ಶಿವಮೊಗ್ಗ: ನಗರದಲ್ಲಿ (Shivamogga) ದಸರಾ (Dasara) ಜಂಬೂ ಸವಾರಿ ಆರಂಭಗೊಂಡಿದೆ. ಜಂಬೂ ಸವಾರಿಗೆ (Jamboo Savari) ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ನಾಡದೇವಿ ಚಾಮುಂಡೇಶ್ವರಿಯನ್ನು ಬೆಳ್ಳಿ ಅಂಬಾರಿಯಲ್ಲಿ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಸಾಗಿತು.
ಇದಕ್ಕೂ ಮೊದಲು ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಕೋಲಿಗೆ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪೂಜೆ ಸಲ್ಲಿಸಿದರು. ಬಳಿಕ ದೇವಿಗೆ ಪುಷ್ಪ ನಮನ ಸಲ್ಲಿಸಿದರು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ
ಈ ಬಗ್ಗೆ ಮಾತನಾಡಿದ ಸಚಿವರು, ಉಸ್ತುವಾರಿ ಸಚಿವನಾಗಿ ಇದು ಮೂರನೇ ವರ್ಷದ ದಸರಾದಲ್ಲಿ ಭಾಗವಹಿಸುತ್ತಿದ್ದೇನೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ಕಲ್ಯಾಣ ಕರ್ನಾಟಕ ದಸರಾ ಎಂದೇ ಖ್ಯಾತಿಯಾದ ಹೇಮಗುಡ್ಡದಲ್ಲಿ ರಂಗೇರಿದ ಜಂಬೂಸವಾರಿ