Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

Latest

TVK Vijay Rally Stampede | ದುರಂತದಲ್ಲಿ 2 ವರ್ಷದ ಕಂದಮ್ಮ ಬಲಿ – ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ

Public TV
Last updated: September 28, 2025 4:11 pm
Public TV
Share
3 Min Read
VIjay Actor
SHARE

– ನಿತ್ರಾಣಗೊಂಡಿದ್ದ ಮಗುವನ್ನ ಆಸ್ಪತ್ರೆಗೆ ಹೊತ್ತು ತಂದಿದ್ದ ತಂದೆ; ಮಗು ಶವ ಹಿಡಿದು ಗೋಳಾಡಿದ ತಾಯಿ
– ಸಾವಿನ ಸಂಖ್ಯೆ 40ಕ್ಕೆ ಏರಿಕೆ

ಚೆನ್ನೈ: ಕಾಲ್ತುಳಿತದಲ್ಲಿ (Vijay Rally Stampede) ನಿತ್ರಾಣಗೊಂಡಿದ್ದ ಮಗುವನ್ನು ತಂದೆಯೊಬ್ಬರು ಬಿಗಿದಪ್ಪಿಕೊಂಡು ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ. ತನ್ನ ಉಸಿರು ಕೊಟ್ಟಾದ್ರೂ ಮಗುವನ್ನು ಉಳಿಸಿಕೊಳ್ಳಬೇಕೆಂಬ ಹಂಬಲದಲ್ಲಿದ್ದ ಮಗುವಿನ ಉಸಿರು ನಿಂತುಹೋಗಿದ್ದನ್ನು ಕಂಡು ಗೋಳಾಡಿದ್ದಾರೆ. ಇತ್ತ ಮಗುವಿನ ಸಾವು ಅರಗಿಸಿಕೊಳ್ಳಲಾದ ತಾಯಿ ಮಗುವಿನ ಮೃತದೇಹ ಅಪ್ಪಿ ಗೋಳಾಡಿದ್ದಾರೆ… ಈ ದೃಶ್ಯ ಕಂಡುಬಂದದ್ದು ತಮಿಳುನಾಡಿನ (TamilNadu) ಕರೂರಿನಲ್ಲಿ.

ಹೌದು. ತಮಿಳುನಾಡಿನ ಕರೂರಿನಲ್ಲಿ (Karur) ನಡೆದ ಕಾಲ್ತುಳಿತ ಘೋರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಆದ್ರೆ ಈ ದುರಂತದಲ್ಲಿ 2 ವರ್ಷದ ಪುಟ್ಟ ಕಂದಮ್ಮ ಬಲಿಯಾಗಿರುವುದು ಕಟುಕರ ಕರುಳು ಸಹ ಹಿಂಡುವಂತಿತ್ತು. ಇದನ್ನೂ ಓದಿ: ಕರೂರು ಕಾಲ್ತುಳಿತ ದುರಂತ – ಮೃತರ ಕುಟುಂಬಕ್ಕೆ ತಲಾ 20 ಲಕ್ಷ ಪರಿಹಾರ ಘೋಷಿಸಿದ ವಿಜಯ್

TVK Karur Rally Stampede Vijay

ದುರಂತರದಲ್ಲಿ ಮೃತಪಟ್ಟ 40 ಜನರಲ್ಲಿ 10 ಮಂದಿ ಅಪ್ರಾಪ್ತರಿದ್ದಾರೆ. ಮಹಿಳೆಯರೂ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇನ್ನೂ ಕೆಲವರು 20-30 ವಯಸ್ಸಿನವರಿದ್ದಾರೆ ಎಂದು ತಿಳಿದುಬಂದಿದೆ. ಕಾಲ್ತುಳಿದ ದೃಶ್ಯಗಳು ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಒಂದೆಡೆ ತಮ್ಮವರನ್ನ ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ. ಮತ್ತೊಂದೆಡೆ ಮೃತದೇಹ ಪಡೆಯಲು ಶವಾಗಾರದ ಬಳಿ ಸಾಲುಗಟ್ಟಿ ನಿಂತಿದ್ದ ದೃಶ್ಯಗಳೂ ಕಂಡುಬಂದಿದೆ. ಇದನ್ನೂ ಓದಿ: Explainer | ಕುಂಭಮೇಳದಿಂದ ತಮಿಳುನಾಡು ದುರಂತದವರೆಗೆ – ದೇಶದ ಪ್ರಮುಖ ಕಾಲ್ತುಳಿತ ದುರಂತಗಳ ಪಟ್ಟಿ ಇಲ್ಲಿದೆ

