Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ

Bengaluru City

ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ

Public TV
Last updated: September 22, 2025 3:36 pm
Public TV
Share
4 Min Read
Dhruva Sarja
SHARE

ಉದಯ ಟಿವಿಯಲ್ಲಿ ದಸರಾ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 27 ಶನಿವಾರ ಸಂಜೆ 6 ಗಂಟೆಗೆ ಧ್ರುವ ಸರ್ಜಾ (Dhruva Sarja) ಜೊತೆ ವಿಶೇಷ ಕಾರ್ಯಕ್ರಮ ʻಧ್ರುವ ದಸರಾʼ (Dhruva Dasara) ಪ್ರಸಾರವಾಗಲಿದೆ. ಭರ್ಜರಿ ಸೆಟ್‌ನಲ್ಲಿ ಚಿತ್ರರಂಗದ ಪ್ರಮುಖ ತಾರೆಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಚಿತ್ರೀಕರಣಗೊಂಡಿರುವ ʻಧ್ರುವ ದಸರಾʼ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಿನಿಮಾ ಪಯಣ ಮತ್ತು ಬಾಲ್ಯದಿಂದ ಇಲ್ಲಿಯವರೆಗಿನ ಜೀವನದ ಝಲಕ್ ಕೂಡ ಹೌದು.

ಧ್ರುವ ದಸಾರದ ಒಂದು ವಿಶೇಷ ಅಂದ್ರೆ, ಧ್ರುವ ಅವರಿಗೆ ಗೊತ್ತಿರದೇ ಹಲವು ವಿಶೇಷ ವ್ಯಕ್ತಿಗಳು ಆಗಮಿಸಿ ಅವರಿಗೆ ಅಚ್ಚರಿ ಮೂಡಿಸಿದರು. ಆಗ ಧ್ರುವ ಸರ್ಜಾ ಇವರ ಜೊತೆ ಕಳೆದ ಬಹಳ ಅಪರೂಪದ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಬಹಳಷ್ಟು ಕುತೂಹಲಕರ ಘಟನೆಗಳು, ಭಾವನಾತ್ಮಕ ವಿಷಯಗಳು ಇಲ್ಲಿವೆ. ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳ ಜೈಕಾರದ ನಡುವೆ ತಮ್ಮ ʻಕೆಡಿʼ ಚಿತ್ರದ (KD Film) ಹಾಡಿನೊಂದಿಗೆ ಧ್ರುವ ಎಂಟ್ರಿ ಕೊಟ್ಟಿದ್ದು ವಿಶೇಷ. ತಾನು ಸುಪರ್ ಸ್ಟಾರ್ ಎನ್ನಿಸಿಕೊಳ್ಳಲು ಇಷ್ಟಪಡುವುದಿಲ್ಲ. ತಾನೊಬ್ಬ ನಟ ಮಾತ್ರ ಎಂದು ವಿನಯದಿಂದ ಹೇಳಿದ ಧ್ರುವ ಸರ್ಜಾ ಅಭಿಮಾನಿಗಳಿಗಾಗಿ ಇನ್ನು ಮುಂದೆ ಪ್ರತಿವರ್ಷ ಕನಿಷ್ಟ ಎರಡು ಚಿತ್ರಗಳಲ್ಲಿ ನಟಿಸುವುದಾಗಿ ಘೋಷಿಸಿದರು. ಇದನ್ನೂ ಓದಿ: ರಾಮಾಯಣ ಆಧರಿತ ʻರಾಮಲೀಲಾʼದಲ್ಲಿ ಮಂಡೋದರಿ ಪಾತ್ರಕ್ಕೆ ಪೂನಂ ಪಾಂಡೆ ಆಯ್ಕೆ

