ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ (MS Ramaiah Hospital) ದಾಖಲಾಗಿದ್ದಾರೆ.
ಬಿಹಾರ ಚುನಾವಣೆ, ಸರಣಿ ಪ್ರವಾಸದಿಂದಾಗಿ ಉಸಿರಾಟದ ಸಮಸ್ಯೆ ಉಂಟಾದ ಹಿನ್ನೆಲೆ ಜನರಲ್ ಚೆಕಪ್ಗಾಗಿ ಆಸ್ಪತ್ರೆ ದಾಖಲಾಗಿದ್ದು, ವೈದ್ಯರು ನಿತ್ಯದ ಚೆಕಪ್ ನಡೆಸಿರುವುದಾಗಿ ತಿಳಿದುಬಂದಿದೆ.ಇದನ್ನೂ ಓದಿ: ಹಾಸನದಲ್ಲಿ ನಿಗೂಢ ಸ್ಫೋಟ ಕೇಸ್ – ಗಂಭೀರ ಗಾಯಗೊಂಡಿದ್ದ ದಂಪತಿ ಸಾವು; ಅನಾಥವಾದ 14 ತಿಂಗಳ ಮಗು
ಇನ್ನೂ ಇದೇ ವೇಳೆ ವೈದ್ಯರು ಇಸಿಜಿ ಪರೀಕ್ಷೆ ಮಾಡಿದ್ದು, ಬುಧವಾರ ರಾತ್ರಿ ಖರ್ಗೆಯವರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.