Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಕಾಂತಾರ ನಮ್ಮ ಗ್ರಹಿಕೆಯನ್ನು ಮೀರಿದ್ದು- ಹೊಗಳಿ ವೀಕ್ಷಿಸುವಂತೆ ಕನ್ನಡಿಗರಲ್ಲಿ ನಾರಾಯಣ ಗೌಡ ಮನವಿ

Public TV
Last updated: October 5, 2025 2:32 pm
Public TV
Share
4 Min Read
Narayana Gowda appeals to Kannadigas to praise and watch Kantara Chapter 1
SHARE

– ರಿಷಭ್‌ರನ್ನು ಎಷ್ಟು ಅಭಿನಂದಿಸಿದರೂ ಕಡಿಮೆಯೇ
– ವಿಜಯ್ ಕಿರಗಂದೂರು ಕನ್ನಡ ಚಿತ್ರರಂಗಕ್ಕೆ ಒದಗಿ ಬಂದ ಆಪತ್ಪಾಂಧವ

ಬೆಂಗಳೂರು: ನಿನ್ನೆ ನನ್ನ ಕುಟುಂಬದವರು, ಕರವೇ ಮುಖಂಡರೊಂದಿಗೆ ಕಾಂತಾರ ಚಾಪ್ಟರ್-1 (Kantara: Chapter 1) ಸಿನಿಮಾ ನೋಡಿದೆ. ಸಿನಿಮಾ ನೋಡಿದೆ ಅನ್ನುವುದಕ್ಕಿಂತ ಅನುಭವಿಸಿದೆ ಎಂದು ಹೇಳಿದರೆ ಸರಿಯಾಗುತ್ತದೆ. ಕಾಂತಾರ ಒಂದು ಅನುಭವ, ಸಿನಿಮಾವನ್ನು ಮೀರಿದ ಅದ್ಭುತ ಕಾಣ್ಕೆ. ಇದನ್ನು ಪದಗಳಲ್ಲಿ ವಿವರಿಸಿ ಹೇಳಲಾಗದು. ಕಾಂತಾರ ನಮ್ಮ ಎಣಿಕೆಯನ್ನು, ಗ್ರಹಿಕೆಯನ್ನು ಮೀರಿದ್ದು. ಒಂದು ಸಿನಿಮಾ ನೋಡುಗರಲ್ಲಿ ಇಷ್ಟು ಭಾವತೀವ್ರತೆಯನ್ನು ಉಂಟುಮಾಡಬಹುದು ಎಂಬುದೇ ವಿಸ್ಮಯ ಎಂದು ಕರ್ನಾಟಕ ರಕ್ಷಣಾ ವೇದಿಕೆ (KaRave) ರಾಜ್ಯಾಧ್ಯಕ್ಷ ನಾರಾಯಣ ಗೌಡ (Narayana Gowda) ಹಾಡಿ ಹೊಗಳಿದ್ದಾರೆ.