ಮೃತಪಟ್ಟವರು ಯಾರು? ಯಾವ ವಯಸ್ಸಿನವರು?
ಹೇಮಲತಾ (8), ಸೈಲೆತ್ಸನಾ (8), ಸಾಯಿ ಜೀವ (4), ಧುರು ವಿಷ್ಣು (2), ಸನೂಜ್ (13), ಧರಣಿಕಾ (14), ಪಝನಿಯಮ್ಮಾಳ್ (11), ಕೋಕಿಲಾ (14), ಕೃತಿಕ್ (7) ಮತ್ತು ಕಿಶೋರ್ (17), ತಾಮರೈಕಣ್ಣನ್ (25), ಸುಕನ್ಯಾ (33), ಆಕಾಶ್ (23), ಧನುಷ್‌ಕುಮಾರ್ (24), ವಡಿವಳಗನ್ (54), ರೇವತಿ (52), ಚಂದ್ರ (40), ರಮೇಶ್ (32), ರವಿಕೃಷ್ಣನ್ (32), ಪ್ರಿಯದರ್ಶಿನಿ (35), ಮಹೇಶ್ವರಿ (45), ಮಾಲತಿ (36), ಸುಮತಿ (53), ಸಮತಿಕುಮಾರ್ (53), ಸಮತಿಕುಮಾರ್ (53) (26), ಶಂಕರ ಗಣೇಶ್ (45), ವಿಜಯರಾಣಿ (42), ಗೋಕುಲಪ್ರಿಯ (28), ಫಾತಿಮಾ ಬಾನು (29), ಜಯ (55), ಅರುಕ್ಕಣಿ (60) ಮತ್ತು ಜಯಂತಿ (43).

ಕಾಲ್ತುಳಿತ ಸಂಭವಿಸಿದ್ದು ಏಕೆ?
ಕಾಲಿವುಡ್ ಸೂಪರ್ ಸ್ಟಾರ್ ಕಮ್ ರಾಜಕಾರಣಿ ದಳಪತಿ ವಿಜಯ್ ತಮಿಳುನಾಡಿನ ರಾಜಕೀಯದಲ್ಲಿ ಭವಿಷ್ಯ ಕಂಡುಕೊಳ್ಳಲು ಮುಂದಾಗಿದ್ದಾರೆ. ಅದಕ್ಕಾಗಿ 2026ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಕರೂರಿನಲ್ಲಿ ತಮ್ಮ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ‍್ಯಾಲಿ ಹಮ್ಮಿಕೊಂಡಿದ್ದರು. ವಿಜಯ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಅಭಿನಮಾನಿಗಳು, ಬೆಂಬಲಿಗರು ಸೇರಿದ್ದರು. ತಮ್ಮ ನಾಯಕನಿಗಾಗಿ ಸುಮಾರು 7 ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದ್ರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

