Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್‌ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್‌ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

Latest

ಪಾಕ್‌ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

Public TV
Last updated: September 27, 2025 2:31 pm
Public TV
Share
2 Min Read
Petal Gahlot
SHARE

– ಪಾಕ್‌ ಪ್ರಧಾನಿಗೆ ಮತ್ತೆ ಮುಖಭಂಗ; ಟ್ರಂಪ್‌ಗೆ ಪರೋಕ್ಷ ತಿರುಗೇಟು

ಲಂಡನ್‌: ಪಾಕಿಸ್ತಾನ ಭಯೋತ್ಪಾದನೆಯನ್ನು (Terrorism) ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಹರಡುತ್ತಿದೆ ಎಂದು ಭಾರತದ ರಾಜತಾಂತ್ರಿಕ ಪೆಟಲ್ ಗೆಹ್ಲೋಟ್ (Petal Gahlot) ಪಾಕ್‌ ಪ್ರಧಾನಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ಗೆ (Shehbaz Sharif) ಭಾಷಣದ ನಂತರ ಪ್ರತ್ಯುತ್ತರ ನೀಡುವ ಹಕ್ಕು ಚಲಾಯಿಸುತ್ತಾ ಅವರು ಮಾತನಾಡಿದರು. ಪಾಕಿಸ್ತಾನ ಭಯೋತ್ಪಾದನೆಯನ್ನ ವೈಭವೀಕರಿಸುತ್ತಿದೆ. ವಿಶ್ವವೇದಿಕೆಯಲ್ಲಿ ಸುಳ್ಳುಗಳನ್ನೇ ಬಿತ್ತರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

operation sindoor indian army

ಭಯೋತ್ಪಾದನೆ ವೈಭವೀಕರಣ
ನಾನು ಪ್ರಧಾನಿ ಷರೀಫ್‌ ಅವರ ಭಾಷಣ ಕೇಳಿದೆ. ಅವರು ಮತ್ತೊಮ್ಮೆ ತಮ್ಮ ವಿದೇಶಾಂಗ ನೀತಿಯ ಭಾಗವಾದ ಭಯೋತ್ಪಾದನೆಯನ್ನು ವೈಭವೀಕರಿಸಿದರು. ಆದ್ರೆ ಯಾವುದೇ ಸುಳ್ಳು, ನಾಟಕಗಳು ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಕುಟುಕಿದರು. ಅಲ್ಲದೇ ಏಪ್ರಿಲ್‌ 22ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಹತ್ಯಾಕಾಂಡಕ್ಕೆ ಕಾರಣವಾದ ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದಕ ಸಂಘಟನೆ ರೆಸಿಸ್ಟೆನ್ಸ್‌ ಫ್ರಂಟ್‌ (TRF) ಅನ್ನು ಪಾಕಿಸ್ತಾನ ಸಮರ್ಥಿಸಿಕೊಂಡಿದೆ ಎಂಬುದನ್ನು ನೆನಪಿಸಿದ್ರು.

ಒಸಾಮಾ ಬಿಲ್‌ ಲಾಡೆನ್‌ಗೆ ವರ್ಷಗಳಿಂದ ಆಶ್ರಯ ನೀಡಿದ್ದ ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ನಟಿಸಿದ ಅದೇ ಪಾಕಿಸ್ತಾನ ಇದಾಗಿದೆ. ಏಕೆಂದ್ರೆ ದಶಕಗಳಿಂದ ಭಯೋತ್ಪಾದನಾ ಶಿಬಿರಗಳನ್ನ ನಡೆಸುತ್ತಿದೆ ಎಂಬುದನ್ನು ಖುದ್ದು ಅಲ್ಲಿನ ಸಚಿವರೇ ಒಪ್ಪಿಕೊಂಡಿದ್ದಾರೆ ಎಂದು ಜ್ಞಾಪಿಸುತ್ತಾ ಪಾಕ್‌ ಪ್ರಧಾನಿಗೆ ಮುಖಭಂಗ ಮಾಡಿದರು.