ರಿಷಬ್ ಶೆಟ್ಟಿ (Rishab Shetty) ತಮ್ಮ ನಿರ್ದೇಶನ, ನಟನೆಯಲ್ಲಿ ಭಾರತ ಚಿತ್ರರಂಗದಲ್ಲಿ ಒಂದು ಹೊಸ ಮಾರ್ಗವನ್ನೇ ಸೃಷ್ಟಿಸಿದ್ದಾರೆ. ಕಣ್ಣು, ಕಿವಿ ಮಾತ್ರವಲ್ಲ, ನಮ್ಮ ಇಡೀ ಅಂತರಾತ್ಮವೇ ಸಿನಿಮಾವನ್ನು ಅನುಭವಿಸುತ್ತ, ಒಂದು ಅಲೌಕಿಕ, ಮಾಂತ್ರಿಕ ಜಗತ್ತಿಗೆ ಕೊಂಡೊಯ್ಯುವಂಥ ಮಾಯಾಜಾಲವನ್ನು ಸೃಷ್ಟಿಸಿದ್ದಾರೆ. ಒಂದು ಸಿನಿಮಾವನ್ನು ಹೀಗೂ ಮಾಡಬಹುದಾ ಎಂಬ ಬೆರಗನ್ನು ಮೂಡಿಸುತ್ತಲೇ ಸಿನಿಮಾ ನಿರ್ದೇಶಕರಿಗೆ ಒಂದು ಹೊಸ ದಾರಿಯನ್ನು ತೋರಿದ್ದಾರೆ. ಇಂಥ ಪವಾಡಗಳು ಪದೇಪದೇ ನಡೆಯುವುದಿಲ್ಲ. ಇದಕ್ಕಾಗಿ ರಿಷಬ್ ಶೆಟ್ಟಿ ಅವರನ್ನು ಎಷ್ಟು ಅಭಿನಂದಿಸಿದರೂ ಕಡಿಮೆಯೇ. ಇಂಥ ಅನುಭವವನ್ನು ಕೊಟ್ಟಿದ್ದಕ್ಕಾಗಿ ಅವರಿಗೆ ಕನ್ನಡ ಜನತೆಯ ಪರವಾಗಿ ಪ್ರೀತಿಯ ಹಾರೈಕೆಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿನಂದಿಸಿದ್ದಾರೆ. ಇದನ್ನೂ ಓದಿ: ಭಾನುವಾರವೂ ಹೌಸ್‌ಫುಲ್‌ – ಬೆಂಗಳೂರಿನಲ್ಲಿ ದಾಖಲೆ ಬರೆದ ಕಾಂತಾರ

 

ನಿನ್ನೆ ನನ್ನ ಕುಟುಂಬದವರು, ಕರವೇ ಮುಖಂಡರೊಂದಿಗೆ ಕಾಂತಾರ ಚಾಪ್ಟರ್-1 ಸಿನಿಮಾ ನೋಡಿದೆ. ಸಿನಿಮಾ ನೋಡಿದೆ ಅನ್ನುವುದಕ್ಕಿಂತ ಅನುಭವಿಸಿದೆ ಎಂದು ಹೇಳಿದರೆ ಸರಿಯಾಗುತ್ತದೆ. ಕಾಂತಾರ ಒಂದು ಅನುಭವ, ಸಿನಿಮಾವನ್ನು ಮೀರಿದ ಅದ್ಭುತ ಕಾಣ್ಕೆ. ಇದನ್ನು ಪದಗಳಲ್ಲಿ ವಿವರಿಸಿ ಹೇಳಲಾಗದು. ಕಾಂತಾರ ನಮ್ಮ ಎಣಿಕೆಯನ್ನು, ಗ್ರಹಿಕೆಯನ್ನು ಮೀರಿದ್ದು. ಒಂದು… pic.twitter.com/GZU048qCKR

— ನಾರಾಯಣಗೌಡ್ರು.ಟಿ.ಎ | ‌Narayanagowdru T.A. (@narayanagowdru) October 5, 2025

ಪೋಸ್ಟ್‌ನಲ್ಲಿ ಏನಿದೆ?
ಕರ್ನಾಟಕದ (Karnataka) ನೆಲಮೂಲದ ಕಥೆಗಳನ್ನು ಒಂದಕ್ಕೊಂದು ಪೋಣಿಸಿ, ಅದನ್ನು ಒಂದು ಸಿನಿಮಾ ರೂಪಕ್ಕೆ ತರುವಾಗಿನ ಶ್ರದ್ಧೆ, ಕುಶಲತೆ ಕಾಂತಾರದ ಮೂಲಬಂಡವಾಳ. ಹೇಳಬೇಕಾಗಿದ್ದನ್ನು ಅಚ್ಚುಕಟ್ಟಾಗಿ ಹೇಳುವ ಪ್ರಾಮಾಣಿಕತೆಯೇ ಇಲ್ಲಿ ಗೆದ್ದಿದೆ. ಸಿನಿಮಾಗಾಗಿ ಸುರಿದಿರುವ ಹಣ, ತಾಂತ್ರಿಕ ಕೌಶಲ್ಯ ಇತ್ಯಾದಿಗಳು ಈ ಪ್ರಾಮಾಣಿಕತೆಯ ಅಡಿಪಾಯದ ಮೇಲೆಯೇ ಅರಳಿಕೊಡಿವೆ. ಅದ್ದೂರಿ ದೃಶ್ಯವೈಭವಗಳ ನಡುವೆಯೂ ಕಾಂತಾರದ ಅಂತರಾತ್ಮ ಎಲ್ಲೂ ಮುಕ್ಕಾಗದಂತೆ ನೋಡಿಕೊಂಡಿರುವುದು ನಿಜವಾದ ಯಶಸ್ಸು.

