬೆಳಕಿಗೆ ಬಂದಿತ್ತು. ಸಿಸಿಟಿವಿ ಪರಿಶೀಲನೆ ನಡೆಸಿದಾಗ ಮಹಿಳೆಯೊಬ್ಬಳು ರಾತ್ರಿ ವೇಳೆ ಈ ದುಷ್ಕೃತ್ಯ ಎಸಗಿರುವುದು ಗೊತ್ತಾಗಿದೆ.
ಗೇಟ್ ತೆಗೆದು ದೇವರಿಗೆ ಚಪ್ಪಲಿ ಹಾರ ಹಾಕಿರುವ ದುರುಳರ ಕೃತ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದನ್ನೂ ಓದಿ: ಪಿತೃಪಕ್ಷ ಹಬ್ಬದ ಬ್ಯುಸಿಯಲ್ಲಿದ್ದ ಅಕ್ಕನ ಚಿನ್ನದ ಸರವನ್ನೇ ಎಗರಿಸಿದ ತಮ್ಮ