Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?

Bengaluru City

ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು- ಪಾಂಡವರಿಗೆ ಏನು ಸಂಬಂಧ?

Public TV
Last updated: October 1, 2025 9:39 pm
Public TV
Share
3 Min Read
RAMAYANA
SHARE

ಅಶ್ವಯುಜ ಶುಕ್ಲಪಾಡ್ಯದಂದು ಆರಂಭಗೊಂಡು ನವರಾತ್ರಿ (Navarathri)  ಹಬ್ಬದ ಒಂಭತ್ತು ದಿನಗಳು ಕಳೆದ ನಂತರ ಬರುವ ಹತ್ತನೇ ದಿನವೇ ‘ದಶಮಿ’. ಇದನ್ನೇ ವಿಜಯ ದಶಮಿ (Vijaya Dashmi) ಎಂದು ಕರೆಯುತ್ತಾರೆ. ಈ ದಿನ ಸಂತೋಷದ ಸಾಂಸ್ಕೃತಿಕ, ಧಾರ್ಮಿಕ, ವೈಭವದ ಮೆರವಣಿಗೆ ದೇಶದೆಲ್ಲೆಡೆ ನಡೆಯುತ್ತದೆ.

ವಿಜಯದಶಮಿಯ ಹಿನ್ನೆಲೆ ಏನು?
ಕಾಡೆಮ್ಮೆ ರೂಪದ ಮಹಿಷಾಸುರ (Mahishura) ದೀರ್ಘ ತಪಸ್ಸು ಮಾಡಿ, ಯಾವುದೇ ಮನುಷ್ಯನಿಂದ, ದೇವರಿಂದ ಅಥವಾ ವಿಶಿಷ್ಟ ಶಕ್ತಿಯಿಂದ ತನ್ನನ್ನು ಸಂಹರಿಸಲು ಸಾಧ್ಯವಾಗಬಾರದು ಎಂದು ಬ್ರಹ್ಮನಿಂದ ವರವನ್ನು ಪಡೆದಿದ್ದನು. ವರ ಸಿಕ್ಕಿದ ಕೂಡಲೇ ಅಹಂಕಾರದಿಂದ ಜನರಿಗೆ ಮತ್ತು ದೇವತೆಗಳಿಗೆ ತೊಂದರೆ ಕೊಡಲು ಆರಂಭಿಸಿದ. ಈತನ ಉಪಟಳವನ್ನು ತಾಳಲಾರದೇ ದೇವತೆಗಳು ಆದಿಶಕ್ತಿಯನ್ನು ಪೂಜಿಸಿ ಮಹಿಷನನ್ನು ಹತ್ಯೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ಪ್ರಾರ್ಥನೆ ಕೇಳಿದ ದೇವಿ ದುರ್ಗೆಯಾಗಿ ಸಿಂಹದ ಮೇಲೆ ಕುಳಿತು, ಹತ್ತು ಕೈಗಳಲ್ಲಿ ಹತ್ತು ಬಗೆಯ ಆಯುಧಗಳನ್ನು ಹಿಡಿದು ಧರೆಗಿಳಿದಳು. ರಾಕ್ಷಸನಾದ ಮಹಿಷಾಸುರನನ್ನು ದಶಮಿಯ ದಿನ ಸಂಹಾರ ಮಾಡಿದಳು. ಅಂದಿನಿಂದ ದಶಮಿಯಂದು ಮಹಿಷಾಸುರನ್ನು ಕೊಂದು ವಿಜಯ ಸಿಕ್ಕಿದ್ದಕ್ಕೆ `ವಿಜಯದಶಮಿ’ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.

