Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ayudha Puja 2025 | ವಿಜಯದಶಮಿ ಮುನ್ನಾದಿನ ಆಯುಧ ಪೂಜೆ ಆಚರಣೆ ಮಾಡುವುದೇಕೆ? ಈ ವರ್ಷ ಶುಭ ಮುಹೂರ್ತ ಯಾವಾಗ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Ayudha Puja 2025 | ವಿಜಯದಶಮಿ ಮುನ್ನಾದಿನ ಆಯುಧ ಪೂಜೆ ಆಚರಣೆ ಮಾಡುವುದೇಕೆ? ಈ ವರ್ಷ ಶುಭ ಮುಹೂರ್ತ ಯಾವಾಗ?

Bengaluru City

Ayudha Puja 2025 | ವಿಜಯದಶಮಿ ಮುನ್ನಾದಿನ ಆಯುಧ ಪೂಜೆ ಆಚರಣೆ ಮಾಡುವುದೇಕೆ? ಈ ವರ್ಷ ಶುಭ ಮುಹೂರ್ತ ಯಾವಾಗ?

Public TV
Last updated: September 30, 2025 12:15 am
Public TV
Share
2 Min Read
Ayudha Puje
SHARE

ಪ್ರತೀ ವರ್ಷ ಅಶ್ವಿನಿ ಮಾಸದ 9ನೇ ದಿನದಂದು ಅಂದ್ರೆ ಮಹಾನವಮಿಯಂದು ಆಯುಧ ಪೂಜೆಯನ್ನ ಮಾಡಲಾಗುತ್ತದೆ. ಇನ್ನೂ ಕೆಲವೆಡೆ ವಿಜಯದಶಮಿ ದಿನದಂದೂ ಆಯುಧ ಪೂಜೆಯನ್ನು ಮಾಡುತ್ತಾರೆ. 2025ರ ಆಯುಧ ಪೂಜೆಯನ್ನು (Ayudha Puja) ಅಕ್ಟೋಬರ್‌ 01ರ ಬುಧವಾರದಂದು ಆಚರಿಸಲಾಗುವುದು. ದಕ್ಷಿಣ ಭಾರತದಲ್ಲಿ ಆಯುಧ ಪೂಜೆಗೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಈ ದಿನ ನಾವು ಕೆಲಸ ಮಾಡಲು ಬಳಸುವ ವಸ್ತುಗಳನ್ನು, ಆಯುಧಗಳನ್ನು ಮತ್ತು ರಕ್ಷಾ ಕವಚಗಳನ್ನು ಪೂಜಿಸುವ ಸಂಪ್ರದಾಯವಿದೆ. ಇದರ ಹಿಂದೆ ಪುರಾಣ ಪುಣ್ಯಕಥೆಗಳೂ ಇವೆ. ಅವುಗಳೇನೆಂಬುದನ್ನಿಲ್ಲಿ ತಿಳಿಯೋಣ…

ಈ ವರ್ಷ ಶುಭ ಮುಹೂರ್ತ ಎಷ್ಟೊತ್ತಿಗೆ?
ಈ ವರ್ಷ ಅಕ್ಟೋಬರ್‌ 1ರಂದು ಆಯುಧಪೂಜಾ ಹಬ್ಬ ಇರಲಿದ್ದು, ಇದಾದ ಮುರು ದಿನ ವಿಜಯದಶಮಿ ಆರಂಭವಾಗುತ್ತದೆ. ಈ ಬಾರಿ ಅಕ್ಟೋಬರ್‌ 1ರಂದು ಮಧ್ಯಾಹ್ನ 2:09 ರಿಂದ 2:57ರ ಸಂದರ್ಭ ಶುಭಮುಹೂರ್ತ ಇದೆ.

