ಬೆಂಗಳೂರು: ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಹುಬ್ಬಳ್ಳಿ (Hubballi) ಮತ್ತು ಕೊಲ್ಲಂ (Kollam) ನಡುವೆ 14 ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚರಿಸಲಿದೆ.
ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್ಪ್ರೆಸ್ ರೈಲು ಇದೇ ಸೆ.28ರಿಂದ ಡಿ.28ರವರೆಗೆ ಪ್ರತಿ ಭಾನುವಾರ ಸಂಜೆ 3:15ಕ್ಕೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಮಧ್ಯಾಹ್ನ 12:55ಕ್ಕೆ ಕೊಲ್ಲಂ ತಲುಪಲಿದೆ. ಇನ್ನೂ ರೈಲು ಸಂಖ್ಯೆ 07314 ಕೊಲ್ಲಂ-ಎಸ್ಎಸ್ಎಸ್ ಹುಬ್ಬಳ್ಳಿಗೆ ವಿಶೇಷ ಎಕ್ಸ್ಪ್ರೆಸ್ ರೈಲು ಸೆ.29ರಿಂದ ಡಿ.29ರವರೆಗೆ ಪ್ರತಿ ಸೋಮವಾರ ಸಂಜೆ 5:00ಕ್ಕೆ ಕೊಲ್ಲಂನಿಂದ ಹೊರಟು ಮರುದಿನ ಸಂಜೆ 6:30ಕ್ಕೆ ಹುಬ್ಬಳ್ಳಿ ತಲುಪಲಿದೆ.ಇದನ್ನೂ ಓದಿ: ನಿವೃತ್ತ ಬ್ಯಾಂಕ್ ಅಧಿಕಾರಿಗೆ ಬರೋಬ್ಬರಿ 1 ತಿಂಗಳು ಡಿಜಿಟಲ್ ಅರೆಸ್ಟ್ – 23 ಕೋಟಿ ವಂಚನೆ
ಈ ವಿಶೇಷ ರೈಲು ಒಟ್ಟು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 01 ಎಸಿ 2-ಟೈರ್, 02 ಎಸಿ 3-ಟೈರ್, 12 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್ಗಳು ಇರಲಿವೆ. ಮಾರ್ಗಮಧ್ಯೆ ಈ ವಿಶೇಷ ರೈಲು, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೇರಿ, ತಿರುವಲ್ಲ, ಚೆಂಗನ್ನೂರು, ಮಾವೆಲಿಕರ, ಕಾಯಂಕುಲಂ, ಕರುನಾಗಪಳ್ಳಿ ಮತ್ತು ಸಂಸ್ಥಾನಕೋಟ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ.
ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರಾ ಅವಧಿಯಲ್ಲಿ ಪ್ರಯಾಣಿಕರಿಗೆ ಅನುಕೂಲಕರ ಪ್ರಯಾಣ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.ಇದನ್ನೂ ಓದಿ: ಗುಜರಾತ್ ಕಡಲ ತೀರದಲ್ಲಿ ಸೋಮಾಲಿಯಕ್ಕೆ ಹೊರಡಬೇಕಿದ್ದ ಹಡಗಿಗೆ ಬೆಂಕಿ – ಭಯಾನಕ ದೃಶ್ಯ ಕ್ಯಾಮೆರಾದಲ್ಲಿ ಸೆರೆ