ರಾಮಾಯಣಕ್ಕೆ ಏನು ಸಂಬಂಧ?
ರಾವಣನನ್ನು ಸಂಹಾರ ಮಾಡುವ ಮೊದಲು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು. ‘ದಶಹರ’ದಂದು ದಶಕಂಠನಾಗಿದ್ದ ರಾವಣನನ್ನು ಶ್ರೀರಾಮನು ಸಂಹರಿಸಿದ ಬಳಿಕ ವಿಜಯೋತ್ಸವ ನಡೆಯಿತು ಎನ್ನುವ ಪ್ರತೀತಿ ಇದೆ. ಹೀಗಾಗಿ ಉತ್ತರಭಾರತ ಕಡೆ ದಸರಾ ಸಮಯದಲ್ಲಿ 10 ದಿನಗಳ ಕಾಲ ರಾಮನ ವಿವಿಧ ಘಟನೆಗಳನ್ನು ವಿವರಿಸುವ ರಾಮಲೀಲಾ ಕಥನ ನಡೆಯುತ್ತದೆ. ದಶಮಿಯಂದು ರಾವಣನ ಆಕೃತಿಯನ್ನು ಸುಡಲಾಗುತ್ತದೆ. ದೆಹಲಿಯಲ್ಲಿ ರಾಷ್ಟ್ರೀಯ ಮಹತ್ವ ಇರುವ ಹಬ್ಬ ಎಂಬಂತೆ ಆಚರಿಸಲಾಗುತ್ತದೆ. ರಾಮಲೀಲಾ ಮೈದಾನದಲ್ಲಿ ಈ ಹಬ್ಬಕ್ಕಾಗಿ ಭಾರೀ ಏರ್ಪಾಡು ನಡೆಯುತ್ತದೆ.

ಪಾಂಡವರಿಗೂ ಏನು ಸಂಬಂಧ?
ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸಿ ಒಂದು ವರ್ಷ ಅಜ್ಞಾತವಾಸ ಮುಗಿಸಿದ ದಿನವೇ ವಿಜಯದಶಮಿ. ಪಾಂಡವರು ಒಂದು ವರ್ಷದ ಅಜ್ಞಾತವಾಸವನ್ನು ಮತ್ಸ್ಯದೇಶದಲ್ಲಿ ಕಳೆಯಲು ಮುಂದಾಗುತ್ತಾರೆ. ಈ ದೇಶದ ರಾಜನಾದ ವಿರಾಟನ ಆಸ್ಥಾನದಲ್ಲಿ ಆಗ ಧರ್ಮರಾಜ ಕಂಕಭಟ್ಟನಾದರೆ, ಭೀಮ ಬಾಣಸಿಗನಾದ ವಲಲನಾಗಿ ವೇಷ ಬದಲಾಯಿಸುತ್ತಾರೆ. ಅರ್ಜುನ ಬೃಹನ್ನಳೆಯಾಗಿ ನೃತ್ಯ ಶಿಕ್ಷಕಿಯಾಗಿ ನಕುಲ ಸಹದೇವರು ಅನುಕ್ರಮವಾಗಿ ಅಶ್ವಪಾಲಕ-ಗೋಪಾಲಕರಾದರು. ದ್ರೌಪದಿ ಸೈರಂಧ್ರಿಯಾಗಿ ವಿರಾಟನ ಪತ್ನಿಯಾದ ಸುದೇಷ್ಣೆಯ ಸೇವೆಯಲ್ಲಿ ನಿಂತಳು. ಅಜ್ಞಾತವಾಸದ ಕೊನೆಯಲ್ಲಿ ಕುರುಸೇನೆ ವಿರಾಟನ ರಾಜ್ಯದಲ್ಲಿರುವ ಗೋವುಗಳನ್ನು ಅಪಹರಿಸಿತ್ತು. ಈ ಸಮಯದಲ್ಲಿ ವಿರಾಟನ ಪುತ್ರನಾದ ಉತ್ತರಕುಮಾರ ನಾನು ಕುರುಸೇನೆಯನ್ನು ಸೆದೆ ಬಡಿಯುತ್ತೇನೆ ಎಂದು ಹೇಳಿ ಜಂಬ ಕೊಚ್ಚಿಕೊಂಡು ಯುದ್ಧಕ್ಕೆ ಹೊರಟಿದ್ದ. ಬೃಹನ್ನಳೆಯನ್ನು ಸಾರಥಿಯನ್ನಾಗಿ ಮಾಡಿ ಯುದ್ಧಕ್ಕೆ ಕರೆದುಕೊಂಡು ಹೋದ. ಯುದ್ಧದಲ್ಲಿ ಸೋಲು ಸಮೀಪವಾಗುತ್ತಿದೆ ಎಂದಾಗ  ಉತ್ತರ ಕುಮಾರ ಯುದ್ಧದಿಂದ ಹಿಂದಕ್ಕೆ ಸರಿಯುತ್ತೇನೆ. ದಯವಿಟ್ಟು ಇಲ್ಲಿಂದ ತೆರಳೋಣ ಎಂದು ಹೇಳುತ್ತಾನೆ.  ಈ ವೇಳೆ ಬೃಹನ್ನಳೆ ರೂಪದಲ್ಲಿದ್ದ ಅರ್ಜುನ ಅಜ್ಞಾತವಾಸದ ಸಮಯದಲ್ಲಿ ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದ ಶಸ್ತ್ರಾಸ್ತ್ರವನ್ನು ತೆಗೆದು ವಿರಾಟರಾಜನ ಶತ್ರುಗಳನ್ನು ಸೋಲಿಸುತ್ತಾನೆ. ನವರಾತ್ರಿ ಹಬ್ಬ ಮುಗಿಸಿ ದಶಮಿಯಂದು ಕುರುಸೇನೆಯನ್ನು ವಿರಾಟ ಸೇನೆ ಸೋಲಿಸುತ್ತದೆ. ಈ ವಿಜಯದ ಕುರುಹಾಗಿ ಒಂಭತ್ತನೇ ದಿನ ಆಯುಧ ಪೂಜೆಯನ್ನು ಆಚರಿಸಲಾಗುತ್ತದೆ.

