ಚೆನ್ನೈ: ಚೆನ್ನೈನ (Chennai) ಪೋರೂರ್ (Porur) ಬಳಿ ಅಯ್ಯಪ್ಪಂತಂಗಲ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಗುರು ಪೂಜೆ ಮತ್ತು ವಿಶೇಷ ಶಾಖೆ ತರಬೇತಿ ಅಧಿವೇಶನ ನಡೆಸಿದ 47 ಆರ್ಎಸ್ಎಸ್ (RSS) ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಚೆನ್ನೈ ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ (Tamilisai Soundararajan) ಪೊಲೀಸರ ಕ್ರಮವನ್ನು ಖಂಡಿಸಿದರು. ಅವರು ಹಲವು ವರ್ಷಗಳಿಂದ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಮೈದಾನದಲ್ಲಿ ಶಾಖೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು. ಆರ್ಎಸ್ಎಸ್ ಸಂಘಟನೆಯ ಶತಮಾನೋತ್ಸವ ಸಂದರ್ಭದಲ್ಲಿ ಈ ಬಂಧನ ನಡೆದಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದವಳು 2 ವರ್ಷದ ಬಳಿಕ ಪ್ರತ್ಯಕ್ಷ – ಕಾನೂನು ಕುಣಿಕೆಯಿಂದ ಪತಿ, ಅತ್ತೆ, ಮಾವ ಪಾರು!
ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರವನ್ನು ಸೌಂದರರಾಜನ್ ಟೀಕಿಸಿ, ದಿನನಿತ್ಯದ ಸಾಮಾಜಿಕ ವಿರೋಧಿ ಚಟುವಟಿಕೆಗಳನ್ನು ಕಡೆಗಣಿಸಲಾಗಿದ್ದರೂ, ರಾಷ್ಟ್ರೀಯ, ಸಾಂಪ್ರದಾಯಿಕ, ಆಧ್ಯಾತ್ಮಿಕ ಮತ್ತು ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೊಟಕುಗೊಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ‘ಬಂಧನವು ಅತ್ಯಂತ ಖಂಡನೀಯ ಮತ್ತು ಪ್ರಜಾಪ್ರಭುತ್ವ ವಿರೋಧಿ ಎಂದು ಅವರು ಕರೆದಿದ್ದು, ಬಂಧಿತರನ್ನು ತಕ್ಷಣ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಹೊನ್ನಾವರ | ಮನೆಕೆಲಸದಾಕೆ ಮುಂದೆ ಬೆತ್ತಲಾಗಿ ಓಡಾಟ, ಸೆಕ್ಸ್ಗೆ ಒತ್ತಾಯ – ಮಾಲೀಕನ ವಿರುದ್ಧ ಎಫ್ಐಆರ್
ತಮಿಳುನಾಡಿನಲ್ಲಿ, ಎಂಕೆ ಸ್ಟಾಲಿನ್ ಸರ್ಕಾರವು ದಿನನಿತ್ಯದ ಸಾಮಾಜಿಕ ವಿರೋಧಿ ಚಟುವಟಿಕೆಗಳನ್ನು, ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದನ್ನು ನೋಡದೆ ಕಣ್ಣು ಮುಚ್ಚಿಕೊಂಡಿದೆ. ಆದರೆ, ರಾಷ್ಟ್ರೀಯ, ಸಾಂಪ್ರದಾಯಿಕ, ಆಧ್ಯಾತ್ಮಿಕ ಮತ್ತು ದೇಶಭಕ್ತಿಯ ಸಾಂಸ್ಕೃತಿಕ ಚಟುವಟಿಕೆಗಳನ್ನು ಮೊಟಕುಗೊಳಿಸಲಾಗಿದೆ. ಇದು ಡಿಎಂಕೆಯ ರಾಷ್ಟ್ರ ವಿರೋಧಿ ಮನಸ್ಥಿತಿಯನ್ನು ಸ್ಪಷ್ಟವಾಗಿ ಬಹಿರಂಗಪಡಿಸುತ್ತದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಶೇ.1ರಷ್ಟು ಮೀಸಲಾತಿಗೆ ಆಗ್ರಹ – ದೆಹಲಿಯ ಜಂತರ್ ಮಂತರ್ನಲ್ಲಿ ಅಲೆಮಾರಿ ಸಮುದಾಯದಿಂದ ಪ್ರತಿಭಟನೆ