– ಹುಲಿವೇಷ ತಂಡಕ್ಕೆ 2 ಲಕ್ಷ ರೂ. ಬಹುಮಾನ ಘೋಷಿಸಿದ ಝೈದ್ ಖಾನ್
ಮಂಗಳೂರಿನಲ್ಲಿ ದಸರಾ (Mangaluru Dasara) ಹಿನ್ನೆಲೆ ಮಿಥುನ್ ರೈ ಅವರು ಆಯೋಜಿಸಿದ್ದ `ಪಿಲಿನಲಿಕೆ’ (Pilinalike) ಕಾರ್ಯಕ್ರಮಕ್ಕೆ ಅದ್ದೂರಿಯಾಗಿ ತೆರೆದಿದ್ದು, ಕಾರ್ಯಕ್ರಮಕ್ಕೆ ನಟ ಕಿಚ್ಚ ಸುದೀಪ್ (Kiccha Sudeep), ಬಾಲಿವುಡ್ ನಟಿ ಪೂಜಾ ಹೆಗ್ಡೆ, ಕ್ರಿಕೆಟಿಗ ಜಿತೇಶ್ ಶರ್ಮಾ ಸೇರಿ ಸೆಲೆಬ್ರಿಟಿಗಳ ದಂಡೇ ಆಗಮಿಸಿತ್ತು.
ದಸರಾ ಹಿನ್ನೆಲೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅನೇಕ ತಂಡಗಳು ಹುಲಿಕುಣಿತ ಮಾಡಿತ್ತು. ಈ ಕಲಾವಿದರಾದ ಕಿಚ್ಚ ಸುದೀಪ್, ಸುನೀಲ್ ಶೆಟ್ಟಿ, ಝೈದ್ ಖಾನ್, ಪೂಜಾ ಹೆಗ್ಡೆ, ಕ್ರಿಕೆಟಿಗ ಅಜಿಂಕ್ಯ ರಹಾನೆ, ಜಿತೇಶ್ ಶರ್ಮ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಅಖಂಡ 2 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ : ಬಾಲಯ್ಯ ನಟನೆಯ ಸಿನಿಮಾ
ಕಾರ್ಯಕ್ರಮದಲ್ಲಿ ಒಂದು ತಂಡದ ನೃತ್ಯವನ್ನು ವೀಕ್ಷಿಸಿ ಬಹಳ ಸಂತೋಷಪಟ್ಟ ನಟ ಝೈದ್ ಖಾನ್ ಸ್ಥಳದಲ್ಲೇ ಆ ತಂಡಕ್ಕೆ 2 ಲಕ್ಷ ರೂ. ಬಹುಮಾನವನ್ನು ಘೋಷಣೆ ಮಾಡುವ ಮೂಲಕ ಹುಲಿಕುಣಿತಕ್ಕೆ ಪ್ರೋತ್ಸಾಹ ನೀಡಿದರು. ಇದನ್ನೂ ಓದಿ: ಕೊತ್ತಲವಾಡಿ ನಿರ್ದೇಶಕರ ಜೊತೆಗೆ ಪುಷ್ಪಮ್ಮ ಮತ್ತೊಂದು ಸಿನಿಮಾ
ತುಂಬಾ ಸೊಗಸಾಗಿ ಹುಲಿನೃತ್ಯ ಮಾಡಿದ ಹುಡುಗನ ಪ್ರತಿಭೆಗೆ ಮನಸೋತ ಝೈದ್ ಖಾನ್, ಆತನಿಗೆ 50,000 ರೂ. ಹಣ ನೀಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು. ಪ್ರಸ್ತುತ ಝೈದ್ ಖಾನ್ ಅವರು ನಾಯಕನಾಗಿ ನಟಿಸುತ್ತಿರುವ `ಕಲ್ಟ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ, ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಪ್ರೇಕ್ಷಕರ ಮನ ಗೆದ್ದಿದೆ.