ವಿಜಯದಶಮಿಯ ಪ್ರಮುಖ ಆಕರ್ಷಣೆ, ಮೈಸೂರು ದಸರಾದ ವಿಶ್ವವಿಖ್ಯಾತ ಜಂಬೂಸವಾರಿ ಅದ್ಧೂರಿಯಾಗಿ ನಡೆದಿದೆ. 750 ಕೆಜಿ ತೂಕದ ಬಂಗಾರ ಅಂಬಾರಿಯನ್ನು 6ನೇ ಬಾರಿ ಹೊತ್ತ ಕ್ಯಾಪ್ಟನ್ ಅಭಿಮನ್ಯು ಗಂಭೀರವಾಗಿ ಹೆಜ್ಜೆ ಹಾಕಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾದ ಕಾವೇರಿ, ರೂಪ ಜೊತೆಗಿದ್ದವು. ಸಂಜೆ 4:42ರಿಂದ 5:06 ಗಂಟೆಯ ಕುಂಭಲಗ್ನದಲ್ಲಿ ತಾಯಿ ಚಾಮುಂಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಜಂಬೂ ಸವಾರಿಗೆ ಚಾಲನೆ ನೀಡಿದರು.
ಜಂಬೂಸವಾರಿಗೆ ಚಾಲನೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ
ಜಂಬೂಸವಾರಿ ವೀಕ್ಷಿಸಲು ಅರಮನೆ ಮುಂಭಾಗ ಸೇರಿದ ಜನ
750 ಕೆಜಿ ಚಿನ್ನದ ಅಂಬಾರಿ ಹೊತ್ತು ಸಾಗುತ್ತಿರುವ ಅಭಿಮನ್ಯು
ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ
ದೊಡ್ಡ ಗಡಿಯಾರ ತಿರುವು, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗ ಸೇರಿದ ಜನ
ಅಭಿಮನ್ಯುವಿಗೆ ಸಾಥ್ ನೀಡಿದ ಕಾವೇರಿ, ರೂಪ
ಅಭಿಮಾನಿಗಳಿಗೆ ಕೈ ಬೀಸಿದ ಅಭಿಮನ್ಯು ಮಾವುತ ಜೆ.ಎಸ್.ವಸಂತ
ಜಂಬೂಸವಾರಿ ವೀಕ್ಷಿಸಲು ರಸ್ತೆ ಬದಿಯಲ್ಲಿ ಕಾದು ಕುಳಿತಿರುವ ಜನರು