navratri special Ayudha Pooja What Is Its Significance

ಆಯುಧ ಪೂಜೆ ಮಹತ್ವ ಏನು?
ಹಿಂದೂ ಧರ್ಮದಲ್ಲಿ ಆಯುಧ ಪೂಜೆಗೆ ವಿಶೇಷ ಮಹತ್ವವಿದೆ. ಪುರಾಣಗಳ ಪ್ರಕಾರ ಅಂದು ದಿನ ಆಯುಧಗಳನ್ನು ಪೂಜಿಸುವ ಸಂಪ್ರದಾಯವಿದೆ. ಹಿಂದಿನ ಕಾಲದಲ್ಲಿ, ಕ್ಷತ್ರಿಯ ಜನರು ಯುದ್ಧಕ್ಕೆಂದು ಹೋಗುತ್ತಿದ್ದರು. ಇವರು ವಿಜಯದಶಮಿಯ ಒಂದು ದಿನ ಮೊದಲು ಆಯುಧ ಪೂಜೆ ದಿನ ತಮ್ಮ ಯುದ್ಧ ಸಾಮಾಗ್ರಿಗಳನ್ನಿಟ್ಟು ಪೂಜೆಯನ್ನು ಮಾಡುತ್ತಿದ್ದರು. ಆಯುಧ ಪೂಜೆಯ ಮೂಲಕ ಆಯುಧಗಳನ್ನು ಪೂಜಿಸುವುದರಿಂದ ಯುದ್ಧದಲ್ಲಿ ವಿಜಯಿಯಾಗಬಹುದು ಎಂಬುದು ಅವರ ನಂಬಿಕೆಯಾಗಿತ್ತು. ಈ ಪೂಜೆಯನ್ನು ಕೆಲಸ ಮತ್ತು ಜ್ಞಾನದ ಸಮನ್ವಯದ ಸಂಕೇತವೆಂದು ಪರಿಗಣಿಸಲಾಗಿದೆ.

ಆಯುಧ ಪೂಜೆ ವಿಧಾನ
ಆಯುಧ ಪೂಜೆಯ ದಿನದಂದು ಜನರು ತಮ್ಮ ಮನೆ, ಕೆಲಸದ ಸ್ಥಳ, ಕಾರ್ಖಾನೆಗಳು ಮತ್ತು ಅಂಗಡಿಗಳಲ್ಲಿ ಬಳಸುವ ಉಪಕರಣಗಳು ಮತ್ತು ಸಲಕರಣೆಗಳನ್ನು ಸ್ವಚ್ಛಗೊಳಿಸುತ್ತಾರೆ ಮತ್ತು ಪೂಜೆಗೆ ಅಲಂಕರಿಸುತ್ತಾರೆ. ವ್ಯಾಪಾರ ವರ್ಗದವರು ತಮ್ಮ ವ್ಯಾಪಾರ ಸಲಕರಣೆಗಳಾದ ಕಂಪ್ಯೂಟರ್, ಪೆನ್ನು, ಖಾತೆ ಪುಸ್ತಕ ಇತ್ಯಾದಿಗಳಿಗೆ ಪೂಜೆಯನ್ನು ಮಾಡುತ್ತಾರೆ ಮತ್ತು ರೈತರು ತಮ್ಮ ಕೃಷಿ ಉಪಕರಣಗಳನ್ನು ಪೂಜಿಸುತ್ತಾರೆ. ಸೈನಿಕರು ತಮ್ಮ ಆಯುಧಗಳನ್ನು ಪೂಜಿಸುತ್ತಾರೆ.

MYSURU DASARA 4

ಅಂದು ಪೂಜಾ ಸ್ಥಳವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗುತ್ತದೆ. ನಂತರ ಅಲ್ಲಿ ದೇವರು ಮತ್ತು ದೇವತೆಗಳ ವಿಗ್ರಹಗಳು ಅಥವಾ ಚಿತ್ರಗಳನ್ನು ಇಡಲಾಗುತ್ತದೆ. ಇದರ ನಂತರ, ಪೂಜೆಯನ್ನು ನಡೆಸಲಾಗುತ್ತದೆ. ಅದರಲ್ಲಿ ಹೂವುಗಳು, ಧೂಪದ್ರವ್ಯಗಳು, ದೀಪಗಳು ಮತ್ತು ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ. ತೆಂಗಿನಕಾಯಿ, ಹೂವು, ಅರಿಶಿನ, ಕುಂಕುಮ ಮತ್ತು ಅಕ್ಷತೆಯನ್ನು ಅರ್ಪಿಸಿ ಆಯುಧಗಳು ಮತ್ತು ವಾದ್ಯಗಳನ್ನು ಪೂಜಿಸುತ್ತಾರೆ. ಪೂಜೆಯ ಸಮಯದಲ್ಲಿ, ವಾದ್ಯಗಳನ್ನು ಗೌರವಿಸಲಾಗುತ್ತದೆ. ಪೂಜೆಯ ಕೊನೆಯಲ್ಲಿ ಪ್ರಸಾದವನ್ನು ವಿತರಿಸಲಾಗುತ್ತದೆ.