ಮಧ್ಯಾಹ್ನದ ಸುಡು ಬಿಸಿಲಿನಲ್ಲಿ ವಿಜಯ್ ಅವರಿಗಾಗಿ ಕಾಯುತ್ತಿದ್ದ ಅಭಿಮಾನಿಗಳು ಸುಸ್ತಿನಿಂದ ಬಳಲುತ್ತಿದ್ದರು. ಇನ್ನು ಇದೇ ವೇಳೆ 9 ವರ್ಷದ ಬಾಲಕಿ ಕಳೆದು ಹೋಗಿರ್ತಾಳೆ. ಆಗ ವಿಜಯ್ ಮೈಕ್ ಮೂಲಕ ಪೊಲೀಸರಿಗೆ ಮನವಿ ಮಾಡ್ತಾರೆ. ಮೈಕ್‌ನಲ್ಲಿ ಅನೌನ್ಸ್ ಮಾಡುತ್ತಲೇ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಉಸಿರಾಟದ ತೊಂದ್ರೆ ಅನುಭವಿಸಿದ ಜನರು ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಂದ್ಹಾಗೆ ರ‍್ಯಾಲಿ ತಡವಾಗಿ ಸಂಜೆ ಆರಂಭವಾಗಿತ್ತು. ಹೀಗಾಗಿ ವಿಜಯ್ ನೋಡಲು ಫ್ಯಾನ್ಸ್ ಮುಗಿ ಬಿದ್ದಿದ್ರು. ಅಲ್ದೆ ರ‍್ಯಾಲಿ ವೇಳೆ ಕರೆಂಟ್ ತೆಗೆದಿದ್ದರಿಂದ ದುರಂತ ಸಂಭವಿಸಿದೆ. ಇದನ್ನೂ ಓದಿ: Vijay Rally Stampede | 10 ವರ್ಷದ ಬಾಲಕಿ ಸಾವನ್ನ ಕಣ್ಣಾರೆ ಕಂಡೆ – ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಬೆಂಗ್ಳೂರಿನ ಪ್ರತ್ಯಕ್ಷದರ್ಶಿ

ಭಾಷಣ ಅರ್ಧಕ್ಕೆ ಮೊಟಕುಗೊಳಿಸಿದ ವಿಜಯ್
ಒಂದು ಹಂತದಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದಂತೆ, ನಟ ವಿಜಯ್ ತಮ್ಮ ಭಾಷಣವನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ. ನೂಕಾಟ, ತಳ್ಳಾಟ ಹೆಚ್ಚಾಗಿ ಉಸಿರುಗಟ್ಟಲು ಶುರುವಾಗಿದ್ದಂತೆ ನೀರಿನ ಬಾಟಲಿಗಳನ್ನು ಎಸೆದಿದ್ದಾರೆ. ಕೂಡಲೇ ಸ್ಥಳದಿಂದ ಕಾಲ್ತಿತ್ತರು. ಮೊದಲೇ ತಡವಾಗಿ ಆಗಮಿಸಿದ್ದ ವಿಜಯ್, ಸ್ಥಳಕ್ಕೆ ಬರುತ್ತಿದ್ದಂತೆ ತಳ್ಳಾಟ, ನೂಕಾಟ ಹೆಚ್ಚಾಗಿದೆ. ದುರಂತ ಬಳಿಕ ಬ್ಲಾಕ್ ಕಾರ್‌ನಲ್ಲಿ ತಿರುಚ್ಚಿ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ವಿಜಯ್ ಅಲ್ಲಿಂದ ಚೆನ್ನೈಗೆ ಎಸ್ಕೇಪ್ ಆಗಿದ್ರು.

ಘಟನೆ ಸಂಬಂಧ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ಟಿವಿಕೆ ಕರೂರು ಜಿಲ್ಲಾ ಕಾರ್ಯದರ್ಶಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಈ ನಟುವೆ ನಟ ವಿಜಯ್‌ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: Vijay Rally Stampede | ಮೃತಪಟ್ಟ 39 ಜನರಲ್ಲಿ 35 ಮಂದಿ ಮೃತದೇಹಗಳ ಗುರುತು ಪತ್ತೆ

TAGGED:Karur HospitalMK StalinThalapathy VijaytvkVijay Rally Stampedeಎಂ.ಕೆ.ಸ್ಟಾಲಿನ್ತಮಿಳುನಾಡು ಕಾಲ್ತುಳಿತನಟ ವಿಜಯ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
2 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
2 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
3 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
3 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?