ಕಲಿಯುಗದಲ್ಲೂ ಆಚರಣೆ:
ನವಮಿಯಂದು ಆಯುಧಗಳಿಗೆ ಪೂಜೆ ಮಾಡಿ ದಶಮಿಯಂದು ದಂಡಯಾತ್ರೆಗೆ ಹೊರಟರೆ ವಿಜಯ ಸಿದ್ಧಿ ಎನ್ನುವ ನಂಬಿಕೆ ಈ ಹಿಂದೆ ರಾಜರಲ್ಲಿತ್ತು. ಹೀಗಾಗಿ ದಶಮಿಯಂದೇ ಪೂಜೆ ಸಲ್ಲಿಸಿ ದಂಡಯಾತ್ರೆಗೆ ಹೊರಡುತ್ತಿದ್ದರು. ಈ ಪದ್ದತಿ ಈಗಲೂ ಉಳಿದುಕೊಂಡಿದ್ದು, ಸಾಂಕೇತಿಕವಾಗಿ ಕೆಲ ರಾಜವಂಶಸ್ಥರು ಸಾಂಕೇತಿಕವಾಗಿ ತಮ್ಮ ರಾಜ್ಯದ ಗಡಿಯನ್ನು ದಾಟಿ ಮತ್ತೆ ಹಿಂದಿರುಗುತ್ತಾರೆ. ವಿಜಯನಗರಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ಈ ಸೀಮೋಲ್ಲಂಘನ ಮೈಸೂರಿನ ಒಡೆಯರ ಕಾಲದಲ್ಲಿ ಮುಂದುವರಿದಿದೆ.

TAGGED:DasaraMahabahartahRamayanaVijayadashamiದಸರಮಹಾಭಾರತರಾಮಾಯಣವಿಜಯದಶಮಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
9 minutes ago
CT Ravi
Districts

ಒಂದಿಲ್ಲೊಂದು ಕೆಟ್ಟ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ ಸುದ್ದಿಯಲ್ಲಿದೆ: ಸಿ.ಟಿ ರವಿ

Public TV
By Public TV
38 minutes ago
Virat Kohli And Mr Nags
Bengaluru City

ನಾನು ವಿದೇಶಿ ಆಟಗಾರನಾ? – ಕಾಲೆಳೆದ ಮಿಸ್ಟರ್‌ ನಾಗ್ಸ್‌ ಬುಡಕ್ಕೆ ಬೆಂಕಿಯಿಟ್ಟ ಕೊಹ್ಲಿ; ವಿಡಿಯೋ ಫುಲ್‌ ವೈರಲ್‌

Public TV
By Public TV
54 minutes ago
Thawar Chand Gehlot Narayana Gowda
Bengaluru City

ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಕಿಡಿ

Public TV
By Public TV
55 minutes ago
HD Kumaraswamy
Districts

ಆಟೋ ಚಾಲಕರಿಗೆ ಸಮಸ್ಯೆ; ಈ ಸಮಸ್ಯೆ ನಾವ್ಯಾರು ಬಯಸಿ ಬಂದಿರೋದಲ್ಲ: ಹೆಚ್‌ಡಿಕೆ

Public TV
By Public TV
1 hour ago
Hubballi Love Jihad Case 1
Crime

ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?