ರಿಷಬ್ ಶೆಟ್ಟಿ ನಾನು ಗಮನಿಸಿದಂತೆ ಅಪಾರವಾದ ಕನ್ನಡ ಪ್ರೀತಿಯನ್ನು ಹೊಂದಿರುವ ಕಲಾವಿದ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಸಿನಿಮಾದ ಮೂಲಕವೇ ಅವರು ತಮ್ಮ ಕನ್ನಡಪ್ರೇಮವನ್ನು ಅವರು ತೋರಿದ್ದರು. ಕಾಂತಾರದ ಮೂಲಕ ಅವರು ಕನ್ನಡ ಚಿತ್ರರಂಗವನ್ನು ಭಾರತೀಯ ಚಿತ್ರರಂಗದ ಮುಂಚೂಣಿಗೆ ತಂದುನಿಲ್ಲಿಸಿದ್ದಾರೆ. ಬೇರೆ ಬೇರೆ ಚಿತ್ರರಂಗದ ನಿರ್ದೇಶಕರು, ತಂತ್ರಜ್ಞರು, ಕಲಾವಿದರು ಕಾಂತಾರವನ್ನು ಕಣ್ತುಂಬಿಕೊಂಡು ಶ್ಲಾಘಿಸುತ್ತಿದ್ದಾರೆ. ಇದಲ್ಲವೇ ನಿಜವಾದ ಕನ್ನಡಸೇವೆ? ಇದಲ್ಲವೇ ನಮ್ಮತನವನ್ನು ಜಗತ್ತಿಗೆ ಹರಡುವ ಸಾಧನೆ? ಇದನ್ನೂ ಓದಿ: ಕೇರಳದಲ್ಲಿ ‌ಕಾಂತಾರ ಭರ್ಜರಿ ಪ್ರದರ್ಶನ – ಅತಿ ಹೆಚ್ಚು ಗಳಿಕೆ ಮಾಡಿದ 2ನೇ ಕನ್ನಡ ಸಿನಿಮಾ ದಾಖಲೆ

 

ಗೆಳೆಯ ವಿಜಯ್ ಕಿರಗಂದೂರು ಕನ್ನಡ ಚಿತ್ರರಂಗಕ್ಕೆ ಒದಗಿ ಬಂದ ಆಪತ್ಪಾಂಧವ. ಕನ್ನಡ ಸಿನಿಮಾದ ಹಿರಿಮೆಯನ್ನು ಗಡಿಗಳಾಚೆಗೆ ದಾಟಿಸಿದ ಮಹಾಸಾಹಸಿ. ಎಷ್ಟೇ ಪ್ರತಿಭಾವಂತ ಕಲಾವಿದರು/ತಂತ್ರಜ್ಞರು ಇದ್ದರೂ ಅವರ ಬೆನ್ನಿಗೆ ನಿಂತು, ಅವರನ್ನು ನಂಬಿ ಕೋಟಿಗಟ್ಟಲೆ ಹಣ ಹೂಡಿ ಸಿನಿಮಾ ಮಾಡುವವರು ಇಲ್ಲದೇ ಇದ್ದರೆ ಕೆಜಿಎಫ್, ಕಾಂತಾರದಂಥ ಇತಿಹಾಸ ನಿರ್ಮಾಣವಾಗುವುದಿಲ್ಲ. ವಿಜಯ್ ಕಿರಗಂದೂರು ಸವಾಲುಗಳನ್ನು ಸ್ವೀಕರಿಸಲು ಯಾವತ್ತೂ ಹಿಂಜರಿಯಲಿಲ್ಲ. ಕನ್ನಡದ ಪ್ರತಿಭೆಗಳ ಬೆನ್ನಿಗೆ ನಿಂತರು. ಅವರ ಕನಸುಗಳಿಗೆ ನೀರೆರೆದು ಪೋಷಿಸಿದರು.