Operation Sindoor Indian Army shares proof target significance of precision strike on Pak terror

ಧ್ವಂಸವಾದ ವಾಯುನೆಲೆ ತೋರಿಸಿ ಗೆಲುವು ಅಂದ್ರು
ಇನ್ನೂ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಪರಾಕ್ರಮ ನೆನಪಿಸಿದ ಪೆಟಲ್‌ ಗೆಹ್ಲೋಟ್‌, ಸಂಘರ್ಷದಲ್ಲಿ ಪಾಕಿಸ್ತಾನ ಗೆಲುವು ಎಂದು ಹೇಳಿಕೊಳ್ಳುತ್ತಿದೆ. ಭಾರತ ನಡೆಸಿದ ದಾಳಿಗೆ ಈಗಲೂ ಕುರುಹುಗಳಿವೆ, ಮೇ 9ರ ವರೆಗೆ ಪಾಕಿಸ್ತಾನವು ಭಾರತದ ಮೇಲೆ ಹೆಚ್ಚಿನ ದಾಳಿಗಳ ಬೆದರಿಕೆ ಹಾಕುತ್ತಿತ್ತು. ಆದರೆ ಮೇ 10 ರಂದು, ಅದರ ಸೇನೆಯು ಹೋರಾಟವನ್ನು ನಿಲ್ಲಿಸುವಂತೆ ನೇರವಾಗಿ ನಮ್ಮೊಂದಿಗೆ ಮನವಿ ಮಾಡಿತು. ಭಯೋತ್ಪಾದನೆಯನ್ನು ಹುಟ್ಟು ಹಾಕುವಲ್ಲಿ ಮತ್ತು ರಪ್ತು ಮಾಡುವಲ್ಲಿ ನಿರತವಾಗಿರುವ ಪಾಕಿಸ್ತಾನ ಅಸಂಬದ್ಧ ಹೇಳಿಕೆಗಳನ್ನ ನೀಡುತ್ತಿದೆ. ವಾಸ್ತವವಾಗಿ ಅದೆಲ್ಲವೂ ಭಾರತದ ದಾಳಿಯಿಂದ ಧ್ವಂಸವಾದ ವಾಯುನೆಲೆಗಳು ಹಾಗೂ ಸುಟ್ಟುಹೋದ ಹ್ಯಾಂಗರ್‌, ಹಾನಿಗೊಳಗಾದ ರನ್‌ವೇಗಳ ಚಿತ್ರಗಳಾಗಿವೆ. ಇದು ಸಾರ್ವಜನಿಕವಾಗಿಯೂ ಲಭ್ಯವಿದೆ. ಇದನ್ನ ಗೆಲುವು ಅಂತ ಹೇಳಿಕೊಳ್ಳೋದಕ್ಕೆ ನಾಚಿಕೆ ಆಗೋದಿಲ್ಲವೇ ಎಂದು ಜಾಡಿಸಿದರು.

ಟ್ರಂಪ್‌ಗೆ ಪರೋಕ್ಷವಾಗಿ ತಿರುಗೇಟು
ಭಾರತದಲ್ಲಿ ಅಮಾಯಕ ನಾಗರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಗಳಿಗೆ ಪಾಕಿಸ್ತಾನ ಕಾರಣವಾಗಿದೆ. ಜೊತೆಗೆ ಭಾರತ ತನ್ನ ಜನರನ್ನ ರಕ್ಷಿಸಿಕೊಳ್ಳೋದಕ್ಕೆ ಪ್ರತೀಕಾರದ ಕ್ರಮ ತೆಗೆದುಕೊಳ್ಳುತ್ತದೆ ಎಂಬುದೂ ಸತ್ಯ. ಇದರ ಹೊರತಾಗಿ ಭಾರತ ಮತ್ತು ಪಾಕಿಸ್ತಾನ ನಡುವಿನ ಎಲ್ಲಾ ಸಮಸ್ಯೆಗಳನ್ನ ದ್ವಿಪಕ್ಷೀಯ ಮಟ್ಟದಲ್ಲೇ ಪರಿಹರಿಸಲಾಗುವುದು. ಇದರಲ್ಲಿ 3ನೇ ವ್ಯಕ್ತಿಗೆ ಯಾವುದೇ ಅವಕಾಶವಿರುವುದಿಲ್ಲ ಎಂದು ಟ್ರಂಪ್‌ ಹೆಸರು ಉಲ್ಲೇಖಿಸದೇ ಪರೋಕ್ಷವಾಗಿ ತಿರುಗೇಟು ನೀಡಿದರು.