Dhruva Sarja 4

ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ (Meghana Raj) ಆಕಸ್ಮಿಕವಾಗಿ ವೇದಿಕೆಗೆ ಆಗಮಿಸಿ ಧ್ರುವ ಅವರಿಗೆ ಅಚ್ಚರಿ ಮೂಡಿಸಿದರು. ಅತ್ತಿಗೆಯನ್ನು ತಾಯಿಯಂತೆ ಕಾಣುವ ಧ್ರುವ ಅಣ್ಣನನ್ನು ನೆನೆದು ಭಾವುಕರಾದರು. ಮನೆಗೆ ಬಂದಾಗ ತಮ್ಮ ಮಗ ರಾಯನ್ ಜೊತೆ ಧ್ರುವ ಮಗುವಾಗಿ ಇರುವ ರೀತಿಯನ್ನು ಕಣ್ಣಿಗೆ ಕಟ್ಟುವಂತೆ ವಿವರಿಸಿದರು ಮೇಘನಾ ರಾಜ್. ಧ್ರುವ ಸರ್ಜಾ ತಮ್ಮ ಪತ್ನಿ ಪ್ರೇರಣಾ ಬಗೆಗೆ ಹೇಳಬೇಕಾದ್ರೆ ಹಿಂದಿನಿಂದ ವೇದಿಕೆಗೆ ಅವರೇ ಸ್ವತಃ ಬಂದಿದ್ದು ಇವರಿಗೆ ಆಶ್ಚರ್ಯ ಉಂಟುಮಾಡಿತು. ಪ್ರೇರಣಾ, ಟಿವಿ ಕಾರ್ಯಕ್ರಮವೊಂದರಲ್ಲಿ ಮೊಟ್ಟಮೊದಲ ಬಾರಿ ಕಾಣಿಸಿಕೊಂಡಿದ್ದು ʻಧ್ರುವ ದಸರಾʼ ವಿಶೇಷಗಳಲ್ಲೊಂದು. ಇದೇ ಸಂದರ್ಭದಲ್ಲಿ ತಮ್ಮ ಹಾಗೂ ಧ್ರುವ ನಡುವಿನ ಪ್ರೇಮಲೋಕದ ದಿನಗಳನ್ನು ಮೆಲುಕು ಹಾಕಿದರು. ಅವರು ಧ್ರುವರಿಗೆ ಪ್ರೇಮ ಪ್ರಸ್ತಾಪ ಮಾಡಿದ್ದನ್ನು ಮರುಸೃಷ್ಟಿಸಲಾಯಿತು. ಕೇಕ್ ಕತ್ತರಿಸುವ ಮೂಲಕ ಮುಂಗಡವಾಗಿ ಧ್ರುವ ಸರ್ಜಾ ಹುಟ್ಟುಹಬ್ಬ ಆಚರಿಸಲಾಯಿತು. ಮಕ್ಕಳಾದ ರುದ್ರಾಕ್ಷಿ ಹಾಗೂ ಹಯವದನ ಕೂಡ ಉಪಸ್ಥಿತರಿದ್ದುದು ವಿಶೇಷವಾಗಿತ್ತು.

Dhruva Sarja 3

ಕಲಾವಿದ, ಚಿಕ್ಕಪ್ಪ ಅರ್ಜುನ್ ಸರ್ಜಾ ಅವರು ವಿಡಿಯೋ ಮುಖಾಂತರ ಶುಭ ಕೋರಿದರು. ಧ್ರುವ ಅವರ ನಿಷ್ಠೆ, ಕಠಿಣ ಪರಿಶ್ರಮ, ನಟನಾ ಚಾತುರ್ಯದ ಬಗ್ಗೆ ವಿವರಿಸಿದರು. ಧ್ರುವ ಸರ್ಜಾ ಅವರಿಗೆ ನಟನೆ ಕಲಿಸಿದ ಗೌರಿ ದತ್ತು ಹಾಗೂ ಮಹಾಂತೇಶ್, ನಟನೆಯಲ್ಲಿ ಅವರಿಗಿರುವ ಶ್ರದ್ಧೆ ವಿವರಿಸಿ ನಾಟಕ ಶಾಲೆಗೆ ದೊಡ್ಡ ಪ್ರಮಾಣದ ದೇಣಿಗೆ ನೀಡಿದ್ದನ್ನು ಸ್ಮರಿಸಿದರು. ಎಂದೋ ನಟಿಸಿದ ನಾಟಕದ ಸಂಭಾಷಣೆ ಯಥಾವತ್ ಒಪ್ಪಿಸಿ ಚಪ್ಪಾಳೆ ಗಿಟ್ಟಿಸಿದರು ಧ್ರುವ. ಇದನ್ನೂ ಓದಿ: ಕಾಂತಾರ ಚಾಪ್ಟರ್‌-1 ಟ್ರೈಲರ್ ರಿಲೀಸ್ – ದೃಶ್ಯ ವೈಭವಕ್ಕೆ ಮನಸೋತ ಫ್ಯಾನ್ಸ್