ವಿಜಯ್ ಕಿರಗಂದೂರು ಕೂಡ ಅಪ್ಪಟ ಕನ್ನಡಾಭಿಮಾನಿ. ಸಿನಿಮಾ ಒಂದು ಉದ್ಯಮ ಎಂಬುದು ಎಷ್ಟು ನಿಜವೋ ಲಾಭ ನಷ್ಟಗಳಿಂದಾಚೆ ಬಂಡವಾಳ ಹೂಡುವವರ ಮನೋಧರ್ಮವನ್ನೂ ಕೂಡ ಅದು ಹೇಳುತ್ತದೆ. ಕನ್ನಡ ಸಿನಿಮಾ ಕುರಿತು ಜಗತ್ತು ಮಾತಾಡುವಂತೆ ಮಾಡಿದ ವಿಜಯ್ ಕಿರಗಂದೂರ್‌ ನಿಜಕ್ಕೂ ಅಭಿನಂದನೆಗೆ ಅರ್ಹರು. ಅವರ ಯಶೋಗಾಥೆ ಇದೇ ರೀತಿ ಮುಂದುವರೆಯುತ್ತಲೇ ಹೋಗಲಿ ಎಂದು ಹಾರೈಸುತ್ತೇನೆ.

ವಿಜಯ್, ರಿಷಬ್ ಅವರು ಮುಂಬರುವ ದಿನಗಳಲ್ಲಿ ಕಾಂತಾರದಂಥ ಹತ್ತಾರು ಸಿನಿಮಾಗಳನ್ನು ಕೊಟ್ಟು ಕನ್ನಡ ಚಿತ್ರರಂಗವನ್ನು ಬೆಳೆಸಲಿ, ಕನ್ನಡದ ಕೀರ್ತಿಯನ್ನು ಜಗತ್ತಿನಾದ್ಯಂತ ಹರಡಲಿ ಎಂದು ಮನದುಂಬಿ ಹಾರೈಸುವೆ.

ಕಾಂತಾರ ಚಾಪ್ಟರ್ -1 ರಲ್ಲಿ ಕೆಲಸ ಮಾಡಿದ ಎಲ್ಲ ತಂತ್ರಜ್ಞರು, ಕಲಾವಿದರು, ಕಾರ್ಮಿಕರಿಗೆ ಈ ಮಹಾಯಶಸ್ಸಿನ ಪಾಲು ಸಲ್ಲಲೇಬೇಕು. ಅವರೆಲ್ಲರ ಸಮರ್ಪಣಾಭಾವದಿಂದಲೇ ಇದು ಇಷ್ಟು ದೊಡ್ಡದಾಗಿ ಬೆಳೆದಿದೆ. ಇಡೀ ಚಿತ್ರತಂಡವನ್ನು ನಾವು ಪ್ರೀತಿಯಿಂದ ಅಭಿನಂದಿಸುತ್ತೇನೆ.

ನಿಸ್ಸಂಶಯವಾಗಿ ಕಾಂತಾರ ಚಾಪ್ಟರ್ -1 ಕನ್ನಡದ ಶ್ರೇಷ್ಠ ಚಿತ್ರಗಳಲ್ಲಿ ಒಂದು. ಇದನ್ನು ಚಿತ್ರಮಂದಿರಗಳಲ್ಲೇ ನೋಡಿ ಅನುಭವಿಸಬೇಕು. ಹೀಗಾಗಿ ನನ್ನೆಲ್ಲ ಕಾರ್ಯಕರ್ತರೂ ತಪ್ಪದೇ ಚಿತ್ರವನ್ನು ವೀಕ್ಷಿಸಿ ಬೆಂಬಲಿಸಬೇಕು ಎಂದು ಕೋರುವೆ. ಅಷ್ಟು ಮಾತ್ರವಲ್ಲ ಪೈರೆಸಿಯಂಥದ್ದು ಎಲ್ಲಾದರೂ ಕಂಡುಬಂದರೆ ಕೂಡಲೇ ಅದನ್ನು ಚಿತ್ರತಂಡದ, ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ವಿನಂತಿಸುವೆ. ಕಾಂತಾರ ಕನ್ನಡವನ್ನು ಗೆಲ್ಲಿಸಿದೆ, ಕಾಂತಾರಕ್ಕೆ ಅಭೂತಪೂರ್ವ ಗೆಲುವು ಕೊಡುವುದು ನಮ್ಮ ಕರ್ತವ್ಯ.