ಆಯುಧ ಪೂಜೆ ಕಥೆ
ಆಯುಧ ಪೂಜೆಗೆ ಸಂಬಂಧಿಸಿದ ದಂತಕಥೆಯ ಪ್ರಕಾರ, ದುರ್ಗಾದೇವಿಯು ತನ್ನ ರೌದ್ರ ರೂಪದಲ್ಲಿ ರಾಕ್ಷಸ ಮಹಿಷಾಸುರನನ್ನು ಸೋಲಿಸಿರುವ ದಿನವಾಗಿದೆ. ಎಲ್ಲಾ ದೇವತೆಗಳು ರಾಕ್ಷಸನನ್ನು ಸೋಲಿಸಲು ದುರ್ಗೆಗೆ ತಮ್ಮ ಆಯುಧಗಳು, ಪ್ರತಿಭೆ ಮತ್ತು ಶಕ್ತಿಗಳನ್ನು ನೀಡಿದರು. ಸಂಪೂರ್ಣ ಯುದ್ಧವು ಒಂಬತ್ತು ದಿನಗಳ ಕಾಲ ನಡೆಯಿತು. ಮತ್ತು ನವಮಿಯ ಮುನ್ನಾದಿನದಂದು, ದುರ್ಗಾ ದೇವಿಯು ಮಹಿಷಾಸುರನನ್ನು ಕೊಲ್ಲುವ ಮೂಲಕ ಯುದ್ಧವನ್ನು ಮುಕ್ತಾಯಗೊಳಿಸಿದಳು. ಹೀಗಾಗಿ, ಆ ದಿನವನ್ನು ಮಹಾನವಮಿ ಎಂದು ಆಚರಿಸಲಾಗುತ್ತದೆ ಮತ್ತು ಆಯುಧ ಪೂಜೆಯ ವಿಧಿವಿಧಾನವನ್ನು ಪೂರೈಸಲಾಗುತ್ತದೆ. ದುರ್ಗಾ ದೇವಿಯು ಬಳಸಿದ ಎಲ್ಲಾ ಆಯುಧಗಳು ಮತ್ತು ಉಪಕರಣಗಳು ತಮ್ಮ ಉದ್ದೇಶವನ್ನು ಸಾಧಿಸಿವೆ ಎನ್ನುವ ನಂಬಿಕೆಯಿದೆ. ಯುದ್ಧದ ನಂತರ ಆ ಆಯುಧಗಳನ್ನು ಗೌರವಿಸಲು ಎಲ್ಲಾ ಆಯುಧಗಳನ್ನು ಪೂಜಿಸಿ ಒಂದೆಡೆ ಇಟ್ಟು ಶುಚಿಗೊಳಿಸಿ ಅಲಂಕರಣ ಮಾಡಿದ ನಂತರ ಆಯಾ ದೇವರು ಮತ್ತು ದೇವತೆಗಳಿಗೆ ಅವುಗಳನ್ನು ಹಿಂದಿರುಗಿಸಲಾಯಿತು.

TAGGED:Ayudha PujahinduNavratri Festivalಆಯುಧ ಪೂಜೆಮಹಾನವಮಿವಿಜಯದಶಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Team India U19
Cricket

U19 World Cup | ಪಂದ್ಯ ಮುಗಿಯುವ ಮುನ್ನವೇ ಸೆಮಿಫೈನಲ್‌ಗೆ ಭಾರತ ಲಗ್ಗೆ – ಪಾಕಿಸ್ತಾನ ಮನೆಗೆ

Public TV
By Public TV
27 minutes ago
mlc c t ravi has been elected as the president and dinesh hosur as the vice president of the chikkamagaluru district central cooperative bank
Chikkamagaluru

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Public TV
By Public TV
49 minutes ago
Ayatollah Ali Khamenei 1
Latest

ಈ ಬಾರಿ ಪ್ರಾದೇಶಿಕ ಯುದ್ಧವಾಗಿರುತ್ತೆ – ಅಮೆರಿಕಕ್ಕೆ ಖಮೇನಿ ಎಚ್ಚರಿಕೆ

Public TV
By Public TV
1 hour ago
Siddaramaiah 2
Districts

ಜಾತಿಗಣತಿ ವರದಿ ಇನ್ನೊಂದು ತಿಂಗಳಲ್ಲಿ ಬಿಡುಗಡೆ ಮಾಡ್ತೀವಿ: ಸಿದ್ದರಾಮಯ್ಯ

Public TV
By Public TV
1 hour ago
BY Vijayendra 1
Districts

ದೇಶದ ಬಡವರು, ರೈತರು ಸೇರಿದಂತೆ ಎಲ್ಲರ ಹಿತದೃಷ್ಟಿಯ ಬಜೆಟ್ ಮಂಡನೆಯಾಗಿದೆ: ಬಿವೈವಿ

Public TV
By Public TV
1 hour ago
Rahul Gandhi Mallikarjun Kharge
Latest

ಬಜೆಟ್‌ನಲ್ಲಿ ದೇಶದ ಬಿಕ್ಕಟ್ಟುಗಳನ್ನು ನಿರ್ಲಕ್ಷಿಸಲಾಗಿದೆ: ರಾಹುಲ್ ಗಾಂಧಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?