Dhruva Sarja 2

ಗಾಯಕ, ನಟ ಚಂದನ್ ಶೆಟ್ಟಿ ಕಷ್ಟದ ಸಮಯದಲ್ಲಿ ಧ್ರುವ ಸಹಾಯ ಮಾಡಿದ್ದನ್ನು ನೆನೆದರು. ತಾನು ಬರೆದ ಒಂದು ಹಾಡನ್ನು 8 ವರ್ಷ ಕಾಪಾಡಿಕೊಂಡು ʻಪೊಗರುʼ ಚಿತ್ರದಲ್ಲಿ ಬಳಸಿಕೊಂಡಿದ್ದನ್ನು ಸ್ಮರಿಸಿದರು. ಚಂದನ್ ಶೆಟ್ಟಿ ಜೊತೆ ನಟಿಸಿದ ಆಲ್ಬಂ ಹಾಡೊಂದಕ್ಕೆ ಸಿಕ್ಕ 501 ರುಪಾಯಿ ಮೊದಲ ಸಂಭಾವನೆ ಎಂದು ಅಚ್ಚರಿಸಿಪಡಿಸಿದರು ಧ್ರುವ ಸರ್ಜಾ. ಗೆಳೆಯ, ನಟ ರಾಕೇಶ್ ಅಡಿಗ ಮಾತನಾಡುತ್ತಾ ಧ್ರುವ ಸರ್ಜಾರ ಬಾಲ್ಯದ ತುಂಟಾಟದ ಘಟನೆಗಳನ್ನು ಹಂಚಿಕೊಂಡರು. ಧ್ರುವ ದೈವಭಕ್ತರೂ ಆಗಿದ್ದು ಆಧ್ಯಾತ್ಮ ಆಸಕ್ತರೂ ಹೌದು ಎಂಬ ವಿಷಯ ಬಹಿರಂಗಪಡಿಸಿದರು. ಇದಕ್ಕೆ ತಕ್ಕಂತೆ, ಗರುಡ ಪುರಾಣದ ಕೆಲವು ವಿಷಯಗಳ ಬಗ್ಗೆ ಧ್ರುವ ಸರ್ಜಾ ನಿರರ್ಗಳವಾಗಿ ಮಾತನಾಡಿ ಅಚ್ಚರಿ ಮೂಡಿಸಿದರು. ಇದನ್ನೂ ಓದಿ: ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು

ಧ್ರುವ ಒಬ್ಬ ʻಮೌನದಾನಿʼ ಎಂಬುದನ್ನು ಅವರಿಂದ ಉಪಕೃತರಾದ ಹಲವರು ಬಹಿರಂಗ ಪಡಿಸಿದರು. ಆಟೋ ಖರೀದಿಗೆ, ಆಪರೇಷನ್‌ಗೆ, ಕಾಲೇಜು ಅಡ್ಮಿಷನ್ಗೆ ಹೀಗೆ ಅನೇಕ ಸಂದರ್ಭಗಳಲ್ಲಿ ಧ್ರುವ ಸಹಾಯ ಮಾಡಿದ್ದನ್ನು ಸ್ಮರಿಸಿದರು. ಮೂರು ವರ್ಷದ ದೃಷ್ಟಿಹೀನ ಬಾಲಕನಿಗೆ ಚಿಕಿತ್ಸೆಗೆ ನೆರವಾಗಿ ದೃಷ್ಟಿ ಮರಳಿದ್ದು ಗಮನ ಸೆಳೆಯಿತು. ತಾವು ಯಾವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವರೋ ಅಂಥ ಗುಣಮಟ್ಟದ ಆಸ್ಪತ್ರೆಗೇ ಸಹಾಯ ಕೇಳಿ ಬಂದವರನ್ನು ಕಳಿಸುವುದು ವಿಶೇಷ. ಕಲಾವಿದರಾದ ಬುಲೆಟ್ ರಕ್ಷಕ್, ಐಶ್ವರ್ಯ ಸಿಂಧೋಗಿ, ಯಶಸ್ವಿನಿ, ರಮೋಲಾ, ಆಸಿಯಾ ಬೇಗಂ, ಧನುಷ್ ನೃತ್ಯದ ಮೂಲಕ ಎಲ್ಲರ ಗಮನ ಸೆಳೆದರು. ಚಿಲ್ಲರ್ ಮಂಜು, ಮನೋಹರ್ ಕಾಮಿಡಿ ಎಲ್ಲರನ್ನು ನಗೆಗಡಲಿಗೆ ಕರೆದುಕೊಂಡು ಹೋಯಿತು. ನಿರ್ದೇಶಕ ಚೇತನ್ ಕುಮಾರ, ನೃತ್ಯ ಸಂಯೋಜಕ ಮುರಳಿ ಮಾಸ್ಟರ್, ಛಾಯಾಗ್ರಾಹಕ ಡೇವಿಡ್ ಮತ್ತಿತರರು ಧ್ರುವ ಜೊತೆ ತಮ್ಮ ಸಿನಿ ಪಯಣ ಅನುಭವ ಹಂಚಿಕೊಂಡರು.