ಮೇ ತಿಂಗಳಲ್ಲಿ ಭಾರತದೊಂದಿಗಿನ ಸಂಕ್ಷಿಪ್ತ ಮಿಲಿಟರಿ ಉಲ್ಬಣದಲ್ಲಿ ಪಾಕಿಸ್ತಾನವನ್ನು ವಿಜೇತ ಎಂದು ಬಿಂಬಿಸಲು ಷರೀಫ್ ತಮ್ಮ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಭಾಷಣವನ್ನು ಬಳಸಿಕೊಂಡಿದ್ದರು. ನಾವು ಯುದ್ಧವನ್ನು ಗೆದ್ದಿದ್ದೇವೆ, ಮತ್ತು ಈಗ ನಾವು ನಮ್ಮ ಭಾಗದಲ್ಲಿ ಶಾಂತಿಯನ್ನು ಗೆಲ್ಲಲು ಪ್ರಯತ್ನಿಸುತ್ತಿದ್ದೇವೆ. ಪಾಕಿಸ್ತಾನವು ಎಲ್ಲಾ ಬಾಕಿ ಇರುವ ವಿಷಯಗಳ ಕುರಿತು ಭಾರತದೊಂದಿಗೆ ಸಂಯೋಜಿತ, ಸಮಗ್ರ ಮತ್ತು ಫಲಿತಾಂಶ-ಆಧಾರಿತ ಸಂವಾದಕ್ಕೆ ಸಿದ್ಧವಾಗಿದೆ ಎಂದು ಹೇಳಿದ್ದರು.

TAGGED:indiaOperation SindoorpakistanPetal GahlotShehbaz Sharifterrorism
Share This Article
Facebook Whatsapp Whatsapp Telegram

Cinema news

Vijayalakshmi Darshan
ವಿಕೋಪಕ್ಕೆ ತಿರುಗಿದ ಸ್ಟಾರ್‌ ವಾರ್‌ – 15 ಖಾತೆ, 150 ಪೋಸ್ಟ್‌ ವಿರುದ್ಧ ವಿಜಯಲಕ್ಷ್ಮಿ ದೂರು
Cinema Crime Karnataka Latest Main Post
rishab Shetty Mantralaya
ಕುಟುಂಬ ಸಮೇತರಾಗಿ ರಾಯರ ದರ್ಶನ ಪಡೆದ ರಿಷಬ್ ಶೆಟ್ಟಿ
Cinema Districts Karnataka Latest Raichur Sandalwood Top Stories
Rakshita Shetty Bigg Boss 12 1
ಬಲೇ..ಬಲೇ Guys ಮತ್ತೆ ಶುರುವಾಯ್ತು ವ್ಲಾಗಿಂಗ್ – ಬಿಗ್‌ಬಾಸ್ ಮನೇಲಿ ಫಿಶ್ ಫ್ರೈ ರೆಸಿಪಿ ಹೇಳಿಕೊಟ್ಟ ರಕ್ಷಿತಾ
Cinema Latest Sandalwood Top Stories
darshan wife vijayalakshmi dinakar tugudeepa
ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ಭೇಟಿ
Cinema Latest Sandalwood Top Stories

You Might Also Like

BJP wins landslide victory in Karnataka local body elections kinnigoli
Bengaluru Rural

ಕರ್ನಾಟಕ| ಸ್ಥಳೀಯ ಸಂಸ್ಥೆಗಳ ಚುನಾವಣೆ – ಬಿಜೆಪಿಗೆ ಭರ್ಜರಿ ಜಯ

Public TV
By Public TV
54 minutes ago
RR Nagar Crime Bengaluru
Bengaluru City

ಸರಸಕ್ಕೆ ಕರೆದು ಟೆಕ್ಕಿ ಬಳಿ ಹಣಕ್ಕೆ ಡಿಮ್ಯಾಂಡ್ – ಇಬ್ಬರು ಮಹಿಳೆಯರು ಸೇರಿ ಐವರು ಅರೆಸ್ಟ್

Public TV
By Public TV
2 hours ago
DK Shivakumar 1 1
Karnataka

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಕೆಶಿ ವೈರಾಗ್ಯದ ಮಾತು

Public TV
By Public TV
2 hours ago
Vaibhav Suryavanshi
Cricket

ವೇಗದ ಶತಕ | 16 ಬೌಂಡರಿ, 15 ಸಿಕ್ಸ್‌ – ದಾಖಲೆ ಬರೆದ ವೈಭವ್‌ ಸೂರ್ಯವಂಶಿ

Public TV
By Public TV
3 hours ago
Manki Town Panchayat Elections A landslide victory for BJP a setback for Minister Mankala Vaidyas supporters
Districts

ಮಂಕಿ ಪಟ್ಟಣ ಪಂಚಾಯತ್‌ ಚುನಾವಣೆ – ಬಿಜೆಪಿಗೆ ಜಯಭೇರಿ, ಮಂಕಾಳು ವೈದ್ಯ ಬೆಂಬಲಿಗರಿಗೆ ಹಿನ್ನಡೆ

Public TV
By Public TV
4 hours ago
Bengaluru Traffic
Bengaluru City

ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ – ಸೆನ್ಸರ್ ಅಳವಡಿಕೆಗೆ ಜಿಬಿಎ ಪ್ಲ್ಯಾನ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?