TAGGED:KantaraKantara Chapter 1Naryana Gowdarishab shettyಕಾಂತಾರನಾರಾಯಣ ಗೌಡರಿಷಭ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Dharmam
ಧರ್ಮಂ ಟ್ರೈಲರ್ ಮೆಚ್ಚಿ ಸಾಥ್ ಕೊಟ್ಟ ಕಾಟೇರ ನಿರ್ದೇಶಕ
Cinema Latest Sandalwood Top Stories
Risha Gowda Gilli Nata
ರಿಷಾ ಪ್ರಕಾರ ಬಿಗ್‌ಬಾಸ್ ಟಾಪ್ 5 ಸ್ಪರ್ಧಿಗಳು ಇವರು!
Cinema Latest Top Stories TV Shows
Celina Jaitly
ಪತಿ ವಿರುದ್ಧ ಕೇಸ್ ದಾಖಲಿಸಿ 50 ಕೋಟಿ ಪರಿಹಾರ ಕೇಳಿದ `ಶ್ರೀಮತಿ’ ನಟಿ!
Cinema Latest Top Stories
gilli vs rajat
ಎಲ್ಲರ ಹತ್ರ ಮಾತಾಡ್ದಂಗೆ ನನ್‌ ಹತ್ರ ಮಾತಾಡ್ಬೇಡ: ಗಿಲ್ಲಿ ಮೇಲೆ ರಜತ್‌ ಗರಂ ಆಗಿದ್ಯಾಕೆ?
Cinema Latest Main Post TV Shows

You Might Also Like

Mahantesh Bilagi
Belgaum

ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ದುರ್ಮರಣ – ಇಂದು ಹುಟ್ಟೂರಲ್ಲಿ ಅಂತ್ಯಕ್ರಿಯೆ

Public TV
By Public TV
14 minutes ago
Haveri Fire
Crime

ಹಾವೇರಿ | ಶಾರ್ಟ್ ಸರ್ಕ್ಯೂಟ್‌ನಿಂದ 2 ಮೊಬೈಲ್‌ ಮಳಿಗೆಗಳು ಸುಟ್ಟು ಭಸ್ಮ

Public TV
By Public TV
21 minutes ago
Norway couple gets married according to Hindu traditions in Gokarna
Districts

ಗೋಕರ್ಣದಲ್ಲಿ ಹಿಂದೂ ಸಂಪ್ರದಾಯದಂತೆ ಹಸೆಮಣೆ ಏರಿದ ವಿದೇಶಿ ಜೋಡಿಗಳು

Public TV
By Public TV
9 hours ago
Mamata Banerjee
Latest

ಬಂಗಾಳದ ಜನರ ಮೇಲೆ ದಾಳಿ ಮಾಡಿದರೆ ಇಡೀ ರಾಷ್ಟ್ರವನ್ನು ನಡುಗಿಸುತ್ತೇನೆ: ಮಮತಾ ಗುಡುಗು

Public TV
By Public TV
9 hours ago
Narendra Modi Road Show
Latest

ನ. 28ರಂದು ಉಡುಪಿ ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ಮೋದಿ ರೋಡ್ ಶೋ

Public TV
By Public TV
9 hours ago
Siddaramaiah 6
Bengaluru City

ಮಹಾಂತೇಶ್ ಬೀಳಗಿ ನಿಧನಕ್ಕೆ ಸಿಎಂ ಸೇರಿ ರಾಜಕೀಯ ಗಣ್ಯರ ಸಂತಾಪ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?