Dhruva Sarja 5

ಉದಯ ಟಿವಿಯ ಸಿಂಧು ಭೈರವಿ, ಶಾಂತಿನಿವಾಸ, ಶೀಘ್ರದಲ್ಲಿ ಪ್ರಸಾರವಾಗಲಿರುವ ರಥಸಪ್ತಮಿ ಧಾರಾವಾಹಿ ಕಲಾವಿದರ ನೃತ್ಯ ವರ್ಣರಂಜಿತವಾಗಿತ್ತು. ಉದಯ ಟಿವಿಯ ಕಾದಂಬರಿ ಎಂಬ ಧಾರಾವಾಹಿಯ ಮೂಲಕ ಕಿರುತೆರೆಗೆ ಪಾದಾರ್ಪಣ ಮಾಡಿದ ಶ್ವೇತಾ ಚಂಗಪ್ಪ ಮತ್ತೆ ಹಲವು ವರ್ಷಗಳ ನಂತರ ಉದಯ ಟಿವಿಯ “ಧ್ರುವ ದಸರಾ” ಕಾರ್ಯಕ್ರಮ ನಿರೂಪಕರಾಗಿ ಬಂದ್ದದ್ದು ವಿಶೇಷ. ʻಧ್ರುವ ದಸರಾʼ ಇದೇ ಸೆಪ್ಟೆಂಬರ್ 27, ಶನಿವಾರ ಸಂಜೆ 6 ಗಂಟೆಗೆ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. ಇದನ್ನೂ ಓದಿ: ನಿತಿನ್ ಶಿವಾಂಶ್ ಜೊತೆ ಪ್ರೀತಿ ಗುಟ್ಟು ರಟ್ಟು ಮಾಡಿದ ಖ್ಯಾತ ಗಾಯಕಿ ಸುಹಾನಾ ಸಯ್ಯದ್

TAGGED:Action PrinceDhruva Dasaradhruva sarjakannada actorMeghana RajUdaya TVಕನ್ನಡ ಸಿನಿಮಾಧ್ರುವ ಸರ್ಜಾಮೇಘನಾ ರಾಜ್
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

Captain Sumit Kapoor
Latest

ಅಜಿತ್‌ ಪವಾರ್‌ ವಿಮಾನ ಪತನ ಕೇಸ್‌ನಲ್ಲಿ ಸ್ಫೋಟಕ ಟ್ವಿಸ್ಟ್‌ – ಕೊನೇ ಕ್ಷಣದಲ್ಲಿ ಪೈಲಟ್‌ ಬದಲಾಗಿದ್ದೇಕೆ?

Public TV
By Public TV
26 minutes ago
veerendra puppy
Bengaluru City

ಅಕ್ರಮ ಆನ್‌ಲೈನ್ ಬೆಟ್ಟಿಂಗ್ | ವೀರೇಂದ್ರ ಪಪ್ಪಿಗೆ ಇಡಿ ಶಾಕ್ – 177.3 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Public TV
By Public TV
34 minutes ago
Janardhana Reddy
Bellary

ಬಳ್ಳಾರಿ ನಗರದ ಬೀದಿ ಬೀದಿಯಲ್ಲೂ ಯಂಗ್‌ಸ್ಟರ್ಸ್ ಗ್ಯಾಂಗ್‌ಸ್ಟರ್ಸ್ ಆಗಿದ್ದಾರೆ: ಜನಾರ್ದನ ರೆಡ್ಡಿ ಕಳವಳ

Public TV
By Public TV
1 hour ago
UGC Rules
Court

UGC ಹೊಸ ನೀತಿಗೆ ಸುಪ್ರೀಂ ತಡೆಯಾಜ್ಞೆ – ಹೊಸ ನಿಯಮಗಳು ಅಸ್ಪಷ್ಟವಾಗಿದೆ, ಸ್ಪಷ್ಟೀಕರಣದ ಅಗತ್ಯವಿದೆ ಎಂದ ಕೋರ್ಟ್

Public TV
By Public TV
2 hours ago
Annabhagya 1
Bengaluru City

ಗೃಹಲಕ್ಷ್ಮಿಯಂತೆ ಅನ್ನಭಾಗ್ಯ ಹಣವೂ ಬಾಕಿ ಆರೋಪ – ಒಂದೂವರೆ ಕೋಟಿ ಪಡಿತರದಾರರಿಗೆ ಜಮೆ ಆಗಿಲ್ವಾ 657 ಕೋಟಿ?

Public TV
By Public TV
2 hours ago
Byrathi Suresh
Bengaluru City

ಟೆಂಡರ್‌ಗೂ ಮಂತ್ರಿಗಳಿಗೂ ಏನ್‌ ಸಂಬಂಧ? – ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಬೈರತಿ ಸುರೇಶ್ ತಾಕೀತು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?